ನಾನು ಇರುವವರೆಗೂ ಅಭಿಷೇಕ್ ಅಂಬರೀಶ್ ರಾಜಕೀಯಕ್ಕೆ ಬರಲ್ಲ, ಇದು ಸತ್ಯ: ಮಂಡ್ಯ ಸಂಸದೆ ಸುಮಲತಾ ಹೇಳಿದ್ದೇನು?
ಮಂಡ್ಯ, ಮಾರ್ಚ್ 10: ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ವೇ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಭಾನುವಾರ ಭೇಟಿ ನೀಡಲಿದ್ದಾರೆ. ಇದಕ್ಕೂ ಮುನ್ನ, ಅಂದರೆ ಶುಕ್ರವಾರ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಭಾರತೀಯ ಜನತಾ ಪಕ್ಷಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ಮುಂಬರವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಅವರು ಸ್ಪಷ್ಟಪಡಿಸಿದರು.
ಪ್ರಧಾನಿ ಮೋದಿ ಅವರು ಭಾರತಕ್ಕೆ ತಂದುಕೊಟ್ಟಿರುವ ಗಣತೆ ಹಾಗೂ ಜಗತ್ತಿನಾದ್ಯಂತ ದೇಶವು ಗಳಿಸಿದ ಖ್ಯಾತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸುಮಲತಾ ಹೇಳಿದರು.

ಲೋಕಸಭೆಯಲ್ಲಿ ಮಂಡ್ಯ ಕ್ಷೇತ್ರವನ್ನು ಪ್ರತಿನಿಧಿಸುವ ಸುಮಲತಾ ಅವರು ತಾವು ಇರುವವರೆಗೂ ತಮ್ಮ ಮಗ ಅಭಿಷೇಕ್ ರಾಜಕೀಯಕ್ಕೆ ಬರುವುದಿಲ್ಲ ಎಂದು ಭರವಸೆ ನೀಡಿದರು. ಅವರು ಕುಟುಂಬ ರಾಜಕಾರಣದ ವಿರುದ್ಧವಾಗಿದ್ದಾರೆಂದು ತಿಳಿಸಿದರು.
'ನನ್ನ ಹಿತೈಷಿಗಳು ಮತ್ತು ಬೆಂಬಲಿಗರನ್ನು ಸಂಪರ್ಕಿಸಿದ ನಂತರ, ನಾನು ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಈ ದಿನದಿಂದ ನಾನು ಕೇಂದ್ರದ ನರೇಂದ್ರ ಮೋದಿ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತೇನೆ' ಎಂದು ಹೇಳಿದರು.
ಪಕ್ಷೇತರ ಸಂಸದೆಯಾಗಿ ನಾಲ್ಕು ವರ್ಷಗಳಲ್ಲಿ ಹಲವಾರು ಸವಾಲುಗಳನ್ನು ಎದುರಿಸಿದೆ. ವಿಶೇಷವಾಗಿ ಸಾರ್ವಜನಿಕ ಸಭೆಗಳನ್ನು ನಡೆಸುವಲ್ಲಿ ಅಡೆತಡೆಗಳನ್ನು ಎದುರಿಸಿದ್ದೇನೆ. ನನಗೆ ಪಕ್ಷವೊಂದರ ಬೆಂಬಲದ ಅಗತ್ಯವಿದೆ ಎಂದು ಅವರು ತಿಳಿಸಿದರು.

'ಜನರು ತಮ್ಮ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು. ಆದರೆ ಪ್ರಪಂಚದಾದ್ಯಂತ ಮೆಚ್ಚುಗೆ ಪಡೆದಿರುವ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನನಗೆ ನಂಬಿಕೆ ಇದೆ' ಎಂದು ಸುಮಲತಾ ಹೇಳಿದರು.
ಎಕ್ಸ್ಪ್ರೆಸ್ವೇ ಉದ್ಘಾಟನೆಗೆ ದೇಶದ ಪ್ರಧಾನಿ ಮಂಡ್ಯ ಜಿಲ್ಲೆಗೆ ಭೇಟಿ ನೀಡುತ್ತಿರುವುದು ಮಂಡ್ಯಕ್ಕೆ ಸಂದ ಗೌರವ ಎಂದರು.
ಪ್ರಧಾನಿ ಮೋದಿಯವರು ಮೈಸೂರು ಅಥವಾ ಬೆಂಗಳೂರಿನಲ್ಲಿ ಎಕ್ಸ್ಪ್ರೆಸ್ವೇ ಉದ್ಘಾಟನೆ ಮಾಡಬಹುದಿತ್ತು. ಆದರೆ ಅವರು ಮಂಡ್ಯವನ್ನು ಆರಿಸಿಕೊಂಡರು. ಇದು ಜಿಲ್ಲೆಯ ಮಹತ್ವವನ್ನು ತೋರಿಸುತ್ತದೆ ಎಂದು ಸಂಸದರು ಹೇಳಿದರು.

ಮಂಡ್ಯದ ಸರ್ವಾಂಗೀಣ ಅಭಿವೃದ್ಧಿಯ ಉದ್ದೇಶದಿಂದ ಈ ತೀರ್ಮಾನಕ್ಕೆ ಬಂದಿದ್ದೇನೆ ಎಂದು ಸಂಸದರು ಸ್ಪಷ್ಟಪಡಿಸಿದರು.
ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಸುಮಲತಾ ಅವರು ಮಂಡ್ಯವನ್ನು ತಮ್ಮಯ ರಾಜಕೀಕೋಟೆಯನ್ನಾಗಿ ಮಾಡಿಕೊಂಡವರು ಜಿಲ್ಲೆಗೆ ಏನನ್ನೂ ಮಾಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.
'ಮಂಡ್ಯದಲ್ಲಿ ಬದಲಾವಣೆಯ ಅಗತ್ಯವಿದೆ. ಇಲ್ಲಿ ಹೀನಾಯ ವಾತಾವರಣ ನಿರ್ಮಾಣವಾಗಿದೆ. ಮೊದಲು ಇಲ್ಲಿ, ಅಂದರೆ ಮಂಡ್ಯದಲ್ಲಿ 'ಸ್ವಚ್ಛ ಭಾರತ್ ಮಿಷನ್' ನಡೆಸೋಣ ಎಂದು ಸುಮಲತಾ ಹೇಳಿದರು.
ಮೋದಿ ಜಿಲ್ಲೆಗೆ ಭೇಟಿ ನೀಡುವ ಎರಡು ದಿನಗಳ ಮೊದಲು ಸುಮಲತಾ ಈ ನಿರ್ಧಾರಕ್ಕೆ ಬಂದಿದ್ದಾರೆ. 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ಸುಮಲತಾ ಅವರನ್ನು ಬೆಂಬಲಿಸಿತ್ತು. ಇದರ ಪರಿಣಾಮವಾಗಿ ಅವರು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರನ್ನು ಸೋಲಿಸಿದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications