ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಂಗಾಮಿ ಸ್ಪೀಕರ್ ಕೆ.ಜಿ. ಬೋಪಯ್ಯ ನೇಮಕ ಪ್ರಶ್ನಿಸಿ ಸುಪ್ರೀಂಗೆ ಕಾಂಗ್ರೆಸ್

By Sachhidananda Acharya
|
Google Oneindia Kannada News

ಬೆಂಗಳೂರು, ಮೇ 18: ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಕೆಜಿ ಬೋಪಯ್ಯರನ್ನು ರಾಜ್ಯಪಾಲ ವಜೂಭಾಯಿ ವಾಲಾ ನೇಮಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

ಅತ್ಯಂತ ಹಿರಿಯ, 8 ಬಾರಿಯ ಶಾಸಕ ಆರ್. ವಿ. ದೇಶಪಾಂಡೆಯವರನ್ನು ಬದಿಗೊತ್ತಿ 5 ಬಾರಿಯ ಶಾಸಕ ಕೆಜಿ ಬೋಪಯ್ಯರನ್ನು ನೇಮಿಸಿದ್ದಕ್ಕೆ ಕಾಂಗ್ರೆಸ್ ಆಕ್ರೋಶಗೊಂಡಿದ್ದು ಸುಪ್ರೀಂ ಕೋರ್ಟ್ ಈ ಸಂಬಂಧ ದೂರು ನೀಡಲು ನಿರ್ಧರಿಸಿದೆ.

ಶಾ ತಂತ್ರ ಕರ್ನಾಟಕದಲ್ಲಿ ನಡೆಯಲ್ಲ, ನಡೆಯಲೂ ಬಿಡುವುದಿಲ್ಲ: ಸಿದ್ದರಾಮಯ್ಯ ಶಾ ತಂತ್ರ ಕರ್ನಾಟಕದಲ್ಲಿ ನಡೆಯಲ್ಲ, ನಡೆಯಲೂ ಬಿಡುವುದಿಲ್ಲ: ಸಿದ್ದರಾಮಯ್ಯ

ಈ ಸಂಬಂಧ ದೆಹಲಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ನಾಯಕ ಮತ್ತು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, "ಬಿಜೆಪಿ ನಡೆ ನಿಯಮಾವಳಿಗೆ ವಿರುದ್ಧವಾಗಿದೆ. ಸಾಮಾನ್ಯವಾಗಿ ಅತ್ಯಂತ ಹಿರಿಯ ನಾಯಕರು ಈ ಹುದ್ದೆಯನ್ನು ಅಲಂಕರಿಸಬೇಕು," ಎಂದು ಬೋಪಯ್ಯ ನೇಮಕಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Abhishek Manu Singhvi objects KG Bopaiah being appointed as pro-tem speaker

ಹಿರಿಯರು
ಬಿಜೆಪಿಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಮೇಶ್ ಕತ್ತಿ ಮತ್ತು ಕಾಂಗ್ರೆಸಿನ ಆರ್.ವಿ. ದೇಶಪಾಂಡೆ 8ನೇ ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಆದರೆ ಇವರನ್ನೆಲ್ಲಾ ಬದಿಗೊತ್ತಿ ರಾಜ್ಯಪಾಲರು 5 ಬಾರಿ ಶಾಸಕ ಕೆಜಿ ಬೋಪಯ್ಯರನ್ನು ಹಂಗಾಮಿ ಸಭಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

English summary
Karnataka Politics: 'What the BJP has done is against the rule book. Ideally the senior most leader is supposed to hold that position,' said Congress leader and seniour lawyer Abhishek Manu Singhvi, on BJP MLA KG Bopaiah being appointed as pro-tem speaker.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X