ಅಭಿಷೇಕ್ ಅಂಬರೀಷ್ ಬಿಜೆಪಿಗೆ ಸೇರಲಿದ್ದಾರೆ: ನಾರಾಯಣಗೌಡ
ಅಭಿಷೇಕ್ ರಾಜಕೀಯಕ್ಕೆ ಬರುತ್ತಾರೆ ಎಂಬ ನಂಬಿಕೆ ಇದ್ದು, ಈ ನಿಟ್ಟಿನಲ್ಲಿ ಈಗಾಗಲೇ ಚರ್ಚೆಗಳು ನಡೆಯುತ್ತಿವೆ. ಬಿಜೆಪಿಯನ್ನು ಅಪ್ಪಿಕೊಂಡರೆ ಪಕ್ಷಕ್ಕೆ ಲಾಭವಾಗಲಿದೆ ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ.
ಮಂಡ್ಯ, ಜನವರಿ 26: ನಟ, ರಾಜಕಾರಣಿ ದಿವಂಗತ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಸಿ ನಾರಾಯಣ ಗೌಡ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಅಭಿಷೇಕ್ ರಾಜಕೀಯಕ್ಕೆ ಬರುತ್ತಾರೆ ಎಂಬ ನಂಬಿಕೆ ಇದ್ದು, ಈ ನಿಟ್ಟಿನಲ್ಲಿ ಈಗಾಗಲೇ ಚರ್ಚೆಗಳು ನಡೆಯುತ್ತಿವೆ. ಬಿಜೆಪಿಯನ್ನು ಅಪ್ಪಿಕೊಂಡರೆ ಪಕ್ಷಕ್ಕೆ ಲಾಭವಾಗಲಿದೆ, ಮಂಡ್ಯ ಸಂಸದೆ ಸುಮಲತಾ, ತಾಯಿ ಜತೆ ಚರ್ಚೆ ನಡೆಸಿದ್ದೇವೆ. ಬಿಜೆಪಿ ಸೇರುವ ಕುರಿತು ಮಂಡ್ಯದಲ್ಲಿ ಅಭಿಷೇಕ್ ಜತೆ ಚರ್ಚೆ ನಡೆಸಿದ್ದು, ಎರಡು ದಿನಗಳಲ್ಲಿ ಫಲಿತಾಂಶ ಪ್ರಕಟಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಕೃಷ್ಣರಾಜ ಪೇಟೆಯನ್ನು ಪ್ರತಿನಿಧಿಸುವ ಸಚಿವ ನಾರಾಯಣ ಗೌಡ, ಅಂಬರೀಶ್ ಅವರು ಮಂಡ್ಯದವರಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಭಿಷೇಕ್ ಅವರು ಬಿಜೆಪಿ ಟಿಕೆಟ್ನಲ್ಲಿ ಅಲ್ಲಿಂದ ಸ್ಪರ್ಧಿಸಿದರೆ ಪಕ್ಷಕ್ಕೆ ಒಳ್ಳೆಯದು ಎಂದರು.

ಕಳೆದ ವರ್ಷ ಜುಲೈನಲ್ಲಿ ರಾಜಕೀಯ ಪ್ರವೇಶಿಸುವ ಬಗ್ಗೆ ಅಭಿಷೇಕ್ ಅಂಬರೀಷ್ ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ನಿಮ್ಮೆಲ್ಲರನ್ನು ಉದ್ದೇಶಿಸಿ ಮಾತನಾಡಿ ತೆಗೆದುಕೊಳ್ಳುತ್ತೇನೆ. ಯಾರಿಗೂ ಹೇಳಿದೆ ತೆಗೆದುಕೊಳ್ಳುವುದಿಲ್ಲ. ಸದ್ಯಕ್ಕೆ ನನ್ನ ಗಮನ ಚಿತ್ರರಂಗದ ಕಡೆಗೆ. ರಾಜಕೀಯಕ್ಕೆ ಸೇರುವ ಸಂದರ್ಭ ಬಂದಾಗ ಎಲ್ಲರಿಗೂ ಹೇಳಿಯೇ ತೆಗೆದುಕೊಳ್ಳುತ್ತೇನೆ. ಅದಕ್ಕೆಲ್ಲಾ ಸಮಯ ಸಂದರ್ಭ ಬರಬೇಕು ಎಂದು ಹೇಳಿದ್ದರು.
ಆದರೆ ಅವರ ತಾಯಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು, ಬಿಜೆಪಿ ಕಾರ್ಯಕರ್ತರು ನನ್ನ ಪರ ಕೆಲಸ ಮಾಡಿದ್ದಾರೆ. ಬಿಜೆಪಿ ನನಗೆ ಬೆಂಬಲ ನೀಡಿದ್ದಾರೆ, ನನಗೆ ಬಿಜೆಪಿ ಯಾವುದೇ ಷರತ್ತು ಹಾಕಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಾಯಕರು ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ನನ್ನ ಜೊತೆ ನನ್ನ ಮಗ ಅಭಿಷೇಕ್ಗೂ ಟಿಕೆಟ್ ನೀಡುವುದಾಗಿ ಎರಡೂ ಪಕ್ಷಗಳು ಆಫರ್ ನೀಡಿವೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಾನಂತೂ ಯಾವುದೇ ಬೇಡಿಕೆ ಇಟ್ಟಿಲ್ಲ. ನಾನು ಟಿಕೆಟ್ಗಾಗಿ ಆಸೆಯೂ ಪಟ್ಟಿಲ್ಲ. ನನ್ನ ಮಗನಿಗೂ ಈ ಆಸೆ ಇಲ್ಲ. ಎಲ್ಲವೂ ಸಮಯ ಸಂದರ್ಭ ನಿರ್ಧರಿಸಲಿದೆ. ಆ ಸಮಯ ಬಂದಾಗ ನಿರ್ಧಾರಿಸುತ್ತೇನೆ ಎಂದು ಹೇಳಿದ್ದರು.

ನಾನು ಯಾವ ಪಕ್ಷಕ್ಕೆ ಹೋಗುವದೆಂದು ತೀರ್ಮಾನಿಸಿಲ್ಲ. ಗೌರವವಿಲ್ಲದ ಕಡೆಗೆ ನಾನು ಹೋಗುವುದೂ ಇಲ್ಲ. ಗೌರವ ನೀಡದ ಪಕ್ಷಗಳನ್ನು ನಾನು ಸೇರುವುದೂ ಇಲ್ಲ. ಪಕ್ಷಗಳನ್ನು ಸೇರುವುದರಿಂದ ನನಗೆ ಒಳ್ಳೆಯದಾಗಬಹುದು. ಆದರೆ, ನಾನು ನನಗಷ್ಟೇ ಒಳ್ಳೆಯದಾಗಬೇಕೆಂದು ಭಾವಿಸಿಲ್ಲ ಎಂದು ಇತ್ತೀಚೆಗೆ ಹೇಳಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications