ಜಾತಿ ಜನಗಣತಿ ವಿರೋಧಿಸಿ ವೀರಶೈವರ ಜಾಥಾ
ಬಾಗಲಕೋಟೆ, ಮಾ.5: ಸಂವಿಧಾನ ವಿರೋಧಿ ಜಾತಿ ಜನಗಣತಿಯನ್ನು ವಿರೋಧಿಸಿ ಹಾಗೂ ಕೇಂದ್ರದಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಎಲ್ಲಾ ಲಿಂಗಾಯತ ಪಂಗಡಗಳನ್ನು ಸೇರಿಸಬೇಕೆಂದು ಆಗ್ರಹಿಸಿ ವೀರಶೈವ ಲಿಂಗಾಯತ ಯುವ ವೇದಿಕೆ ಹೋರಾಟ ನಡೆಸುತ್ತಿದೆ.
ವೀರಶೈವ ಮಠಾಧೀಶರು ಹಾಗೂ ಯುವ ವೇದಿಕೆ ರಾಜ್ಯಾಧ್ಯಕ್ಷ ಪ್ರಶಾಂತ್ ಕಲ್ಲೂರ್ ನೇತೃತ್ವದ ಕೂಡಲಸಂಗಮದಿಂದ ಬೆಂಗಳೂರಿನ ಕಡೆಗೆ ಬೃಹತ್ ಕಾಲ್ನಡಿಗೆ ಜಾಥಾ ಜಾರಿಯಲ್ಲಿದೆ. ಜಾಥಕ್ಕೆ ಬೃಹತ್ ಬೆಂಬಲ ವ್ಯಕ್ತವಾಗುತ್ತಿದೆ. [ಜಾತಿ ಗಣತಿ : ಏಕೆ, ಏನು, ಇದೆಲ್ಲಾ ಬೇಕೆ?]
ಮಾರ್ಚ್ 3 ರಂದು ವಿಶ್ವಗುರು ಬಸವಣ್ಣನವರು ಐಕ್ಯವಾದ ಸ್ಥಳ ಕೂಡಲಸಂಗಮದಿಂದ ಆರಂಭವಾದ ಈ ಜಾಥಾಕ್ಕೆ ಲಿಂಗಾಯತ ಪಂಚಮಸಾಲಿ ಮಹಾಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಚಾಲನೆ ನೀಡಿದರು.ಕೂಡಲ ಸಂಗಮದಿಂದ ಬೆಂಗಳೂರಿನವರೆಗೆ ಒಟ್ಟು 703 ಕಿಮೀಗಳನ್ನು 23 ದಿನಗಳಲ್ಲಿ ಜಾಥಾ ಸಾಗಲಿದೆ. ಜಾಥಾ ಸಾಗುವ ಹಾದಿಯಲ್ಲಿ ಅಲ್ಲಲ್ಲಿ ಜನಜಾಗೃತಿ ಸಭೆ, ಚಿಂತನಗೋಷ್ಠಿ ಇನ್ನಿತರ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ.

ವೀರಶೈವ ಮಠಾಧೀಶರ ಉಪಸ್ಥಿತಿ
ಪಾಂಡೋಮಟ್ಟಿಯ ಶ್ರೀ ಗುರುಬಸವ ಸ್ವಾಮೀಜಿ, ಬುರಣಾಪುರದ ಸಿದ್ದರೂಢಾ ಆಶ್ರಮದ ಯೋಗೇಶ್ವರಿ ಮಾತಾಜೀ ಸೇರಿದಂತೆ ನಾಡಿನ ಹಲವಾರು ವೀರಶೈವ ಲಿಂಗಾಯತ ಮಠಾಧೀಶರು, ಚಿಂತಕರು ಇದರಲ್ಲಿ ಭಾಗಿಯಾಗಿದ್ದಾರೆ.

ವೀರಶೈವರ ಜಾಥಾ ಸಾಗುವ ಹಾದಿ
ಕೂಡಲ ಸಂಗಮದಿಂದ ಹೊರಟು ಬೇವೂರ, ಬಾಗಲಕೋಟೆ, ಬಾದಾಮಿ, ರೋಣ, ಅಬ್ಬಿಗೇರೆ, ಗದಗ, ಅನ್ನಿಗೆರೆ, ಹುಬ್ಬಳ್ಳಿ, ತಿಮ್ಮಾಪುರ, ಶಿಗ್ಗಾಂವಿ, ಹಾವೇರಿ, ರಾಣೇಬೆನ್ನೂರು, ಹರಿಹರ, ದಾವಣಗೆರೆ, ಭರಮಸಾಗರ, ಚಿತ್ರದುರ್ಗ, ಐಮಂಗಲ, ಹಿರಿಯೂರು, ಶಿರಾ, ಸಿಬಿ, ತುಮಕೂರು, ದಾಬಸಪೇಟೆ ಕ್ರಾಸ್, ನೆಲಮಂಗಲ ಮಾರ್ಗವಾಗಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪೂರ್ಣಗೊಳ್ಳಲಿದೆ.

ಫ್ರೀಡಂ ಪಾರ್ಕಿನಲ್ಲಿ ಬೃಹತ್ ಬಹಿರಂಗ ಸಭೆ
ಮಾರ್ಚ್ 25 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಬಹಿರಂಗ ಸಭೆಯನ್ನು ಏರ್ಪಡಿಸಲಾಗಿದೆ.

ಬೃಹತ್ ಬಹಿರಂಗ ಸಭೆ ಸ್ವಾಮೀಜಿಗಳ ಆಗಮನ
ನಡೆದಾಡುವ ದೇವರೆಂದೇ ಕರೆಸಿಕೊಳ್ಳುವ ಸಿದ್ದಗಂಗಾ ಮಠದ ಶ್ರೀ ಡಾ. ಶಿವಕುಮಾರಸ್ವಾಮಿಗಳು, ಸುತ್ತೂರಿನ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು, ಶ್ರೀ ಗದುಗಿನ ತೋಂಟದ ಸ್ವಾಮಿಗಳು, ಪಂಚಮಸಾಲಿ ಮಹಾಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು, ಪಾಂಡೋಮಟ್ಟಿಯ ಶ್ರೀ ಗುರುಬಸವ ಸ್ವಾಮೀಜಿಗಳು ಅಲ್ಲದೇ, ನಾಡಿನ ಹಲವಾರು ಮಠಾಧೀಶರು, ಚಿಂತಕರು ಹಾಗೂ ಸಮಾಜದ ಸಾಧಕರು ಭಾಗಿಯಾಗಲಿದ್ದಾರೆ.

30ಸಾವಿರಕ್ಕೂ ಹೆಚ್ಚು ಜನ ಆಗಮನ ನಿರೀಕ್ಷೆ
ಜಾತಿ ಜನಗಣತಿಯನ್ನು ವಿರೋಧಿಸಿ ಹಾಗೂ ಕೇಂದ್ರ ಎಲ್ಲಾ ಲಿಂಗಾಯತ ಉಪಪಂಗಡಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಹಕ್ಕೋತ್ತಾಯ ಮಾಡಲಾಗುವುದು.ಈ ಬಹಿರಂಗ ಸಭೆಗೆ ನಾಡಿನ ಮೂಲೆ ಮೂಲೆಯಿಂದ 30ಸಾವಿರಕ್ಕೂ ಹೆಚ್ಚು ಸಮುದಾಯದ ಬಂಧುಗಳು ಪಾಲ್ಗೊಳ್ಳಲಿದ್ದಾರೆ

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
ಪ್ರಶಾಂತ್ ಕಲ್ಲೂರ್,ರಾಜ್ಯಾಧ್ಯಕ್ಷರು,
ವೀರಶೈವ ಲಿಂಗಾಯತ ಯುವ ವೇದಿಕೆ
ದೂ: 99721 29393 / 92424 44444
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications