"ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳ ದುರ್ಬಳಕೆ, ಈ ಕಾರಣಕ್ಕೆ ಅಮಾನತು" ವಿರೋಧ!
ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಗಳು ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆದರಿಕೆಗೆ ಹೆದರಿ ದ್ವೇಷದ ರಾಜಕಾರಣಕ್ಕೆ ಹೆಗಲು ಕೊಡಲು ಆರಂಭಿಸಿದ್ದಾರೆ.
ಇದರ ಆರಂಭವೆಂಬಂತೆ ರಾಯಚೂರು ಜಿಲ್ಲೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಪಕ್ಷದ ಶಾಸಕರಾದ ಮಾನಪ್ಪ ಡಿ ವಜ್ಜಲ್ ಅವರ ಆಪ್ತ ಸಹಾಯಕ ಪ್ರವೀಣ್ ಕುಮಾರ್ ಕೆ.ಪಿ ಅವರನ್ನು ಆರ್ಎಸ್ಎಸ್ ಶತಮಾನೋತ್ಸವ ಪಥಸಂಚನದಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಅಮಾನತುಗೊಳಿಸುವ ಮೂಲಕ ದೇಶಭಕ್ತಿ ಮನಸ್ಥಿತಿಗಳ ಮೇಲೆ ಸರ್ಕಾರಿ ಯಂತ್ರ ಬಳಸಿಕೊಂಡು ದಾಳಿ ಆರಂಭಿಸಿದ್ದಾರೆ ಎಂದು ಅವರು ದೂರಿದ್ದಾರೆ.

ಇದು ಕರ್ನಾಟಕ ಕಾಂಗ್ರೆಸ್ ಪಕ್ಷದ ವಿಕೃತಿ ಹಾಗೂ ಹಿಂದೂ ವಿರೋಧಿ ಮನಸ್ಥಿತಿಯ ಮತ್ಸರದ ಕ್ರಮವಲ್ಲದೆ ಬೇರೇನೂ ಅಲ್ಲ. ಸರ್ಕಾರಿ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳಲು ಆರಂಭಿಸಿದ್ದೀರಿ, ಅದನ್ನು ಹೇಗೆ ಸರಿದಾರಿಗೆ ತರಬೇಕೆನ್ನುವ ತಂತ್ರ ನಮಗೂ ತಿಳಿದಿದೆ. ತಕ್ಷಣ ಈ ಸೇಡಿನ ಅಮಾನತು ಹಿಂಪಡೆದು ಕ್ಷಮೆ ಯಾಚಿಸಬೇಕು, ಇಲ್ಲದಿದ್ದರೆ ದ್ವೇಷದ ರಾಜಕಾರಣಕ್ಕೆ ಸಂವಿಧಾನಿಕ ಮಾರ್ಗದಲ್ಲಿ ಜನತಂತ್ರ ವ್ಯವಸ್ಥೆಯಲ್ಲಿ ತಕ್ಕ ಉತ್ತರ ನೀಡಬೇಕಾದೀತು ಎಂದು ಅವರು ಎಚ್ಚರಿಸಿದ್ದಾರೆ.
ದ್ವೇಷದ ರಾಜಕಾರಣ ನಡೆಸಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕಿದ ಕುಖ್ಯಾತಿಯ ಹಿನ್ನಲೆಯ ಕಾಂಗ್ರೆಸ್ ಇದೀಗ ಕರ್ನಾಟಕದಲ್ಲಿ ಅದೇ ಮಾರ್ಗದಲ್ಲಿ ಮುಂದುವರೆದಿದೆ. ದ್ವೇಷ ಬಿತ್ತುವ ರಾಜಕಾರಣ ಹಾಗೂ ಸರ್ವಾಧಿಕಾರಿ ಧೋರಣೆಯಿಂದ ಅಟ್ಟಹಾಸ ಮೆರೆದರೆ ಈ ದೇಶದ ಜನ ಅವರನ್ನು ನಾಮಾವಶೇಷಗೊಳಿಸುತ್ತಾರೆ ಎಂಬುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆಗಳಿವೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ರಾಷ್ಟ್ರಭಕ್ತ ಮನಸ್ಸುಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಗೂಂಡಾಗಿರಿ ನಡೆಸುವ ಕಾರ್ಯಕ್ಕೆ ಕಾಂಗ್ರೆಸ್ ಚಾಲನೆ ನೀಡಿದ್ದು, ಅದರ ವರಿಷ್ಠರ ಚಿತಾವಣೆಯಿಂದ ಉದ್ರಿಕ್ತಗೊಂಡ ಕರ್ನಾಟಕ ಕಾಂಗ್ರೆಸ್ ಹಾಗೂ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಸಂಘವು ಸಂಘದ ಕಾರ್ಯಾಲಯ ಕೇಶವ ಕೃಪಾಗೆ ಅನಿರೀಕ್ಷಿತ ದಾಳಿ ನಡೆಸಲು ಯತ್ನಿಸಿದೆ.
ಈ ದಿನದ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ, ಶಾಂತಿ, ಸುವ್ಯವಸ್ಥೆ ನಮ್ಮ ಆದ್ಯತೆ, ದ್ವೇಷ, ಮತ್ಸರ, ವಿಧ್ವಂಸಕ ಕೃತ್ಯ ಉತ್ತೇಜಿಸುವುದು ನಿಮ್ಮ ಅಜೆಂಡಾ ಆಗಿದ್ದರೆ, ಅದನ್ನು ಎದುರಿಸುವ ಶಕ್ತಿ ಹಾಗೂ ತಾಕತ್ತು ಭಾರತೀಯ ಜನತಾ ಪಾರ್ಟಿಯ ಪ್ರತಿ ಕಾರ್ಯಕರ್ತನಿಗೂ ಇದೆ. ಈ ಕುರಿತು ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಲ್ಲಿ ಪರಿಸ್ಥಿತಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications