ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸಿಬಿ ಎಫ್‌ಐಆರ್ : ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

|
Google Oneindia Kannada News

ಬೆಂಗಳೂರು, ಅ.23 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಆಗಸ್ಟ್ 28ರ ತನಕ ಯಡಿಯೂರಪ್ಪ ಬಂಧಿಸದಂತೆ ಎಸಿಬಿ ಪೊಲೀಸರಿಗೆ ಸೂಚನೆ ಕೊಟ್ಟಿದೆ.

ಯಡಿಯೂರಪ್ಪ ವಿರುದ್ಧ ಎಫ್‌ಐಆರ್, ರಾಜ್ಯಪಾಲರಿಗೆ ಬಿಜೆಪಿ ದೂರುಯಡಿಯೂರಪ್ಪ ವಿರುದ್ಧ ಎಫ್‌ಐಆರ್, ರಾಜ್ಯಪಾಲರಿಗೆ ಬಿಜೆಪಿ ದೂರು

ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ವಿಚಾರಣೆಯನ್ನು ಆಗಸ್ಟ್ 28ಕ್ಕೆ ಮುಂದೂಡಿದರು. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಯಡಿಯೂರಪ್ಪ ಮಾಡಿರುವ ಮನವಿಯ ವಿಚಾರಣೆ ಇನ್ನೂ ಬಾಕಿ ಇದೆ.

ACB FIR on de-notification cases : Minor relief for B.S.Yeddyurappa

ಬಿ.ಎಸ್.ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದರು. ಎಸಿಬಿ ಪರವಾಗಿ ರವಿಮರ್ಮ ಕುಮಾರ್ ವಾದ ಮಂಡಿಸಿದರು.

ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ 2 ಎಫ್‌ಐಆರ್, ಏನಿದು ಪ್ರಕರಣ?ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ 2 ಎಫ್‌ಐಆರ್, ಏನಿದು ಪ್ರಕರಣ?

ವಾದ ಮಂಡನೆ ಆಲಿಸಿದ ಕೋರ್ಟ್ ಆಗಸ್ಟ್ 28ರ ತನಕ ಯಡಿಯೂರಪ್ಪ ಬಂಧಿಸದಂತೆ ಎಸಿಬಿ ಪೊಲೀಸರಿಗೆ ಸೂಚನೆ ನೀಡಿತು. ಇಂದು ವಿಚಾರಣೆಗೆ ಹಾಜರಾಗಬೇಕು ಎಂದು ಎಸಿಬಿ ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿತ್ತು.

ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಮಾಡಲು ಮೀಸಲಿಟ್ಟ ಭೂಮಿಯನ್ನು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಡಿನೋಟಿಫೈ ಮಾಡಿದ್ದಾರೆ ಎಂಬುದು ಆರೋಪವಾಗಿದೆ. ಯಡಿಯೂರಪ್ಪ ವಿರುದ್ಧ ಡಾ.ಡಿ.ಅಯ್ಯಪ್ಪ ಎಸಿಬಿಗೆ ದೂರು ನೀಡಿದ್ದರು.

English summary
Karnataka High Court adjourned the hearing of petition field Karnataka BJP president B.S. Yeddyurappa seeking quash of 2 FIR registered against him by ACB. Court directed Anti Corruption Bureau (ACB) not to arrest B.S. Yeddyurappa till August 28, 2017. registered FIRs against Yeddyurappa in connection with land
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X