ಸಿಎಂಗೆ ಬಿಡದ ವಾಚ್ ಉರುಳು, ಎಸಿಬಿಗೆ ಮತ್ತೊಂದು ದೂರು
ಬೆಂಗಳೂರು, ಮೇ. 14: ಸುತ್ತಿಕೊಂಡಿರುವ ದುಬಾರಿ ಊಬ್ಲೋ ವಾಚು ಪ್ರಕರಣ ಸಿಎಂ ಸಿದ್ದರಾಮಯ್ಯ ಅವರನ್ನು ಬಿಟ್ಟುಹೋಗುವ ಲಕ್ಷಣ ಕಾಣುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವೇ ಮುಂದಾಗಿ ಸ್ಥಾಪನೆ ಮಾಡಿದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ಸಲ್ಲಿಕೆ ಆಗಿದೆ.
ಮಾಹಿತಿ ಹಕ್ಕು ಕಾರ್ಯಕರ್ತ ಟಿ ಜೆ ಅಬ್ರಾಹಂ ಎಂಬುವರು ಎಸಿಬಿಯಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಏಪ್ರಿಲ್ 2ರಂದು ವಕೀಲರಾದ ನಟರಾಜ ಶರ್ಮಾ ಎಂಬುವವರು ದುಬಾರಿ ವಾಚ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ವಿರುದ್ಧ ದೂರು ನೀಡಿದ್ದರು. ಈಗ ಮತ್ತೊಂದು ದೂರು ದಾಖಲು ಆದಂತೆ ಆಗಿದೆ.[ಕರ್ನಾಟಕ ಸರ್ಕಾರಕ್ಕೆ ಮೂರು ವರ್ಷ, ಮುಂದಿದೆ ಎರಡು ವರ್ಷ!]

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಡಿನೋಟಿಫಿಕೇಶನ್ ಸೇರಿದಂತೆ ಏಳು ದೂರುಗಳು ದಾಖಲಾದಂತೆ ಆಗಿದೆ. ಆದರೆ ಎಸಿಬಿ ಅಧಿಕಾರಿಗಳು ಅಧಿಕೃತವಾಗಿ ದೂರು ದಾಖಲು ಮಾಡಿಕೊಂಡಿಲ್ಲ.[ಸಿದ್ದರಾಮಯ್ಯ ದುಬಾರಿ ವಾಚ್ ನ ಪೂರ್ಣ ಕತೆ]
ಇಷ್ಟೆಲ್ಲಾ ವಿವಾದಕ್ಕೆ ಕಾರಣವಾದ ವಾಚ್ ಅನ್ನು ಸಿದ್ದರಾಮಯ್ಯ ಸ್ಪೀಕರ್ ಕಾಗೋಡು ತಿಮ್ಮಪ್ಪ ಮೂಲಕ ಸರ್ಕಾರಕ್ಕೆ ನೀಡಿದ್ದರು. ವಜ್ರ ಖಚಿತ ಊಬ್ಲೋ ವಾಚ್ ಅನ್ನು ಮಾರ್ಚ್ 2ರಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಹಸ್ತಾಂತರ ಮಾಡಿದ್ದರು. ನಂತರ ಸ್ಪೀಕರ್ ಅದನ್ನು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ನೀಡಿದ್ದು, ವಜ್ರ ಖಚಿತ ವಾಚ್ ಈಗ ಸರ್ಕಾರದ ಆಸ್ತಿಯಾಗಿದೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications