ನಮ್ಮ ಸರ್ಕಾರಿ ಕಚೇರಿಗಳಲ್ಲಿ ಚಿಕ್ಕಪುಟ್ಟ ಲಂಚ, ಇಬ್ಬರು ಒಳಗೆ
ಲಂಚ ಸ್ವೀಕರಿಸುತ್ತಿದ್ದ ವೇಳೆ ಬೀದರ್ ಜಿಲ್ಲೆ ಲಿಂಗದಳ್ಳಿಯ ಪಂಚಾಯಿತಿ ಅಧಿಕಾರಿ ಮತ್ತು ಬೆಂಗಳೂರು ಬಿ.ಬಿ.ಎಂ.ಪಿ, ಶಿವಾಜಿನಗರ ವಿಭಾಗದ ಕಾರ್ಯಪಾಲಕ ಅಭಿಯಂತರರು ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರು/ ಬೀದರ್, ಜನವರಿ. 10 : ಜನವರಿ 10ರಂದು ಪ್ರತ್ಯೇಕವಾಗಿ ಎಸಿಬಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದಾರೆ.
ಬೀದರ್ ಜಿಲ್ಲೆಯ ಲಿಂಗದಹಳ್ಳಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಬೆಂಗಳೂರು ಬಿ.ಬಿ.ಎಂ.ಪಿ, ಶಿವಾಜಿನಗರ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಭಾರತಿ ಈ ಇಬ್ಬರು ಸರ್ಕಾರಿ ಅಧಿಕಾರಿಗಳು ಲಂಚ ಪಡೆಯುವ ವೇಳೇ ಮಂಗಳವಾರ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಬೀದರ್: ಬೀದರ್ ಜಿಲ್ಲೆಯ ಹಂಪಸಂದ್ರದ ಲಿಂಗದಹಳ್ಳಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಞಾನೇಶ್ವರ್ಬಸವ ವಸತಿ ಚೆಕ್ ನೀಡಲು ಫಲಾನುಭವಿಗಳಿಂದ 10,000 ರು ಲಂಚ ಸ್ವೀಕರಿಸುವ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಬಿದ್ದಿದ್ದು. ಆರೋಪಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ-1988 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ಅವರನ್ನು ದಸ್ತಗಿರಿ ಮಾಡಿದ್ದಾರೆ.
ಬೆಂಗಳೂರು : ನಗರದ ಶಿವಾಜಿನಗರ ಗುತ್ತಿಗೆದಾರರೊಬ್ಬ ಹೌಸಿಂಗ್ ಸ್ಕಿಮ್ ನ ಅನುದಾನದ ಅಡಿಯಲ್ಲಿ ಎಸ್.ಸಿ/ಎಸ್.ಟಿ ಕುಟುಂಬದ ಮನೆ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಅಂತಿಮ ಅನುದಾನ 21.00 ಲಕ್ಷ ಹಣ ಬಿಡುಗಡೆ ಮಾಡಲು 2,50,000 ರುಗಳ ಲಂಚ ನೀಡುವಂತೆ ಬಿ.ಬಿ.ಎಂ.ಪಿ, ಶಿವಾಜಿನಗರ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಭಾರತಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಗುತ್ತಿಗೆದಾರರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರನ್ನು ಸಲ್ಲಿಸಿದ್ದು. ದೂರುದಾರರು ನೀಡಿದ ದೂರಿನನ್ವಯ ಬಾರತಿ ಅವರು .23,000 ರು ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿದ್ದಾರೆ.
ಇವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ-1988 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ಅವರನ್ನು ದಸ್ತಗಿರಿ ಮಾಡಲಾಗಿದೆ. ಎಸಿಬಿ ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆದಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications