ಬೀದರ್: ತಾಲೂಕು ಪಂಚಾಯಿತಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ
ಬೀದರ್, ಫೆಬ್ರವರಿ 28: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಬೀದರ್ ಜಿಲ್ಲೆಯ ಔರಾದ್ ತಾಲೂಕು ಪಂಚಾಯಿತಿ ಮಾಜಿ ಕಾರ್ಯನಿರ್ವಹಣಾಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇಲೆ ತಾಲೂಕು ಪಂಚಾಯಿತಿ ಮಾಜಿ ಕಾರ್ಯ ನಿರ್ವಹಣಾಧಿಕಾರಿ ಜಗನ್ನಾಥ್ ರೆಡ್ಡಿ ಮನೆ ಮೇಲೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಎಸಿಬಿ ಎಸ್ಪಿ ಅನಿತಾ ಹದ್ದಣ್ಣವರ್, ಬೀದರ್ ಎಸಿಬಿ ಡಿವೈಎಸ್ಪಿ ವಿಶ್ವನಾಥ್ ಕುಲಕರ್ಣಿ, ಇನ್ಸ್ಪೆಕ್ಟರ್ ಗಳಾದ ಶ್ರೀಕಾಂತ್, ಸಿದ್ರಾಮಯ್ಯ ಹಾಗೂ ಎಸಿಬಿ ಸಿಬ್ಬಂದಿಗಳ ತಂಡ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಅಕ್ರಮ ಆಸ್ತಿ, ನಗದು, ಚಿನ್ನಾಭರಣ ಮತ್ತು ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದೆ.[ಚಿಕ್ಕಮಗಳೂರು: ಗನ್ ತೋರಿಸಿದ ಪಿಎಸ್ಐಗೆ ಕಪಾಳಕ್ಕೆ ಬಾರಿಸಿದ ಜನ]

ದಾಳಿಯ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.[ತಡವಾಗಿ ಬಂದ್ ಯಶ್ ಕಾರಿನ ಗ್ಲಾಸ್ ಪೀಸ್ ಪೀಸ್]













Click it and Unblock the Notifications