ನಾಲ್ವರು ಸರಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ
ಬೆಂಗಳೂರು, ಅಕ್ಟೋಬರ್ 5: ಅದಾಯವನ್ನು ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ನಾಲ್ವರು ಸರಕಾರಿ ನೌಕರರ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೂ ಮಂಗಳವಾರ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ತುಮಕೂರಿನ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಆರ್.ಸುಬ್ರಮಣ್ಯ ಅವರ ಮನೆಯಲ್ಲಿ ದಾಖಲಾತಿಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸಲಾಯಿತು. ಜತೆಗೆ ಪಾವಗಡದಲ್ಲಿರುವ ಸುಬ್ರಮಣ್ಯ ಅವರ ಸಹೊದರರ ಮನೆ, ದಾವಣಗೆರೆಯಲ್ಲಿರುವ ಅವರ ಪತ್ನಿಯ ತಂಗಿ ಮನೆ ಹಾಗೂ ತುಮಕೂರಿನ ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲಿಸಲಾಯಿತು.[ಆರ್ಟಿಓ ಚೆಕ್ಪೋಸ್ಟ್ಗಳ ಮೇಲೆ ಲೋಕಾಯುಕ್ತ ದಾಳಿ]

ಬೀದರ್ ಜಿಲ್ಲೆ ಔರಾದ್ ತಾಲೂಕು ಸಂತಾಪುರದ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಗನ್ನಾಥ್ ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ. ಬೀದರ್ ನ ಅಕ್ಕಮಹಾದೇವಿ ನಗರದ ಮನೆ, ಶಿವನಗರದ ಪಾಪನಾಶ ರಸ್ತೆಯ ವಾಣಿಜ್ಯ ಸಮುಚ್ಚಯ, ನೌಬಾದ್ ನ ನೀರು ಶುದ್ಧೀಕರಣ ಘಟಕ ಹಾಗೂ ಅವರ ಕಚೇರಿಯಲ್ಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಯಿತು.
ಕರ್ನಾಟಕ ಮೈನಾರಿಟೀಸ್ ಡೆವಲಪ್ಮೆಂಟ್ ನಿಗಮದ ಜಿಲ್ಲಾ ಮ್ಯಾನೇಜರ್ ಎಸ್.ಎಲ್.ಸಿಕಂದರ್ ಅವರ ಬೆಂಗಳೂರಿನ ರೆಹಮತ್ ನಗರದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ, ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ನಗರದ ವಿಶ್ವೇಶ್ವರಯ್ಯ ಕಟ್ಟಡದಲ್ಲಿನ ಕಚೇರಿಯಲ್ಲೂ ದಾಖಲಾತಿ ಇತರೆ ಕಡತಗಳನ್ನು ಪರಿಶೀಲಿಸಲಾಗಿದೆ.[ಕಾಂಡೋಂ ವಿತರಣೆಯಲ್ಲಿ ಐನೂರು ಕೋಟಿ ಸೋರಿಕೆ ಆಗಿದೆಯಾ?]
ಬಿಬಿಎಂಪಿ, ಚಿಕ್ಕಪೇಟೆಯ ಕುಮಾರ್ವೇಲು ಅವರು ಬನ್ನೇರುಘಟ್ಟ ರಸ್ತೆಯಲ್ಲಿನ ಬಿಳೇಕಳ್ಳಿಯಲ್ಲಿ ಹೊಂದಿರುವ ಮನೆಯಲ್ಲಿ ಅಕ್ರಮ ಆಸ್ತಿ ಹುಡುಕಾಟ ನಡೆಸಿ, ದಾಖಲಾತಿ ಮತ್ತು ಆಸ್ತಿಗಳ ವಿವರಗಳನ್ನು ಪರಿಶೀಲಿಸಲಾಯಿತು. ಜತೆಗೆ ಬಿಬಿಎಂಪಿ ಟೌನ್ಹಾಲ್ ಕಚೇರಿಯಲ್ಲೂ ದಾಖಲಾತಿ ಮತ್ತಿತರೆ ಕಡತಗಳನ್ನು ಪರಿಶೀಲಿಸಲಾಯಿತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications