ಆದಾಯಕ್ಕಿಂತ ಅಧಿಕ ಆಸ್ತಿ: ಕರ್ನಾಟಕದ 14 ಕಡೆ ಎಸಿಬಿ ದಾಳಿ
ಬೆಂಗಳೂರು, ಜೂನ್ 10: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇರೆಗೆ ಭ್ರಷ್ಟಾಚಾರ ನಿಗ್ರಹ ದಳ ಕರ್ನಾಟಕದ 14 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
Recommended Video
ಕೊರೊನಾದಿಂದ ಪ್ರಾಣಕಳೆದುಕೊಂಡ ಶಾಸಕ | DMK MLA | J Anbazhagan | Oneindia Kannada
ಸತೀಶ್ ಕುಮಾರ್ ಅವರ ಡಾಲರ್ಸ್ ಕಾಲೊನಿ, ಗಾಂಧಿನಗರದ ತೆರಿಗೆ ಭವನದಲ್ಲಿರುವ ಅವರ ಕಚೇರಿ ಹಾಗೂ ಮೈಸೂರಿನ ತೊಣಚಿಕೊಪ್ಪಲ್ ಬಡಾವಣೆಯಲ್ಲಿರುವ ಅವರ ಸ್ವಂತ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.
ಶ್ರೀನಿವಾಸಪುರ ವಲಯದ ವಲಯ ಅರಣ್ಯಾಧಿಕಾರಿ ಎನ್ ರಾಮಕೃಷ್ಣ, ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯ ನಿರ್ವಾಹಕ ಎಂಜಿನಿಯರ್ ಗೋಪಶೆಟ್ಟಿ ಮಲ್ಲಿಕಾರ್ಜುನ ಹಾಗೂ ಕೃಷ್ಣಾಭಾಗ್ಯ ಜಲ ನಿಗಮದ ಎಂಜಿನಿಯರ್ ರಾಘಪ್ಪ ಲಾಲಪ್ಪ ಲಮಾಣಿ ಅವರ ಮನೆ ಮತ್ತು ಕಚೇರಿಗಳಲ್ಲೂ ಶೋಧ ನಡೆಯುತ್ತಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಎಲ್.ಸತೀಶ್ ಕುಮಾರ್ ಸೇರಿದಂತೆ ನಾಲ್ವರು ಅಧಿಕಾರಿಗಳ ಮನೆ ಹಾಗೂ ಕಚೇರಿ ಸೇರಿ ಒಟ್ಟು 14 ಕಡೆಗಳಲ್ಲಿ ದಾಳಿ ನಡೆದಿದೆ.












Click it and Unblock the Notifications