ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಾಗಲಕೋಟೆ: ದೇವಸ್ಥಾನಕ್ಕೆ ಹೊರಟವರು ಮಸಣ ಸೇರಿದರು
ಬಾಗಲಕೋಟೆ, ಆಗಸ್ಟ್ 14 : ಎಸ್ಆರ್ಎಸ್ ಬಸ್ ಹಾಗೂ ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ಕು ಜನ ಸಾವನ್ನಪ್ಪಿರುವ ಘಟನೆ ಇಂದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರ್ ಕ್ರಾಸ್ ಬಳಿ ನಡೆದಿದೆ.
ಮೈಸೂರಿನ ಪಾಗಲ್ ಪ್ರೇಮಿಗಳು ಬಾಗಲಕೋಟೆಯಲ್ಲಿ ಆತ್ನಹತ್ಯೆಗೆ ಯತ್ನ
ಭಾರತಿ ಗಿಡ್ನಂದಿ(40), ಮಂಜವ್ವ(32), ಲಕ್ಷ್ಮಿಬಾಯಿ(28) ಹಾಗು ಐದು ವರ್ಷದ ಬಾಲಕ ಸೇರಿ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೆರೂರು ಮೂಲದವರಾದ ಗಿಡ್ನಂದಿ ಕಟುಂಬದ 15 ಸದಸ್ಯರು ಕ್ರೂಸರ್ ನಲ್ಲಿ ಆಥಣಿ ತಾಲೂಕಿನ ಕಳೆಗಾಂವ್ ಬಸವೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಲೋಕಾಪುರ ಪಟ್ಟಣದ ಸಮೀಪ ಪೆಟ್ಲೂರ್ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ 8 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮುಧೋಳ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಸಂಬಂಧ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments
English summary
In a tragic accident between cruiser and private bus , which took place in Petlur Cross, near Lokapur region, Bagalkot district, 4 men died, 8 injured. The incident took place on August 14th, morning.
Story first published: Monday, August 14, 2017, 10:55 [IST]