ಪ್ರತಿ ಜಿಲ್ಲೆಯಲ್ಲೂ ಸಾಧಕರ ವಸ್ತುಸಂಗ್ರಹಾಲಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ನಡೆದ 23ನೇ ಚಿತ್ರಸಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ವಿಚಾರವನ್ನು ಹಂಚಿಕೊಂಡರು. ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತುಸಂಗ್ರಹಾಲಯ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ಇದೆ. ನಮ್ಮ ಸರ್ಕಾರ ಅದನ್ನು ಸಕಾರಾತ್ಮಕವಾಗಿ ಸ್ವೀಕಾರ ಮಾಡಲಿದೆ ಎಂದು ಸುಳಿವು ನೀಡಿದರು.
ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿದ್ದೇನೆ ಎನ್ನುವುದು ಖುಷಿಯ ವಿಚಾರ. ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಸೃಷ್ಟಿ ಮಾಡುವ ಕೆಲಸವನ್ನು ಚಿತ್ರಕಲಾ ಪರಿಷತ್ತು ಅರವತ್ತು ವರ್ಷಗಳಿಂದ ಮಾಡುತ್ತಾ ಬಂದಿದೆ. ಚಿತ್ರಸಂತೆ ತನ್ನ 23ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು 22 ರಾಜ್ಯಗಳು, ನಾಲ್ಕು ಕೇಂದ್ರಾಡಳಿತ ಪ್ರದೇಶಗಳ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಶ್ಲಾಘಿಸಿದರು.

ಈ ಬಾರಿಯ ಚಿತ್ರಸಂತೆಯ ಧ್ಯೇಯ ವಾಕ್ಯ ಪರಿಸರಕ್ಕೆ ಸಮರ್ಪಿಸಲಾಗಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಂಗಳೂರು ಸೇರಿದಂತೆ ದೇಶದ ಅನೇಕ ರಾಜಧಾನಿಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗಿದ್ದು, ದೆಹಲಿಯಲ್ಲಿ ಬದುಕಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾಗುತ್ತಿದೆ. ಪರಿಸರದ ರಕ್ಷಣೆ ಇಂದಿನ ಅಗತ್ಯ ಎಂದು ಕರೆ ನೀಡಿದರು.
ಗಿಡ ನೆಡಲು ಬಹಳ ಖರ್ಚು ಆಗಲ್ಲ
ಪ್ರತಿ ವರ್ಷ ಮೂರರಿಂದ ಐದು ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಯಾವುದೇ ಪ್ರದೇಶದಲ್ಲಿ ಶೇ. 30ರಷ್ಟು ಕಾಡು ಇರಬೇಕು. ನಮ್ಮಲ್ಲಿ ಶೇಕಡ 20ರಷ್ಟು ಅರಣ್ಯ ಪ್ರದೇಶವಿದೆ. ಇದನ್ನು ಹೆಚ್ಚು ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು. ಸಾಲು ಮರದ ತಿಮ್ಮಕ್ಕನವರಂತೆ ಸಾರ್ವಜನಿಕರು ಗಿಡಗಳನ್ನು ನೆಡಬೇಕು. ಮಕ್ಕಳನ್ನು ಸಾಕಿದಂತೆ ಗಿಡಮರಗಳನ್ನು ಅವರು ಸಾಕಿದ್ದ ಕಾರಣ ಹಲವು ಪ್ರಶಸ್ತಿಗಳು ದೊರೆಯಿತು. ಅವರ ಆತ್ಮಕ್ಕೆ ಶಾಂತಿ ದೊರಕಬೇಕಾದರೆ ನಾವೆಲ್ಲರೂ ಗಿಡ ಬೆಳೆಸುವ ಪ್ರಯತ್ನವನ್ನು ಮಾಡಬೇಕು. ಪರಿಸರ ರಕ್ಷಣೆಗಾಗಿ ಹೋರಾಟವನ್ನೇ ಕೈಗೊಂಡ ಅನೇಕರು ನಮ್ಮ ನಡುವೆಯೇ ಇದ್ದಾರೆ. ಗಿಡ ನೆಡಲು ಬಹಳ ಖರ್ಚು ಆಗುವುದಿಲ್ಲ. ಮನಸ್ಸು ಮಾಡಬೇಕಷ್ಟೆ. ಸರ್ಕಾರ ಕೂಡ ಈ ದಿಕ್ಕಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಲಿದೆ ಎಂದರು.
ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್ ಆವರಣದಲ್ಲಿ ಆಯೋಜಿಸಿದ್ದ ಚಿತ್ರಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲಾವಿದರು ಪ್ರೀತಿಯಿಂದ ನೀಡಿದ ಕಲಾತ್ಮಕ ಉಡುಗೊರೆಗಳನ್ನು ಸಿದ್ದರಾಮಯ್ಯ ಸ್ವೀಕರಿಸಿದರು. ನಾಡಿನ ವಿವಿಧ ಕಲಾವಿದರ ಕೈಗಳಲ್ಲಿ ಅರಳಿರುವ ವರ್ಣಚಿತ್ರಗಳು, ಕಲಾಕೃತಿಗಳು ಅತ್ಯಂತ ಸೊಗಸಾಗಿವೆ. ಕರ್ನಾಟಕ ಚಿತ್ರಕಲಾ ಪರಿಷತ್ತು ಬೆಂಗಳೂರಿನಂತಹ ವಾಣಿಜ್ಯ ನಗರದಲ್ಲಿ ಪ್ರತೀ ವರ್ಷ ಇಂತದ್ದೊಂದು ಸುಂದರ ಕಾರ್ಯಕ್ರಮವನ್ನು ಆಯೋಜಿಸುತ್ತಾ ಕರಕುಶಲಕರ್ಮಿಗಳು, ವರ್ಣಚಿತ್ರಕಾರರ ವೈವಿದ್ಯಮಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುತ್ತಿರುವುದು ಶ್ಲಾಘನೀಯ ಎಂದರು.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications