ಆಸಿಡ್ ದಾಳಿ ವಿವರ ನೀಡದೆ ನ್ಯಾಯಾಂಗ ನಿಂದನೆ ಮಾಡಿದ ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್, 09 : ಆಸಿಡ್ ದಾಳಿ ತಡೆಯಲು ತೆಗೆದುಕೊಂಡ ಕ್ರಮ ಮತ್ತು ದಾಳಿಗೆ ಒಳಗಾದ ಸಂತ್ರಸ್ತರಿಗೆ ಪುರ್ನವಸತಿ ಕಲ್ಪಿಸಲು ಮಾಡಿದ ಯೋಜನೆಗಳ ಬಗ್ಗೆ ಮಾಹಿತಿ ನೀಡದ ಕರ್ನಾಟಕ ಮತ್ತು ಇತರ ನಾಲ್ಕು ರಾಜ್ಯಗಳಿಗೆ ಸುಪ್ರೀಂಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.
ಆಸಿಡ್ ದಾಳಿಯ ಕುರಿತ ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ಸುಪ್ರೀಂಕೋರ್ಟ್ ಕರ್ನಾಟಕ, ಕೇರಳ, ಜಮ್ಮು ಮತ್ತು ಕಾಶ್ಮೀರ, ಮಿಜೋರಾಂ ಮತ್ತು ಮಧ್ಯ ಪ್ರದೇಶ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಿದೆ. [ಆಸಿಡ್ ದಾಳಿ ಜಾಮೀನು ರಹಿತ ಅಪರಾಧ]

ಹಿಂದೆ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರ ಪುರ್ನವಸತಿಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಕೋರ್ಟ್ ಸೂಚನೆ ನೀಡಿತ್ತು. ಆದರೆ, ಐದು ರಾಜ್ಯಗಳು ಈ ಬಗ್ಗೆ ವರದಿ ನೀಡದ ಹಿನ್ನಲೆಯಲ್ಲಿ ನ್ಯಾಯಾಂಗ ನಿಂದನೆ ಮಾಡಿದಂತಾಗಿದೆ.[ಆಸಿಡ್ ದಾಳಿ ಸಂತ್ರಸ್ತೆಗೆ 5 ಲಕ್ಷ ಪರಿಹಾರ]
ಆಸಿಡ್ ದಾಳಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೋರ್ಟ್, ಅರ್ಜಿಯ ವಿಚಾರಣೆ ಸಮಯದಲ್ಲಿ ಕಾಳಸಂತೆಯಲ್ಲಿ ಆಸಿಡ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆದೇಶ ನೀಡಿತ್ತು. [ಮದುವೆ ತಪ್ಪಿಸಲು ಆಸಿಡ್ ಹಾಕಿದ ಭಗ್ನ ಪ್ರೇಮಿ]
ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದ್ದ ಕೇಂದ್ರ ಸರ್ಕಾರ 2014ರಲ್ಲಿ ದೇಶದಲ್ಲಿ 309 ಆಸಿಡ್ ದಾಳಿ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 185 ಪ್ರಕರಣಗಳು ಉತ್ತರ ಪ್ರದೇಶದಲ್ಲಿಯೇ ದಾಖಲಾಗಿವೆ ಎಂದು ಮಾಹಿತಿ ನೀಡಿತ್ತು.
ಮಧ್ಯಪ್ರದೇಶದಲ್ಲಿ 57 ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದ ಕೇಂದ್ರ ಸರ್ಕಾರ, ಎಲ್ಲಾ ರಾಜ್ಯದ ಆರೋಗ್ಯ ಇಲಾಖೆ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಿ ದಾಳಿಗೆ ಒಳಗಾದವರ ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿತ್ತು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications