ಚಿಕ್ಕಬಳ್ಳಾಪುರದಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ
ಚಿಕ್ಕಬಳ್ಳಾಪುರ, ನ. 24 : ಕೆಲಸಕ್ಕೆಂದು ತೆರಳುತ್ತಿದ್ದ ಮಹಿಳೆಯ ಮೇಲೆ ಇಬ್ಬರು ಬುರ್ಖಾಧಾರಿಗಳು ಆಸಿಡ್ ಹಾಕಿರುವ ಘಟನೆ ಮಂಚೇನಹಳ್ಳಿಯಲ್ಲಿ ನಡೆದಿದೆ. ಕಣ್ಣು ಮತ್ತು ಬಲಗೈಗೆ ಗಾಯವಾಗಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೌರಿಬಿದನೂರಿನ ಮಂಚೇನಹಳ್ಳಿ ಹೋಬಳಿಯ ಹಳೇ ಬುದ್ಧಿವಂತನಹಳ್ಳಿ ಗ್ರಾಮದ ವಾಸಿ ಲಕ್ಷ್ಮಮ್ಮ (41) ಎಂಬುವವರ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಚಿಕ್ಕಬಳ್ಳಾಪುರದ ಕೊಯಿಲ್ ಕಾರ್ನರ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. [ಶಿಕ್ಷಕಿ ಮೇಲೆ ಆಸಿಡ್ ದಾಳಿ: ಭಗ್ನಪ್ರೇಮಿ ಬಂಧನ]

ಪ್ರತಿದಿನ ಬೆಳಗ್ಗೆ 6ಗಂಟೆಗೆ ಮಂಚೇನಹಳ್ಳಿಗೆ ಬಂದು ಅಲ್ಲಿಂದ ಬಸ್ ಮೂಲಕ ಲಕ್ಷ್ಮಮ್ಮ ಚಿಕ್ಕಬಳ್ಳಾಪುರಕ್ಕೆ ಹೋಗುತ್ತಿದ್ದರು. ಇಂದು ಬೆಳಗ್ಗೆ ಮಂಚೇನಹಳ್ಳಿಗೆ ಬಂದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ. [ಹುಬ್ಬಳ್ಳಿ : ಮದುವೆ ತಪ್ಪಿಸಲು ಆಸಿಡ್ ಹಾಕಿದ ಭಗ್ನ ಪ್ರೇಮಿ]
ಆಸಿಡ್ ದಾಳಿಯಿಂದಾಗಿ ಲಕ್ಷ್ಮಮ್ಮ ಅವರ ಬಲಗೈ ಮತ್ತು ಕಣ್ಣಿನ ಭಾಗದಲ್ಲಿ ಸುಟ್ಟಗಾಯಗಳಾಗಿದ್ದು, ಗೌರಿಬಿದನೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಎಸ್ಪಿ ಕೆ.ರಾಧಿಕಾ, ಮಂಚೇನಹಳ್ಳಿ ಠಾಣೆ ಎಸ್ಐ ಸುಂದರ್ ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಯಿಂದ ಮಾಹಿತಿ ಸಂಗ್ರಹಿಸಿದ್ದಾರೆ. [ಆಸಿಡ್ ದಾಳಿ ಜಾಮೀನು ರಹಿತ ಅಪರಾಧ : ಸುಪ್ರೀಂ]
ಲಕ್ಷ್ಮಮ್ಮ ಅವರ ಪತಿ ಗಂಗರಾಜು ಕೃಷಿಕರಾಗಿದ್ದು, ಮಗಳು ಪಿಯುಸಿ ಹಾಗೂ ಮಗ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆಸಿಡ್ ದಾಳಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications