Darshan Thoogudeepa: ಬಳ್ಳಾರಿ ಜೈಲಿಗೆ ಎರಡನೇ ಭಾರಿ ನಟ ದರ್ಶನ್ ಎಂಟ್ರಿ!
ಬೆಂಗಳೂರು, ಆಗಸ್ಟ್ 29: ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಗುರುವಾರ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಗಣಿ ಜಿಲ್ಲೆ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಗೊಂಡಿದ್ದಾರೆ. ರಾಜಧಾನಿ ಜೈಲಿನಲ್ಲಿ ಕಳೆದ ಎರಡು ತಿಂಗಳಿಂದ ಇದ್ದ ನಟ ದರ್ಶನ್ಗೆ ರಾಜಾತಿಥ್ಯ ಸಿಗುತ್ತಿದೆ ಎಂಬ ಫೋಟೋ ಆಧಾರದಲ್ಲಿ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಆದರೆ ನಟ ದರ್ಶನ್ ಬಳ್ಳಾರಿ ಜೈಲಿಗೆ ತೆರಳಿರುವುದು ಇದೇ ಮೊದಲಲ್ಲ.
ಹೌದು, ನಟ ದರ್ಶನ್ ಅವರು ಬಳ್ಳಾರಿ ಜೈಲಿಗೆ ತೆರಳಿರುವುದು ಇದೇ ಮೊದಲಲ್ಲ. ಬದಲಾಗಿ ಅವರು ಹಿಂದೊಮ್ಮೆ ಬಳ್ಳಾರಿ ಜೈಲಿಗೆ ತೆರಳಿದ್ದರು. ಕನ್ನಡ ಚಿತ್ರರಂಗದಲ್ಲಿ ಚಾಲೆಂಜಿಂಗ್ ಸ್ಟಾರ್ ಆಗಿರುವ ನಟ ದರ್ಶನ್ 2011ರಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿದ್ದ ಆರೋಪದಲ್ಲಿ ಜೈಲುವಾಸ ಅನುಭವಿಸಿದ್ದರು. ಇದೆಲ್ಲ ಪ್ರಸಂಗ, ಅಹಿತಕ ಘಟನೆ ಬಳಿಕ ಸಹಜ ಜೀವನ ನಡೆಸುತ್ತಿರುವ ನಟ ದರ್ಶನ್ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

'ಕಾಟೇರ'ದಂತಹ ಹಿಟ್ ಸಿನಿಮಾ ನೀಡಿರುವ ನಿರ್ದೇಶಕ ತರುಣ್ ಸುಧೀರ್ ಅವರು ನಿರ್ದೇಶಿಸಿದ್ದ 'ಚೌಕ' (Chowka film) ಕನ್ನಡ ಸಿನಿಮಾದಲ್ಲಿ ನಟ ದರ್ಶನ್ ನಟಿಸಿದ್ದರು. ಈ ಸಿನಿಮಾ 2017ರಲ್ಲಿ ತೆರೆಕಂಡಿತ್ತು. ಈ ಸಿನಿಮಾದ ನಾಲ್ಕು ನಾಯಕರು ಜೈಲಿನಲ್ಲಿದ್ದಾಗ ಅವರು ಜೈಲಿನಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡುವ ಮಾಸ್ ಪಾತ್ರವನ್ನು ದರ್ಶನ್ ನಿರ್ವಹಿಸಿದ್ದರು. ಜೈಲಿನಲ್ಲಿ ಆರೋಪಿಯಾಗಿದ್ದ ನಟ ದರ್ಶನ್ ಚೌಕ ಸಿನಿಮಾ ನಾಯಕರಿಗೆ ಸಹಾಯ ಮಾಡುವ ಸೀನ್ ಗಳನ್ನು ಇದೇ ಬಳ್ಳಾರಿ ಜೈಲಿನಲ್ಲಿಯೇ ಚಿತ್ರೀಕರಿಸಲಾಗಿತ್ತು. ಈ ಸಿನಿಮಾ ರಿಲೀಸ್ ಆಗಿ ಸಕ್ಸಸ್ ಕಂಡಿತ್ತು.
ಎರಡನೇ ಭಾರಿಗೆ ಬಳ್ಳಾರಿ ಜೈಲು ದರ್ಶನ
ಈ ಚೌಕ ಸಿನಿಮಾ ಶೂಟಿಂಗ್ ವಿಚಾರವಾಗಿ ನಟ ದರ್ಶನ್ ಅವರು ಅಂದು ಬಳ್ಳಾರಿ ಜೈಲಿಗೆ ಭೇಟಿ ಕೊಟ್ಟಿದ್ದರು. ಇಂದು ನಿಜ ಜೀವನದಲ್ಲಿ ನಡೆದ ರೇಣುಕಾಸ್ವಾಮಿ ಹತ್ಯೆಯ ಆರೋಪ ಹೊತ್ತು ಅವರು ಎರಡನೇ ಬಾರಿಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿದ್ದ ನಟ ದರ್ಶನ್ಗೆ ವಿಶೇಷ ಸೌಲಭ್ಯ ನೀಡಲಾಗಿದೆ. ಆರಾಮಾಗಿ ಅವರು ಓಡಾಡಿಕೊಂಡಿದ್ದಾರೆ ಎಂಬ ಹೇಳುವ ಫೋಟೋಗಳು ವೈರಲ್ ಆಗುತ್ತಿದ್ದಂತೆ ಅವರನ್ನು ಇಂದು ಗುರುವಾರ ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಯಿತು. ಈ ವೇಳೆ ಅವರ ಅಪಾರ ಅಭಿಮಾನಿಗಳು ಜೈಲಿನ ಮುಂದೆ ಕಾದು ಕುಳಿತಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications