ನಟ ಗಣೇಶ್ಗೆ ಅರಣ್ಯ ಇಲಾಖೆ ನೋಟಿಸ್ ಜಾರಿ: ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ತಡೆ
ಬೆಂಗಳೂರು, ಆಗಸ್ಟ್ 17: ಬಂಡೀಪುರ ಅರಣ್ಯದ ಸೂಕ್ಷ್ಮ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿರುವ ಸ್ಯಾಂಡಲ್ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಆಕ್ಷೇಪ ಎದುರಾಗಿದೆ. ನೂತನ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಬಂಡೀಪುರದಲ್ಲಿ ನಟ ಗಣೇಶ್ ಅವರು ಶಾಶ್ವತ ಮನೆ ನಿರ್ಮಿಸುತ್ತಿದ್ದಾರೆ ಎನ್ನಲಾಗಿದೆ. ಕೆಲವು ದಿನಗಳಿಂದ ಈ ವಿಚಾರ ಸದ್ದು ಮಾಡುತ್ತಲೇ ಇತ್ತು. ಇದು ಅರಣ್ಯ ಸೂಕ್ಷ್ಮ ಪರಿಸರ ವಲಯವಾದ್ದರಿಂದ 'ಗಣೇಶ' ನಿವಾಸಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

ಇದೀಗ ಅದರ ಮುಂದುವರಿದ ಭಾಗವಾಗಿ ಅರಣ್ಯ ಇಲಾಖೆ ನಟ ಗಣೇಶ್ ಅವರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದೆ.
ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಹಳ್ಳಿಯ ಸರ್ವೆ ನಂಬರ್ 105 ರಲ್ಲಿ ಒಟ್ಟು 1 ಎಕರೆ 24 ಗುಂಟೆ ಸ್ವಂತ ಭೂಮಿಯಲ್ಲಿ ಹೊಂದಿರುವ ಗಣೇಶ್ ಅವರು ನಿರ್ಮಿಸುತ್ತಿದ್ದ ನಿವಾಸದ ಕಾಮಗಾರಿಗೆ ಬ್ರೇಕ್ ಬಿದ್ದಿದೆ. ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ವಿಚಾರ ಬಹಿರಂಗವಾಗುತ್ತಿದ್ದಂತೆ ನಟ ಗಣೇಶ್ ಅವರು ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೇ ಕಟ್ಟಡ ನಿರ್ಮಾಣ ಮೂಲಕ ಪರಿಸರ ವಲಯ ನಿರ್ವಹಣಾ ಸಮಿತಿ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.
ಪರಿಸರವಾದಿಗಳ ಆಕ್ಷೇಪ
ಮತ್ತೊಂದೆಡೆ ಗಣೇಶ್ ಅವರು ಇಲ್ಲಿ ತಾತ್ಕಾಲಿಕವಾಗಿ ಮನೆ ಕಟ್ಟುತ್ತಿದ್ದಾರೆ. ಅದಕ್ಕಾಗಿ ಅವರು ಸೂಕ್ಷ್ಮ ವಲಯದ ಮಾನಿಟರಿಂಗ್ ಸಮಿತಿಯಿಂದ ಅನುಮತಿ ಪಡೆದಿದ್ದಾರೆ ಅಂತಲೂ ಹೇಳಲಾಗಿದೆ. 2022ರಲ್ಲಿ ಸ್ವಂತ ಮನೆ ಅದರ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡುವುದಾಗಿ ಕೇಳಿದ್ದರು. ಇದಕ್ಕೆ ಅರಣ್ಯಾಧಿಕರಿಗಳು ಮುಚ್ಚಳಿಕೆ ಬರೆಸಿಕೊಂಡು ಅನುಮತಿ ನೀಡಿದ್ದರು. ಆದರೆ ಈಗ ಅಲ್ಲಿ ಜೆಸಿಬಿ ಮೂಲಕ ದೊಡ್ಡಮಟ್ಟದಲ್ಲಿ ಕೆಲಸ ನಡೆಯುತ್ತಿದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಆದರೆ ಇದೂವರೆಗೂ ನಟ ಗಣೇಶ್ ಅವರು ಬಂಡೀಪುರ ಅರಣ್ಯ ಪ್ರದೇಶದಲ್ಲಿನ ಮನೆ ನಿರ್ಮಾಣ ಕುರಿತು ಪ್ರತಿಕ್ರಿಯಿಸಿಲ್ಲ. ಇದು ಅವರ ಅಭಿಮಾನಿಗಳಲ್ಲಿ ಮತ್ತಷ್ಟು ಕಾರಣವಾಗಿದೆ. ಏಕೆಂದರೆ ತಮ್ಮ ನೆಚ್ಚಿನ ನಟ ಹೀಗೆ ನಿಯಮ ಉಲ್ಲಂಘಿಸಿ ಮನೆ ಕಟ್ಟುತ್ತಿದ್ದಾರಾ?. ಈ ವಿಚಾರವನ್ನು ನಂಬಲು ಅವರಿಗೆ ಕಷ್ಟವಾಗುತ್ತಿದೆ. ಶೀಘ್ರವೇ ಈಕುರಿತು ಗಣೇಶ್ ಅವರು ಅಧಿಕೃತ ಮಾಹಿತಿ ನೀಡಬೇಕಿದೆ.
ನಟ ಗಣೇಶ್ ಅವರಿಗೆ ಸದ್ಯ ಸದ್ಯ ಬಂಡಿಪುರ ಹುಲಿಧಾಮ ನಿರ್ದೇಶಕ ಡಾ.ಪಿ.ರಮೇಶ್ ಕುಮಾರ್ ನೋಟಿಸ್ ಜಾರಿ ಮಾಡಿದ್ದು, ಕಟ್ಟಡ ನಿರ್ಮಾಣ ಬಗ್ಗೆ ವಿವರಣೆ ಕೇಳಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications