Kamal Hasan: ಕಮಲ್ ಹಾಸನ್ ದೊಡ್ಡ ಪರಿಣಿತ ವ್ಯಕ್ತಿ ಅಲ್ಲ: ಕರ್ನಾಟಕ ಮಾಜಿ ಸಿಎಂ
ಬೆಂಗಳೂರು, ಮೇ 29: ಕನ್ನಡ ಭಾಷೆ ಕುರಿತು ತಮಿಳು ನಟ ಕಮಲ್ ಹಾಸನ್ ಹೇಳಿರುವ ಹೇಳಿಕೆ ಹಾಗೂ ನಂತರ ತಾನು ಕ್ಷಮೆ ಕೇಳಲ್ಲ ಎಂದು ನೀಡಿದ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕನ್ನಡಪರ ಹೋರಾಟಗಾರರ ಮಾತ್ರವಲ್ಲದೇ, ಕಲಾವಿದರು, ರಾಜಕಾರಣಗಳು ಸಹ ಕಮಲ್ ಹಾಸನ್ ವಿರುದ್ಧ ಕೆಂಡವಾಗಿದ್ದಾರೆ. ಕನ್ನಡಿಗರ ಬಳಿ ಕ್ಷಮಾಪಣೆ ಕೇಳಬೇಕು ಎಂಬ ಆಗ್ರಹ ಜೋರಾಗಿದೆ.
ಇದೀಗ ಇದೇ ವಿಚಾರವಾಗಿ ಬಿಜೆಪಿ ಸಂಸದ ಹಾಗೂ ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಕುರಿತು ಹಗುರವಾಗಿ ಮಾತನಾಡಿದ ನಟ ಕಮಲ್ ಹಾಸನ್ ಕ್ಷಮೆ ಕೇಳಬೇಕು ಎಂದರು.

ತಮಿಳು ನಟ ಕಮಲ್ ಹಾಸನ್ ಕನ್ನಡ ಭಾಷೆಗೆ ಅಪಮಾನ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನ್ನಡ ಬಹಳ ಹಳೆಯ ಪ್ರಾಚೀನ ಭಾಷೆ. ಭಾಷೆಯ ಪ್ರಾಚೀನತೆ ಹಲವಾರು ವಿಧಾನದಲ್ಲಿ ಇರಲಿದೆ. ಕಮಲ್ ಹಾಸನ್ ದೊಡ್ಡ ಪರಿಣಿತ ಅಲ್ಲ. ಭಾಷೆಯ ಮೇಲೆ ಮಾತನಾಡುವಾಗ ಹಿಡಿತ ಇರಬೇಕು. ಅವರು ತಮ್ಮ ವ್ಯಕ್ತಿತ್ವ ಉಳಿಸಿಕೊಳ್ಳಬೇಕಾದರೆ ಕ್ಷಮಾಪಣೆ ಕೇಳಬೇಕು ಎಂದು ಅವರು ತಿಳಿಸಿದರು.
ರಾಜ್ಯ ಸರ್ಕಾರಕ್ಕೆ ಕೋರ್ಟ್ ಛೀಮಾರಿ: ಬೊಮ್ಮಾಯಿ
ಹುಬ್ಬಳ್ಳಿ ಪೊಲಿಸ್ ಠಾಣೆ ಮೇಲೆ ದಾಳಿ ಮಾಡಿರುವ ಪ್ರಕರಣವನ್ನು ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ಕ್ರಮ ಸರಿಯಿಲ್ಲ ಎಂದು ಹೈಕೋರ್ಟ್ ಛೀಮಾರಿ ಹಾಕಿದೆ. ಗುರುವಾರ ಹೈಕೋರ್ಟ್ ಪೀಠ ಹುಬ್ಬಳ್ಳಿ ಗಲಭೆ ಪ್ರಕರಣದ ಕುರಿತು ತೀರ್ಪು ನೀಡಿದೆ. ರಾಜ್ಯ ಸರ್ಕಾರ ಕ್ರಿಮಿನಲ್ ಕೇಸ್ ಹಿಂಪಡೆದಿತ್ತು. ಆ ಕ್ರಮ ಸರಿಯಲ್ಲ ಎಂದು ಆದೇಶ ಮಾಡಿದೆ.
ನಾನು ಈ ಹಿಂದೆ ಹೇಳಿದ್ದೆ ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವ ಪ್ರಕರಣ ವಾಪಸ್ ಪಡೆಯುವುದು ಸರಿಯಲ್ಲ. ಆದರೂ ರಾಜಕೀಯ ಒತ್ತಡಕ್ಕೆ, ಓಲೈಕೆ ರಾಜಕಾರಣಕ್ಕೆ ಕೇಸ್ ವಾಪಸ್ ಪಡೆದಿದ್ದರು. ನ್ಯಾಯಾಲಯ ಸರಿಯಾದ ಛೀಮಾರಿ ಹಾಕಿದೆ. ರಾಜ್ಯದ ಸಚಿವ ಸಂಪುಟ, ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡಬೇಕೇ ಹೊರತು. ಒಲೈಕೆ ರಾಜಕಾರಣ ಮಾಡಬಾರದು. ಇನ್ನಾದರೂ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಮಾಡಿದವರ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು.
ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲ
ಇನ್ನೂ ಕರಾವಳಿ ಭಾಗದ ಪ್ರಮುಖ ನಗರವಾಗಿರುವ ಮಂಗಳೂರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದೆ. ಯಾರಿಗೂ ಪೊಲೀಸರ ಬಗ್ಗೆ ಭಯ ಇಲ್ಲದಂತಾಗಿದೆ. ಪೊಲೀಸ್ ಠಾಣೆಗಳು ಭ್ರಷ್ಟಾಚಾರದ ಕೇಂದ್ರಗಳಾಗಿವೆ. ಹೀಗಾಗಿ ಸಮಾಜ ಘಾತುಕ ಶಕ್ತಿಗಳು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿವೆ. ರಾಜ್ಯ ಸರ್ಕಾರದ ಓಲೈಕೆ ರಾಜಕಾರಣದಿಂದ ಜನರು ಸರ್ಕಾರದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತಾಗಿದೆ ಎಂದು ಹೇಳಿದರು.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications