Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್
Kishore Kumar Huli: ಒಟ್ಟಿಗೆ ಒಂದು ರಾಷ್ಟ್ರದಂತೆ ?, ನಮ್ಮನ್ನು ದ್ವೇಷದ ವಿಷಕಾರಿ, ಹಿಂದೂ - ಮುಸ್ಲಿಂ - ಕ್ರಿಶ್ಚಿಯನ್ನರೆಂದು ಇನ್ನೆಂದೂ ಒಂದಾಗಲು ಸಾಧ್ಯವೇ ಇಲ್ಲದಂತೆ ಒಡೆದ ನಂತರ ನಿಮಗೆ ನಾಚಿಕೆಯೆಂಬುದೇನಾದರೂ ಇದೆಯೇ ಎಂದು ನಟ ಕಿಶೋರ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವನ್ನು ಬಳಸಿ ಬರೆದಿರುವ ಬರಹವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಒಟ್ಟಿಗೆ ಒಂದು ರಾಷ್ಟ್ರದಂತೆ ಈ ಯುದ್ಧ ಅನಿಶ್ಚಿತ ಪರಿಸ್ಥಿತಿಯನ್ನು ನಾವು ಎದುರಿಸಬೇಕಾಗಿದೆ. ಕೋವಿಡ್ ಸಂದರ್ಭದಲ್ಲಿ ಒಂದಾದಂತೆ / ಕೋವಿಡ್ನಂತಹ ಸಂಕಷ್ಟದ ಸಮಯದಂತೆಯೇ ಈಗಲೂ ಮಧ್ಯಪ್ರಾಚ್ಯದ ಸಂಕಷ್ಟದ ಈ ಸವಾಲನ್ನು ಸಹ ಎದುರಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈಚೆಗೆ ಹೇಳಿದ್ದರು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಬರಹವೊಂದನ್ನು ಹಂಚಿಕೊಂಡಿರುವ ನಟ ಕಿಶೋರ್ ಕುಮಾರ್ ಅವರು, ನಮ್ಮನ್ನು ದ್ವೇಷದ ವಿಷಕಾರಿ, ಹಿಂದೂ ಮುಸ್ಲಿಂ ಕ್ರಿಶ್ಚಿಯನ್ನರೆಂದು ಇನ್ನೆಂದೂ ಒಂದಾಗಲು ಸಾಧ್ಯವೇ ಇಲ್ಲದಂತೆ ಒಡೆದ ನಂತರ, ನಿಮಗೆ ನಾಚಿಕೆಯೆಂಬುದೇನಾದರೂ ಇದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಮುಂದುವರಿದು ಇಲ್ಲ! ನಾವು ಭಾರತದ ಜನ ತಯಾರಿಲ್ಲ. ನಿಮ್ಮ ರಾಜಿ, ಶರಣಾಗತಿಯಿಂದಾಗಿ ನಾವು ಇನ್ನೂ ಎಷ್ಟು ಸವಾಲುಗಳನ್ನು ಎದುರಿಸಬೇಕು. ನಿಮ್ಮ ತಪ್ಪುಗಳು, ರಹಸ್ಯಗಳನ್ನು ಮುಚ್ಚಿಡಲು ನಾವಿನ್ನೆಷ್ಟು ಬೆಲೆ ತೆರಬೇಕು. ಸಾಮೂಹಿಕ ಕೊಲೆಗಾರರು ಮತ್ತು ಶಿಶುಕಾಮಿಗಳನ್ನು ಅಪ್ಪಿಕೊಂಡು "ನಾವು ಯುದ್ಧ ಅಪರಾಧಿಗಳ ಜೊತೆ ನಿಲ್ಲುತ್ತೇವೆ" ಎಂದು ಘೋಷಿಸುವ ಮೊದಲು ನೀವು ನಮ್ಮನ್ನು ಕೇಳಿದ್ದಿರಾ. ರಫೇಲ್ನಿಂದ ಎಪ್ಸ್ಟೀನ್ವರೆಗೆ, ನೋಟು ರದ್ದತಿಯಿಂದ ಕೊರೊನಾ ಲಾಕ್ಡೌನ್ವರೆಗೆ, ಕೃಷಿ ಕಾನೂನುಗಳಿಂದ ಅಗ್ನಿವೀರ್ವರೆಗೆ, ಮಣಿಪುರದಿಂದ ಕಾಶ್ಮೀರ, ಲಡಾಖ್ ನವರೆಗೆ ನಿಮ್ಮ ಯಾವುದೇ ಉನ್ಮಾದ ಭರಿತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ನಮ್ಮನ್ನೋ ಅಥವಾ ವಿರೋಧ ಪಕ್ಷದ ನಮ್ಮ ಪ್ರತಿನಿಧಿಗಳನ್ನೋ ಅಥವಾ ನಮ್ಮ ತೆರಿಗೆಯಿಂದ ನಾವು ಸಂಬಳ ಕೊಟ್ಟಿಟ್ಟಿರುವ ನಿಮ್ಮ ಸ್ವಂತ ಅಧಿಕಾರಿಗಳನ್ನೋ ಕೇಳಿದ್ದಿರಾ ಎಂದು ನಟ ಕಿಶೋರ್ ಕುಮಾರ್ ಅವರು ಪ್ರಶ್ನೆ ಮಾಡಿದ್ದಾರೆ.
ನಿಮ್ಮ ರಾಜಿ, ಸರೆಂಡರ್ ಮತ್ತು ಮೂರ್ಖತನದ ಪರಿಣಾಮವಾಗಿ ಬಂದ ಸವಾಲುಗಳನ್ನು ಎದುರಿಸಲು ಈಗ ನಮ್ಮನ್ನು ಕೇಳಲು ನಿಮಗೆ ಯಾವ ಹಕ್ಕಿದೆ. ಇನ್ನು ಸಾಕು.. ಕೊರೊನಾ ಸಮಯದಲ್ಲಿ ಮಾಡಿದ ರೀತಿ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ. ಸತ್ತ 50 ಲಕ್ಷ ಜನರನ್ನು ನಿಮ್ಮ ಕಡತಗಳಲ್ಲಿ ಸತ್ತವರೆಂದು ಪರಿಗಣಿಸಲೂ ಯೋಗ್ಯರಲ್ಲದಂತೆ ಮಾಡಿದಿರಲ್ಲ. ದೇಶದ ಅತ್ಯುನ್ನತ ಸ್ಥಾನವನ್ನು ನಗೆಪಾಟಲಾಗಿಸಿದ, ಸರ್ವಾಧಿಕಾರದ ಮತ್ತಿನ ನಿಮ್ಮ ನಾನ್ಬಯಲಾಜಿಕಲ್ ಹುಚ್ಚುತನಕ್ಕೆ ಪದವಿ ಬಿಟ್ಟು ಹೊರಡುವ ಸಮಯ ಬಂದಿದೆ ಎಂದೂ ನಟ ಕಿಶೋರ್ ಅವರ ತಮ್ಮ ಬರಹದಲ್ಲಿ ಉಲ್ಲೇಖ ಮಾಡಿದ್ದಾರೆ.
Kishore Kumar Huli ನೆಟ್ಟಿಗರು ಹೇಳಿದ್ದೇನು
ನಟ ಕಿಶೋರ್ ಕುಮಾರ್ ಅವರ ಈ ಬರಹಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಜಾಪ್ರಭುತ್ವದಲ್ಲಿ ಇದೆಲ್ಲಾವೂ ಬಾಲಿಶ ಪ್ರಶ್ನೆ. ಇದು ಶಕ್ತಿ ಕಳಕೊಂಡು ಹಲವು ದಶಕಗಳೆ ಕಳಿದಿವೆ. ರಾಜಕೀಯ ಆಡಳಿತ ತಂತ್ರಗಾರಿಕೆ, ರಾಜಕೀಯ ನಡೆ ಎಲ್ಲವು ಬದಲಾಗಿದೆ. ಚುನಾವಣೆಯಲ್ಲಿ ನಿಂತು ಒಂದು ಪಾರ್ಟಿಯ ಮೇಲೆ ನಿಂತು ದ್ವನಿ ಆಗಬೇಕು ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ. ಶ್ಯಾಮ್ ಭೀಮಗುಳಿ ಎನ್ನುವವರು, ನೀವೇ ಇಲ್ಲಿ ಇಷ್ಟೊಂದು ಜನ ಕೇಳಿದರೂ ಏನೂ ಹೇಳುವುದಿಲ್ಲ. ಅಂಥದ್ದರಲ್ಲಿ ಪ್ರಧಾನಿಯವರನ್ನು "ನಮ್ಮ ಹತ್ರೆ ಕೇಳಿದ್ರಾ" ಅಂತ ಹೇಳಿದರೆ ಅವರಾದರೂ ಯಾಕೆ ಕೇಳ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ.
ಹೌದು ಇದೇ ಪ್ರಶ್ನೆ ಕಾಂಗ್ರೆಸ್ ಸರ್ಕಾರವಿದ್ದಾಗ ಕೇಳಿದ್ದೀರಾ. ಕಾಂಗ್ರೆಸ್ ಇದ್ದಾಗ ಜಾತಿ ಧರ್ಮ ಎಲ್ಲ ಒಟ್ಟುಗೂಡಿಸಿ ನಾವೆಲ್ಲ ಒಂದು ಎನ್ನುವ ವೇದಘೋಷ ಏನಾದ್ರೂ ಮಾಡಿದ್ದು ಉದಾಹರಣೆ ಇದ್ಯಾ, ಗರೀಬಿ ಹಠಾವೋ ಹೆಸರಲ್ಲಿ ಬಡತನ ಏನಾದ್ರೂ ದೂರ ಮಾಡಿದ್ದು ಇದ್ಯಾ, ದೇಶದ ಮೇಲೆ ದಾಳಿ ಇರಲಿಲ್ಲವೇ ಎಂದೂ ಕೆಲವರು ಪ್ರಶ್ನೆ ಮಾಡಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Foundation of IT ಆಯ್ಕೆ ವೈರಲ್: ಭಾಷಾ ಸಮಾನತೆಗೆ ದಕ್ಷಿಣ ಭಾರತೀಯರ ಪ್ರಶ್ನೆ, ನಾರ್ಥಿ ಮಾರ್ಕ್ಸ್ ಕಾರ್ಡ್ Viral Post -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications