Belagavi Riots: ಬೆಳಗಾವಿ ಬೆಳವಣಿಗೆ ಬಗ್ಗೆ ನಟ ನವೀನ್ ಶಂಕರ್ ಮಾತಿಗೆ ಮೆಚ್ಚುಗೆ!
ಬೆಳಗಾವಿಯಲ್ಲಿ ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆ ನಡೆದಿರುವ ವಿಚಾರ ಇದೀಗ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದೆ. ಮಹಾರಾಷ್ಟ್ರದ ಎಂಇಎಸ್ ಪುಂಡರ ಹಾವಳಿ ಹೆಚ್ಚಾಗುತ್ತಿದ್ದು. ಎರಡೂ ರಾಜ್ಯಗಳ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಬೆಳಗಾವಿ ವಿಚಾರವಾಗಿ ಗಡಿ ವಿವಾದ ಹಲವು ದಶಕಗಳಿಂದ ಇದೆ. ಇನ್ನು ಇದೀಗ ಮೊದಲ ಬಾರಿ ಎನ್ನುವಂತೆ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಇದೀಗ ಭಾಷಾ ವಿವಾದ ಶುರುವಾಗಿದ್ದು. ಭಾಷಾ ವಿವಾದದಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರದ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಬೆಳಗಾವಿಯಲ್ಲಿ ಇಷ್ಟೆಲ್ಲ ವಿವಾದಗಳ ಹೊರತಾಗಿಯೂ ಕನ್ನಡ ಚಿತ್ರರಂಗ ಯಾವೊಬ್ಬರ ನಟ ಅಥವಾ ನಟಿಯೂ ಈ ವಿಚಾರದ ಬಗ್ಗೆ ಮಾತನಾಡಿಲ್ಲ ಎನ್ನುವ ಆಕ್ರೋಶ ಕನ್ನಡಿಗರಲ್ಲಿ ಇತ್ತು. ಇದೀಗ ಈ ವಿಚಾರದ ಬಗ್ಗೆ ನಟ ನವೀನ್ ಶಂಕರ್ ಅವರು ಮೌನ ಮುರಿದಿದ್ದಾರೆ.
ಕರ್ನಾಟಕದ ಬೆಳಗಾವಿಯಲ್ಲಿ ಎಂಇಎಸ್ ಹಾಗೂ ಮರಾಠಿ ಪುಂಡರ ಹಾವಳಿ ಹೆಚ್ಚಾಗಿದೆ. ಇಲ್ಲಿ ಸಮಸ್ಯೆ ಶುರುವಾಗುವ ಪ್ರತಿ ಬಾರಿಯೂ ಮಹಾರಾಷ್ಟ್ರ ಹಾಗೂ ಮರಾಠಿಗರೇ ಕಾಲು ಕೆರೆದುಕೊಂಡು ಬರುತ್ತಾರೆ ಎನ್ನುವ ಆರೋಪ ಕನ್ನಡಿಗರದ್ದು. ಇಲ್ಲಿ ಪರಿಸ್ಥಿತಿ ಬಿಗಡಾಯಿಸಿದಾಗೆಲ್ಲವೂ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಿಗರು ಧ್ವನಿ ಎತ್ತಿದ್ದಾರೆ. ಆದರೆ, ಕನ್ನಡ ಚಿತ್ರರಂಗದ ಯಾವೊಬ್ಬ ನಟ - ನಟಿಯೂ ಈ ವಿಚಾರವಾಗಿ ಮಾತನಾಡೆ ಇರುವುದು ಹಾಗೂ ಕನ್ನಡ ಸಾಹಿತಿಗಳು ಇಲ್ಲಿಯ ವರೆಗೆ ಧ್ವನಿ ಎತ್ತದೆ ಇರುವುದು ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ ನಟ ನವೀನ್ ಶಂಕರ್ ಅವರು ಮಾತನಾಡಿದ್ದಾರೆ. ನವೀನ್ ಶಂಕರ್ ಅವರು ಈ ವಿಚಾರವಾಗಿ ಮಾತನಾಡಿರುವುದು ಕನ್ನಡಿಗರ ಮನಸ್ಸು ಗೆದ್ದಿದೆ. ಕನ್ನಡಿಗರು ಈ ವಿಷಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಬೆಳಗಾವಿ ವಿಚಾರ ನಟ ನವೀನ್ ಶಂಕರ್ ಹೇಳಿದ್ದೇನು ?
ಬೆಳಗಾವಿಯಲ್ಲಿ ಕಳೆದ 5 ದಿನಗಳಿಂದಲೂ ಉದ್ವಿಗ್ನ ಪರಿಸ್ಥಿತಿ ಇದೆ. ಕನ್ನಡ ಹಾಗೂ ಮರಾಠಿ ಭಾಷಿಕರ ನಡುವೆ ಮಾರಾಮಾರಿ, ಮಸಿ - ಕೇಸರಿ ಬಳಿಯುವುದು. ಸರ್ಕಾರಿ ಬಸ್ಗಳ ಮೇಲೆ ದಾಳಿಯಂತಹ ಪ್ರಕರಣಗಳು ನಡೆಯುತ್ತಿವೆ. ಆದರೆ, ಇದನ್ನು ವಿರೋಧಿಸಿ ಕನ್ನಡ ಚಿತ್ರರಂಗದಿಂದ ಒಂದೇ ಒಂದು ಹೇಳಿಕೆ / ಪೋಸ್ಟ್ ಸಹ ಕಾಣಿಸಿಲ್ಲ.
ಕನ್ನಡದ ನಟ ನವೀನ್ ಶಂಕರ್ ಅವರು ಪೋಸ್ಟ್ ಮಾಡಿದ್ದಾರೆ. ಬೆಳಗಾವಿಯಲ್ಲಿ ಆಗುತ್ತಿರುವ ಬೆಳವಣಿಗೆಗಳು ಆತಂಕ ಮೂಡಿಸುತ್ತಿವೆ. ಕನ್ನಡಿಗರನ್ನು ಅವಮಾನಿಸಿದವರ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ರಾಜಕಾರಣಿಗಳು ಪದೇ ಪದೇ ತೊಂದರೆ ಅನುಭವಿಸುತ್ತಿರುವ ಕನ್ನಡಿಗರಿಗೆ, ಶಾಶ್ವತ ಪರಿಹಾರ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ. #ಸಿರಿಗನ್ನಡಂ_ಗೆಲ್ಗೆ ಎಂದು ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕನ್ನಡಿಗರ ಮೆಚ್ಚುಗೆ: ನವೀನ್ ಅವರ ಟ್ವೀಟ್ಗೆ ಹಲವು ಕನ್ನಡಿಗರು ಮೆಚ್ಚುಗೆ ಸೂಚಿಸಿದ್ದಾರೆ. ನೀವಾದರೂ ನಮ್ಮ ಬೆಳಗಾವಿಯ ಪರವಾಗಿ ಧ್ವನಿ ಎತ್ತಿದ್ದೀರಿ ತುಂಬಾ ಧನ್ಯವಾದಗಳು. ❤️🙏, ಕನ್ನಡಿಗರ ಪರವಾಗಿ ದನಿ ಎತ್ತಿದ್ದಕ್ಕೆ ನಿಮಗೆ ನನ್ನೀಗಳು ಸರ್ 🙏🏼🙏 , ಚಿತ್ರರಂಗದಿಂದ ಒಬ್ಬರಾದರು ಧ್ವನಿ ಎತ್ತಿದ್ರಲ್ಲ ಧನ್ಯವಾದಗಳು ಸರ್ . @KicchaSudeep @TheNameIsYash ನೀವು ಇದರ ಬಗ್ಗೆ ಧ್ವನಿ ಎತ್ತಬೇಕು. ಕನ್ನಡದ ಪ್ರೇಕ್ಷಕರಿಂದ ಗಳಿಸಿದ ಹಣ ಕೀರ್ತಿ ಯಶಸ್ಸು ಮಾತ್ರ ಬೇಕು. ಅದೇ ಕನ್ನಡಿಗರಿಗೆ ಆದ ಅವಮಾನ, ನೋವು ಸಂಕಟದ ಬಗ್ಗೆ ಮಾತನಾಡಲು ಸಮಯವಿಲ್ಲ, ಜಾಣ ಕುರುಡು ಹಾಗೂ ಕಿವುಡು ಪ್ರದರ್ಶನ ಎಂದು ಕನ್ನಡಿಗರು ಸೋಷಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Anupama Gowda: ನನ್ನ ಮದುವೆಗೆ ನನ್ನನ್ನೂ ಕರೆಯಿರಿ: ಎಂಗೇಜ್ಮೆಂಟ್ ಸುದ್ದಿ ಹಬ್ಬಿಸಿದವರಿಗೆ ನಿರೂಪಕಿ ಅನುಪಮಾ ಗೌಡ ಕ್ಲಾರಿಟಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications