Shiva Rajkumar: ಅಣ್ಣಾವ್ರ ತವರೂರಿಗೆ ಭೇಟಿ ಕೊಟ್ಟ ನಟ ಶಿವರಾಜಕುಮಾರ್ ದಂಪತಿ
ಚಾಮರಾಜನಗರ, ನವೆಂಬರ್ 02: ಸಾಲು ಸಾಲು ಸಿನಿಮಾಗಳಲ್ಲಿ, ರಿಯಾಲಿಟಿ ಶೋನಲ್ಲಿ ಬ್ಯೂಸಿ ಇರುವ ಹಿರಿಯ ನಟ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರು ದೀಪಾವಳಿ ಹಬ್ಬವನ್ನು ಗಾಜನೂರಿನಲ್ಲಿ ಆಚರಿಸುತ್ತಿದ್ದಾರೆ. ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಅವರು ತಮಿಳುನಾಡಿನ ತಾಳವಾಡಿ ಸಮೀಪದ ಗಾಜನೂರಿಗೆ ಶನಿವಾರ ಭೇಟಿ ನೀಡಿದ್ದಾರೆ. ದಂಪತಿ ಸಮೇತರಾಗಿ ಬಂದು ಅಪ್ಪಾಜಿಯ ಜನ್ಮಭೂಮಿಯಲ್ಲಿ ಬೆಳಕಿನ ಹಬ್ಬ ಆಚರಿಸಿದ್ದಾರೆ.
ವರನಟ ಡಾ.ರಾಜಕುಮಾರ್ ಅವರು ಹುಟ್ಟಿ ಬೆಳೆದ ಗಾಜನೂರಿಗೆ ತವರಿಗೆ ಶಿವರಾಕುಮಾರ್ ಹಾಗೂ ಗೀತಾ ಶಿವರಾಜಮಾರ್ ಭೇಟಿ ನೀಡಿದ್ದಾರೆ. ಗಾಜನೂರಿನಲ್ಲೇ ಡಾ.ರಾಜ್ ಸಹೋದರಿಯಾದ ಸೋದರತ್ತೆ ನಾಗಮ್ಮ ಅವರು ವಾಸಿಸುತ್ತಿದ್ದಾರೆ. ಅವರನ್ನು ಕಂಡ ಶಿವಣ್ಣ ದಂಪತಿ ಆಶೀರ್ವಾದ ಪಡೆದಿದ್ದಾರೆ. ಈ ಮೂಲಕ ಶಿವಣ್ಣ ಅವರ ದೀಪಾವಳಿ ಸಂಭ್ರಮ ಡಬಲ್ ಆಗಿದೆ ಎನ್ನಲಾಗಿದೆ.

ಶಿವರಾಜ್ ಕುಮಾರ್ ಅವರನ್ನು ಕಂಡ ನಾಗಮ್ಮ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ನಾಗಮ್ಮ ಅವರ ಆರೋಗ್ಯ ವಿಚಾರಿಸಿ ಕೆಲ ಹೊತ್ತು ಅವರೊಂದಿಗೆ ದಂಪತಿ ಕಳೆದಿದ್ದಾರೆ. ಅಣ್ಣಾವ್ರು ಹುಟ್ಟಿದ ಹಳೇ ಮನೆ, ಮಂಟೇಸ್ವಾಮಿ ದೇಗುಲ ಸೇರಿದಂತೆ ಊರನ್ನು ಸುತ್ತಾಡಿದ ಶಿವಣ್ಣ ದಂಪತಿ ಒಂದಷ್ಟು ಹಳೇ ನೆನಪುಗಳನ್ನು ಸ್ಮರಿಸಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರ ಸ್ಥಾಪಿಸಿದ್ದ ಕ್ಷೀರ ಕೇಂದ್ರಕ್ಕೂ ಭೇಟಿ ಕೊಟ್ಟು ಶುಭ ಹಾರೈಸಿದರು.
ಗಾಜನೂರಿಗೆ ಶಿವಣ್ಣ ದಂಪತಿ ಬಂದಿರುವ ಸುದ್ದಿ ತಿಳಿಯುತ್ತಿದ್ದಂತೆ ಇಷ್ಟದ ನಟನನ್ನು ನೋಡಲು ಅಭಿಮಾನಿಗಳ ದಂಡೆ ಹರಿದು ಬಂತು. ಶಿವಣ್ಣ ಹಾಗೂ ಗೀತಾ ಅವರನ್ನು ನೋಡಿದ ಅಭಿಮಾನಿಗಳು ಸೆಫ್ಟಿ ತೆಗೆಸಿಕೊಳ್ಳಲು ಮುಗಿಬಿದ್ದರು.
'ಭೈರತಿ ರಣಗಲ್' ಗೆ ಕಾಯುತ್ತಿರುವ ಫ್ಯಾನ್ಸ್
ಇತ್ತೀಚೆಗೆ ಶಿವಣ್ಣಾ ಆರೋಗ್ಯದಲ್ಲಿ ಕೊಂಚ ಏರು ಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಗುಣಮುಖರಾಗಿರುವ ಶಿವಣ್ಣ ಅವರು ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿಯೂ ಸಕ್ರಿಯವಾಗಿದ್ದಾರೆ. ಇತ್ತ ಅವರ ನಟನೆಯ 'ಭೈರತಿ ರಣಗಲ್' ಸಿನಿಮಾ ಇದೇ ತಿಂಗಳು ನವೆಂಬರ್ 15 ರಂದು ಬಿಡುಗಡೆ ಆಗಲಿದೆ. ಇದೊಂದಿಗೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
'ಬೈರತಿ ರಣಗಲ್' ಸಿನಿಮಾವನ್ನು ನಿರ್ದೇಶಕ ನರ್ತನ್ ಅವರು ನಿರ್ದೇಶಿಸಿದ್ದಾರೆ. ಇದನ್ನು ಸ್ವತಃ ಗೀತಾ ಶಿವರಾಜಕುಮಾರ್ ಅವರೇ ನಿರ್ಮಾಣ ಮಾಡಿದ್ದಾರೆ. ಗೀತಾ ಪಿಕ್ಟರ್ಚ್ ಹೆಸರಿನಲ್ಲಿ ನಿರ್ಮಾಣ ಸಂಸ್ಥೆಯಡಿ ಈ ಸಿನಿಮಾ ತಯಾರಾಗಿದೆ. ಈ ಚಿತ್ರದಲ್ಲಿ ನಟ ಶಿವಣ್ಣ ಯೂನಿಕ್ ಸ್ಟೈಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆಗಳು ಇವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications