ಡಿಕೆಶಿ ರಾಜಕೀಯ ಆಫರ್ ತಿರಸ್ಕರಿಸಿದ ನಟ ಶಿವರಾಜ್ ಕುಮಾರ್ ಸೂಚಿಸಿದ ಹೆಸರು ಯಾರದ್ದು?
ಬೆಂಗಳೂರು, ಡಿಸೆಂಬರ್ 10: ಬೆಂಗಳೂರಿನಲ್ಲಿ ನಡೆದ ಈಡಿಗ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ ಕುಟುಂಬದ ಹಿರಿಯ ಮಗ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರಿಗೆ ರಾಜಕೀಯಕ್ಕೆ ಬರುವಂತೆ ಆಹ್ವಾನಿಸಿದ್ದರು. ಇದನ್ನ ನಯವಾಗಿ ತಿರಸ್ಕರಿಸಿದ ನಟ ಶಿವರಾಜ ಕುಮಾರ್ ರಾಜಕೀಯಕ್ಕೆ ಬೇರೆಯವರ ಹೆಸರನ್ನು ಸೂಚಿಸಿದ್ದಾರೆ.
ಈಡಿಗ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಅವರು ನಟ ಶಿವ ರಾಜ್ಕುಮಾರ್ ಅವರಿಗೆ ಟಿಕೆಟ್ ಕೊಡುತ್ತೇನೆ ಎಂದರು. ಇದಕ್ಕೆ ವೇದಿಕೆಯಲ್ಲಿಯೆ ಪ್ರತಿಕ್ರಿಯಿಸಿದ ಶಿವಣ್ಣ, ನಮ್ಮ ತಂದೆ ನಮಗೆ ಬಣ್ಣ ಹಚ್ಚಿ ನಟನೆ ಮಾಡುವುದನ್ನು ಹೇಳಿ ಕೊಟ್ಟಿದ್ದಾರೆ. ನಾನು ನಟನೆಯನ್ನೇ ಮುಂದುವರಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ನಾನು ಎಂದಿಗೂ ರಾಜಕೀಯಕ್ಕೆ ಬರುವುದಿಲ್ಲ ಎಂದ ಶಿವ ರಾಜ್ಕುಮಾರ್, ನಮ್ಮಪ್ಪ ನಟನೆ ಹೇಳಿಕೊಟಿದ್ದಾರೆ. ನಮಗೆ ಅದೊಂದೆ ಸಾಕು. ನನಗೆ ರಾಜಕೀಯ ಬೇಡ, ಬಂಗಾರಪ್ಪನವರ ಪುತ್ರಿ ನಮ್ಮನೆ ಸೊಸೆಯಾಗಿದ್ದಾರೆ. ಅವರು ಎಂದಿಗೂ ನನ್ನನ್ನು ಪಾಲಿಟಿಕ್ಸ್ಗೆ ಬರುವಂತೆ ಕೇಳಿಲ್ಲ. ಪತ್ನಿ ಗೀತಾ ಈಗಾಗಲೇ ರಾಜಕಾರಣದಲ್ಲಿದ್ದಾರೆ. ಅವರು ಬೇಕಾದರೆ ಎಲೆಕ್ಷನ್ನಲ್ಲಿ ನಿಲ್ಲುತ್ತೇನೆ ಎಂದರೆ, ನಾನು ಬೆಂಬಲು ಕೊಡಲು ಸಿದ್ಧನಿದ್ದೇನೆ. ಅವರ ಜೊತೆ ನಾನು ನಿಂತಿರುತ್ತೇನೆ ಎಂದು ಪತ್ನಿಯ ಹೆಸರು ಸೂಚಿಸಿದರು.
ಸಮುದಾಯ ಬೇಡಿಕೆ ಈಡೇರಿಕೆ ವಿಶ್ವಾಸ: ಶಿವಣ್ಣ
ನಾನು ಹುಟ್ಟುವುದಕ್ಕೆ ಮೊದಲೇ ಈಡಿಗರ ಸಂಘ ಸ್ಥಾಪನೆಯಾಗಿದೆ. ಇಂದು ಬೃಹತ್ ಸಮಾವೇಶ ನಡೆದಿದೆ. ಯಾವುದೇ ಕಾರ್ಯಕ್ರಮವಾದರೂ ಸಹಿತ ಭಿನ್ನಾಭಿಪ್ರಾಯಗಳು ಬಂದಿರುತ್ತವೆ. ಕಾರ್ಯಕ್ರಮವನ್ನು ಯಾರು, ಹೇಗೆ ಮಾಡಿದರೂ ಎಂಬುದಕ್ಕಿಂತ ಯಾರಿಗಾಗಿ ಮಾಡಿದರು ಎಂಬುದು ಮುಖ್ಯವಾಗುತ್ತದೆ.
ಈಗಾಗಲೇ ಸಮುದಾಯ ಮುಖಂಡರು, ಶಾಸಕರು, ಸಂಘದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಾರೆ ಎಂದು ನಂಬಿಕೆ ಇದೆ ಎಂದು ತಿಳಿಸಿದೆ.
ಕಾಂಗ್ರೆಸ್ ಪರ ಶಿವಣ್ಣ ಪ್ರಚಾರ
ಪ್ರಸಕ್ತ ಸಾಲಿನಲ್ಲಿ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ 2023 ವೇಳೆ ಕಾಂಗ್ರೆಸ್ ನಲ್ಲಿರುವ ಪತ್ನಿ ಗೀತಾಗಾಗಿ ನಟ ಶಿವರಾಜ್ ಕುಮಾರ್ ಅವರು ಚಾಮರಾಜನಗರ ಸೇರಿದಂತೆ ವಿವಿಧ ಕಡೆ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದರು. ಆಗಲೂ ಸಹ ಅವರು ಗೀತಾ ಅವರ ಬೆನ್ನೆಲುಬಾಗಿ ನಿಂತಿದ್ದರು. ಹಿಂದಿನಿಂದಲೂ ಡಾ.ರಾಜ್ ಕುಟುಂಬದ ಸದಸ್ಯರಿಗೆ ರಾಜಕೀಯಕ್ಕೆ ಒಂದಲ್ಲ ಒಂದು ಸಂದರ್ಭದಲ್ಲಿ ಆಹ್ವಾನ ಇಡುತ್ತಲೆ ಬರಲಾಗಿದೆ. ಆದರೆ ರಾಜ್ ಕುಮಾರ್ ಮಕ್ಕಳು ವಿನಮ್ರತೆಯಿಂದ ಪಾಲಿಟಿಕ್ಸ್ಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications