Kichcha Sudeep : ಚುನಾವಣೆ ಹೊತ್ತಲಿ ಕಮಲ ಕೋಟೆಗೆ ಕಿಚ್ಚ ಸುದೀಪ್ ಎಂಟ್ರಿ!? ಕಮಲ ಹಿಡಿಯೋದು ಪಕ್ಕಾ?
ಬೆಂಗಳೂರು,ಮಾರ್ಚ್5: ರಾಜ್ಯ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಚುನಾವಣಾ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಸಿನಿಮಾ ಸ್ಟಾರ್ ಗಳನ್ನು ಪಕ್ಷಗಳತ್ತ ಕರೆತರುವ ನಿಟ್ಟಿಯಲ್ಲಿ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಖ್ಯಾತ ನಟ ಕಿಚ್ಚ ಸುದೀಪ ಇಂದು ಬಿಜೆಪಿ ಪಕ್ಷವನ್ನ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಅನೇಕ ರಾಜಕೀಯ ನಾಯಕರ ಜೊತೆ ನಟ ಕಿಚ್ಚ ಸುದೀಪ್ ಅವರಿಗೆ ಒಡನಾಟ ಹೊಂದಿದ್ದು. ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಸುದೀಪ್ ಅವರನ್ನು ರಾಜಕೀಯ ಪಕ್ಷಕ್ಕೆ ಕರೆತರುವ ಪ್ರಯತ್ನಗಳು ನಡೀತಿದೆ. ನಟ ಕಿಚ್ಚ ಸುದೀಪ್ ನೇರವಾಗಿ ರಾಜಕೀಯಕ್ಕೆ ಧುಮುಕುತ್ತಾರಾ ಅಥವಾ ಮುಂದಿನ 30 ದಿನಗಳ ಕಾಲ ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಆಗಿ ಅಖಾಡಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಮೊದಲಿನಿಂದಲೂ ಬಿಜೆಪಿ ನಾಯಕರೊಟ್ಟಿಗೆ ನಿಕಟ ಸಂಪರ್ಕಲ್ಲಿದ್ದ ಸುದೀಪ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈ ಕುರಿತು ಇಂದು (ಬುಧವಾರ) ನಡೆಯುವ ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ ನಟ ಸುದೀಪ್ ಮಾಹಿತಿ ನೀಡಲಿದ್ದಾರೆ.
ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಯಕರು ನಟ ಸುದೀಪ್ ಅವರನ್ನ ಪಕ್ಷಕ್ಕೆ ಕರೆತರು ನಿಟ್ಟಿನಲ್ಲಿ ಸಾಕಷ್ಟು ಬಾರಿ ಚರ್ಚೆ ನಡೆದಿವೆ ಎಂದು ಹೇಳಲಾಗಿದೆ. ಅದು ಅಲ್ಲದೇ ಬಿಜೆಪಿ ಘಟಾನುಘಟಿ ನಾಯಕರನ್ನ ಪಕ್ಷದತ್ತ ಸೆಳೆಯಲು ರಣತಂತ್ರ ರೂಪಿಸಿದೆ. ನಟ ಸುದೀಪ್ ಮನವೊಲಿಕೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅಖಾಡಕ್ಕಿಳಿದ್ದಿದ್ದಾರೆ. ಇಬ್ಬರು ನಾಯಕರ ಜೊತೆಗೆ ಕಿಚ್ಚ ಸುದೀಪ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗ್ತಿದೆ.
ಈ ಕುರಿತು ನಟ ಸುದೀಪ್ ಟಿವಿ9 ಜೊತೆ ಮಾತನಾಡಿ, ನಾನೊಬ್ಬ ಕಲಾವಿದ. ನನ್ನ ಜೊತೆಗೆ ಮಾತುಕತೆಗೆ ಬಂದಿದ್ದರು. ಇಲ್ಲ ಅಂತ ತೇಲಿಸೋಕೆ ಹೋಗಲ್ಲ. ಇತ್ತೀಚೆಗೆ ಪೊಲಿಟಿಕಲ್ ನಾಯಕರಿಗೆ ನಂಬಿಕೆ ಬಂದಿದೆ. ಡಿಕೆ ಶಿವಕುಮಾರ್, ಸುಧಾಕರ್, ಬಸವರಾಜ ಬೊಮ್ಮಾಯಿ, ರಮ್ಯಾ ಅವರು ನನ್ನ ಸ್ನೇಹಿತರು. ನಾನು ಇನ್ನೂ ನಿರ್ಧಾರ ತಗೊಂಡಿಲ್ಲ. ಎರಡೂ ಕಡೆ ಆಪ್ತರು ಇರುವಾಗ ನಿರ್ಧಾರ ತೆಗೆದುಕೊಳ್ಳುವುದು ಕಷ್ಟ ಆಗುತ್ತದೆ ಎಂದು ಹೇಳಿದ್ದಾರೆ.

ಎಮೋಶನ್ಸ್ ಇದೆ. ಅದರ ಜೊತೆ ನಮ್ಮ ನಿರ್ಧಾರವನ್ನು ಸೇರಿಸೋಕೆ ಹೋಗಲ್ಲ. ಸುದೀಪ್ ಅವರು ರಾಜಕೀಯಕ್ಕೆ ಬರೋದು ಬೇಡ ಅಂತ ನಮ್ಮ ಜನರ ತಲೆಯಲ್ಲಿ ಇರಬಹುದು. ಒಳ್ಳೆಯದನ್ನು ಮಾಡೋಕೆ ಪವರ್ ಬೇಕಂತಲೇ ಇಲ್ಲ. ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಟಿವಿ 9 ಗೆ ನಟ ಸುದೀಪ್ ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications