ಸಿದ್ದರಾಮಯ್ಯ ಪರ ಚುನಾವಣಾ ಪ್ರಚಾರಕ್ಕೆ ಕಿಚ್ಚ ಸುದೀಪ್?
Recommended Video

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ನಟ ಸುದೀಪ್ ಅವರು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಸುದೀಪ್ ಮತ್ತು ಸಿದ್ದರಾಮಯ್ಯ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದು, ಆದಷ್ಟು ಶೀಘ್ರವಾಗಿ ಸುದೀಪ್ ಅವರು ಸಿದ್ದರಾಮಯ್ಯ ಅವರ ಪರ ಪ್ರಚಾರದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಈ ಮುಂಚೆಯೂ ಸುದೀಪ್ ಅವರು ಸಿದ್ದರಾಮಯ್ಯ ಅವರು ಬೇರೆ ಬೇರೆ ಕಾರಣಗಳಿಗಾಗಿ ಸುದೀಪ್ ಅವರನ್ನು ಭೇಟಿ ಆಗಿದ್ದರು, ಅಲ್ಲದೇ ಸಿದ್ದರಾಮಯ್ಯ ಅವರೇ ಸುದೀಪ್ ಅವರು ಪ್ರಚಾರಕ್ಕೆ ಬರುವುದಾಗಿ ಹೇಳಿದ್ದಾರೆ ಎಂದು ಮಾಧ್ಯಮಗಳಿಗೂ ತಿಳಿಸಿದ್ದರು ಆದರೆ ಯಾವಾಗನಿಂದ ಪ್ರಚಾರ ಆರಂಭಿಸುತ್ತಾರೆ ಎಂಬುದು ಇನ್ನೂ ಖಾತ್ರಿಯಾಗಿಲ್ಲ.
ಸಿದ್ದರಾಮಯ್ಯ ಅವರು ಈ ಬಾರಿ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದು, ಎರಡೂ ಕಡೆ ಸುದೀಪ್ ಪ್ರಚಾರ ಮಾಡುತ್ತಾರಾ ಅಥವಾ ಕೇವಲ ಚಾಮುಂಡೇಶ್ವರಿಯಲ್ಲಿ ಮಾಡುತ್ತಾರಾ ಕಾದು ನೋಡಬೇಕಿದೆ.

ಈಗಾಗಲೇ ನಟ ಯಶ್ ಸೇರಿದಂತೆ ಲೂಸ್ ಮಾದ ಖ್ಯಾತಿಯ ಯೋಗೀಶ್, ನಟಿ ಮಯೂರಿ, ನಟಿ ಅಮೂಲ್ಯ, ನಿಖಿಲ್ ಕುಮಾರ್ ಸೇರಿದಂತೆ ಹಲವು ಮಂದಿ ನಟರು ಈಗಾಗಲೇ ವಿವಿಧ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ.
ಸುದೀಪ್ ಅವರು ಸಿದ್ದರಾಮಯ್ಯ ಅವರ ಹೊರತಾಗಿ ಕುಮಾರಸ್ವಾಮಿ ಅವರನ್ನೂ ಸಹ ಎರಡು ಭಾರಿ ಭೇಟಿ ಆಗಿದ್ದರು, ಅವರು ಜೆಡಿಎಸ್ ಪರ ಚುನಾವಣಾ ಪ್ರಚಾರ ಮಾಡುತ್ತಾರೆ ಎಂಬ ಊಹಾಪೋಹ ಹರಿದಾಡುತ್ತಿತ್ತು. ಆದರೆ ಆ ವಿಷಯ ಇನ್ನೂ ಖಾತ್ರಿಯಾಗಿಲ್ಲ.

ಸುದೀಪ್ ಅವರು ಸಿದ್ದರಾಮಯ್ಯ ಅವರ ಪರ ಪ್ರಚಾರ ಮಾಡುವ ಜೊತೆಗೆ ಅವರ ಗೆಳೆಯ ಸುರಪುರ ಬಿಜೆಪಿ ಅಭ್ಯರ್ಥಿ ರಾಜೂಗೌಡ ಅವರ ಪರವಾಗಿಯೂ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ












Click it and Unblock the Notifications