ಕನ್ನಡವನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ಈ ಕೆಲಸ ಬೇಡವಾಗಿತ್ತು: ನಟಿ ರಮ್ಯಾ !
ಕನ್ನಡವನ್ನು ಉಳಿಸಿಕೊಳ್ಳುವ ಹಾಗೂ ಬೆಳೆಸುವ ಹೋರಾಟವನ್ನು ರಾಜ್ಯದಲ್ಲಿ ಕನ್ನಡಿಗರು ಮಾಡುತ್ತಿದ್ದಾರೆ. ಈ ರೀತಿಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಈ ವಿಚಾರದಲ್ಲಿ ತಪ್ಪು ನಿರ್ಧಾರವನ್ನು ತೆಗೆದುಕೊಂಡಿದೆ. ಅಥವಾ ಈ ರೀತಿಯ ನಿರ್ಧಾರವೊಂದನ್ನು ತೆಗೆದುಕೊಳ್ಳುವ ಅವಶ್ಯಕತೆಯೇ ಇರಲಿಲ್ಲ ಎಂದು ನಟಿ ರಮ್ಯಾ ಅವರು ಅಭಿಪ್ರಾಯಪಟ್ಟಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ. ಕಳೆದ ಬಾರಿ ಡಿ.ಕೆ ಶಿವಕುಮಾರ್ ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುವ ಮೂಲಕ ನಟಿ ರಮ್ಯಾ ಅವರು ಟೀಕೆಗೆ ಒಳಗಾಗಿದ್ದರು.
ನಟಿ ರಮ್ಯಾ ಅವರು ಮೈಸೂರು ಸ್ಯಾಂಡಲ್ ಸೋಪ್ನ ವಿಚಾರದಲ್ಲಿ ಮತ್ತೊಮ್ಮೆ ಮಾತನಾಡಿದ್ದಾರೆ. ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪ್ನ ರಾಯಭಾರಿಯಾಗಿ ಆಯ್ಕೆ ಮಾಡುವ ಅವಶ್ಯಕತೆ ಇರಲಿಲ್ಲ ಇದು ಕನ್ನಡಿಗರ ಹಣ ವ್ಯರ್ಥ ಅಥವಾ ಪೋಲು ಮಾಡುವ ನಿರ್ಧಾರ ಎಂದು ಇದಕ್ಕೂ ಮೊದಲು ಅವರು ಅಭಿಪ್ರಾಯಪಟ್ಟಿದ್ದರು.

ಇದೀಗ ಸೋಮವಾರ ಮತ್ತೊಮ್ಮೆ ಪೋಸ್ಟ್ ಮಾಡಿರುವ ನಟಿ ರಮ್ಯಾ ಅವರು, KSDL ಅನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಶ್ಲಾಘಿಸುತ್ತೇನೆ. ಆದರೆ ಇದನ್ನು ಕಾರ್ಯಗತಗೊಳಿಸಲು ಆಯ್ಕೆ ಮಾಡಿಕೊಂಡಿರುವ ವಿಧಾನವು ಕೇವಲ ನಾಮಕಾವಸ್ತೆಯಂತೆ ಕಾಣುತ್ತದೆ ಎಂದಿದ್ದಾರೆ.
ಮುಂದುವರಿದು ವ್ಯವಹಾರದ ದೃಷ್ಟಿಕೋನದಿಂದ ನೋಡಿದರೂ, ವಿಶೇಷವಾಗಿ ಕಂಪನಿಯು ಸಂಕಷ್ಟದಲ್ಲಿ ಇರುವಾಗ ಈ ರೀತಿಯ ನಿರ್ಧಾರ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಮೈಸೂರು ಸ್ಯಾಂಡಲ್ ಸೋಪ್ ಐಕಾನಿಕ್ ಬ್ರ್ಯಾಂಡ್ ಆಗಿದೆ. ದೊಡ್ಡ ಪರಂಪರೆಯನ್ನು ಹೊಂದಿದ್ದರೂ ಅದಕ್ಕೆ ಬ್ರಾಂಡ್ ಅಂಬಾಸಿಡರ್ ಅಗತ್ಯವಿಲ್ಲ (ಅಮುಲ್, ಆಪಲ್, ಡವ್, ಅಮೆಜಾನ್) ಗಳಂತೆಯೇ ನಮ್ಮ ಮೈಸೂರು ಸ್ಯಾಂಡಲ್ ಸೋಪ್ ಮನೆಮಾತಾಗಿದೆ.
ಉತ್ತರ ಭಾರತೀಯ ಗ್ರಾಹಕರ ಮಾರುಕಟ್ಟೆಯನ್ನು ಗುರಿಯಾಗಿಸಲು ಕನ್ನಡೇತರರನ್ನು ಬ್ರಾಂಡ್ ರಾಯಭಾರಿಯಾಗಿ ತೆಗೆದುಕೊಳ್ಳುವ ಮೂಲಕ ಅವರು ತನ್ನದೇ ಆದ ಜನರನ್ನು, ಅದರ ಪ್ರಮುಖ ನಿಷ್ಠಾವಂತ ಗ್ರಾಹಕ ನೆಲೆಯನ್ನು - ಕನ್ನಡಿಗನನ್ನು ದೂರವಿಟ್ಟಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ನಟಿ ರಮ್ಯಾ ಅವರು ಕಟುವಾಗಿ ಟೀಕಿಸಿದ್ದಾರೆ.
ನಾವು ನಮ್ಮ ಕನ್ನಡ ಹೆಮ್ಮೆಯನ್ನು ಉಳಿಸಿಕೊಳ್ಳಲು ಹೋರಾಡುತ್ತಿರುವ ಸಮಯದಲ್ಲಿ ಸರ್ಕಾರದ ಈ ನಿರ್ಧಾರವು ನಮ್ಮ ಹೋರಾಟಕ್ಕೆ ಎದುರಾದ ಹಿನ್ನಡೆ ಅಂತಲೇ ಭಾವಿಸಬೇಕಾಗುತ್ತದೆ ಅಥವಾ ಪ್ರಮುಖ ಹಿನ್ನಡೆ ಅಂತಲೇ ನಾವು ಭಾವಿಸಬೇಕಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಹಿಳೆಯರು ಶತಮಾನಗಳಿಂದ ಮತದಾನದ ಹಕ್ಕುಗಳಿಂದ ಹಿಡಿದು ಅವಾಸ್ತವಿಕ ಸೌಂದರ್ಯ ಮಾನದಂಡಗಳವರೆಗೆ ಚರ್ಮದ ಆರೈಕೆಯವರೆಗೆ ಸಮಾನ ವೇತನದವರೆಗೆ ಸೇರಿದಂತೆ ವಿವಿಧ ವಿಚಾರಗಳಲ್ಲಿ ಹೋರಾಡಿದ್ದಾರೆ. ಇಲ್ಲಿ ನಮಗೆ ಇನ್ನೂ ಚರ್ಮದ ಬಣ್ಣದ ಬಗ್ಗೆ ಹಾಗೂ ಬೆಳ್ಳಗಿದ್ದರೆ ಮಾತ್ರ ಸೌಂದರ್ಯ ಎಂಬರ್ಥದ ಸಂದೇಶ ಸಾರುತ್ತಿದ್ದಾರೆ ಎನ್ನುವುದನ್ನು ಮಾರ್ಮಿಕವಾಗಿ ರಮ್ಯಾ ಹೇಳಿದ್ದಾರೆ.
ಮೈಸೂರು ಸ್ಯಾಂಡಲ್ ಸೋಪ್ನ ಹಿರಿಮೆ ಅದರೊಂದಿಗೆ ಜನ ಕನೆಕ್ಟ್ ಆಗಿರುವುದರೊಂದಿಗೆ ಇದೆ. ಈಗ ಬ್ರ್ಯಾಂಡ್ ಅಂಬಾಸಿಡರ್ ಆಗಿರುವವರು ಇದರಿಂದ ದೂರವಿದ್ದಾರೆ. ಕನ್ನಡ ಅಥವಾ ಕರ್ನಾಟಕದ ಐತಿಹಾಸಿಕ ಹಿನ್ನೆಲೆಯ ಒಂದು ಬ್ರ್ಯಾಂಡ್ಗೆ ಅದರ ಸಂಪರ್ಕ ಅಥವಾ ಹಿರಿಮೆಯೇ ಗೊತ್ತಿಲ್ಲದವರು ಪ್ರಚಾರ ಮಾಡಲು ನೇಮಕ ಮಾಡಿಕೊಳ್ಳಲಾಗಿದೆ ಎಂಬರ್ಥದಲ್ಲಿ ಹೇಳಿದ್ದಾರೆ.
ಮೈಸೂರು ಸ್ಯಾಂಡಲ್ ಸೋಪ್ ಬೇರೆ ಯಾವುದೇ ಸೋಪ್ ಅಲ್ಲ. ಈ ವಿಚಾರದಲ್ಲಿ ಕನ್ನಡಿಗರೊಂದಿಗೆ ಸೂಕ್ಷ್ಮತೆಯಿಂದ ವ್ಯವಹರಿಸಬೇಕು ಎಂದೂ ಅವರು ಎಚ್ಚರಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications