ನಟಿ ಪೂಜಾ ಗಾಂಧಿ ಬಿಜೆಪಿಗೆ, ಕೆಲವು ನಾಯಕರ ವಿರೋಧ!
ಬೆಂಗಳೂರು ಮಾರ್ಚ್ 22 : 'ಮುಂಗಾರು ಮಳೆ' ಚಿತ್ರದ ಮೂಲಕ ಕನ್ನಡಿಗರಿಗೆ ಪರಿಚಿತರಾದ ಪೂಜಾ ಗಾಂಧಿ ಬಿಜೆಪಿ ಸೇರಲು ಪ್ರಯತ್ನ ನಡೆಸಿದ್ದಾರೆ. ಪೂಜಾ ಗಾಂಧಿ ಸೇರ್ಪಡೆ ವಿಚಾರ ಹೈಕಮಾಂಡ್ ಅಂಗಳಕ್ಕೆ ತಲುಪಿದೆ.
ನಟಿ ಪೂಜಾ ಗಾಂಧಿ ಬಿಜೆಪಿ ಸೇರುವುದಕ್ಕೆ ಕೆಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮುಂದೆ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಂತಿಮವಾಗಿ ಪೂಜಾ ಗಾಂಧಿ ಬಿಜೆಪಿ ಸೇರ್ಪಡೆ ವಿಚಾರ ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಅವರ ಮುಂದೆ ಹೋಗಿದೆ. ಅವರು ಹೈಕಮಾಂಡ್ ನಾಯಕರ ಗಮನಕ್ಕೆ ಈ ವಿಚಾರವನ್ನು ತಂದಿದ್ದಾರೆ.

ರಾಜ್ಯದ ನಾಯಕರು ಅಸಮಾಧಾನಗೊಂಡಿರುವ ನಾಯಕರನ್ನು ಸಮಾಧಾನ ಪಡಿಸಲು ನಡೆಸಿದ ಪ್ರಯತ್ನ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಹೈಕಮಾಂಡ್ ನಾಯಕರು ಪೂಜಾ ಗಾಂಧಿ ಪಕ್ಷ ಸೇರ್ಪಡೆ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ.
ಪೂಜಾ ಗಾಂಧಿ ಮೊದಲು ಜೆಡಿಎಸ್ ಪಕ್ಷ ಸೇರಿದ್ದರು. ನಂತರ ಬಿ.ಎಸ್.ಯಡಿಯೂರಪ್ಪ ಅವರು ಕೆಜೆಪಿ ಸ್ಥಾಪನೆ ಮಾಡಿದ ಮೇಲೆ ಕೆಜೆಪಿ ಸೇರಿದ್ದರು. ಅಲ್ಲಿಯೂ ಹೆಚ್ಚು ಕಾಲ ಇರದೇ, ಬಿ.ಶ್ರೀರಾಮುಲು ಅವರು ಸ್ಥಾಪಿಸಿದ್ದ ಬಿ.ಎಸ್.ಆರ್.ಕಾಂಗ್ರೆಸ್ ಪಕ್ಷ ಸೇರಿದ್ದರು.
2013ರ ಚುನಾವಣೆಯಲ್ಲಿ ಬಿ.ಎಸ್.ಆರ್.ಕಾಂಗ್ರೆಸ್ ಪಕ್ಷದಿಂದ ರಾಯಚೂರು ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 1815 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈಗ ಬಿಜೆಪಿಯತ್ತ ಮುಖ ಮಾಡಿದ್ದಾರೆ.
ಅಂದಹಾಗೆ ಪೂಜಾ ಗಾಂಧಿ ಅವರು ನಟಿಸಿ ಕೊನೆಯ ಕನ್ನಡ ಸಿನಿಮಾ ದಂಡುಪಾಳ್ಯ - 3.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications