ಕರ್ನಾಟಕಕ್ಕೆ ಬೇಸಿಗೆ ಬಿಸಿ ಜೊತೆಗೆ ಲೋಡ್ ಶೆಡ್ಡಿಂಗ್ ಹೊರೆ
ಬೆಂಗಳೂರು, ಫೆ. 23: ಶರಾವತಿ ಜಲವಿದ್ಯುತ್ ಘಟಕದಲ್ಲಿನ ಬೆಂಕಿ ಆಕಸ್ಮಿಕದ ನೆಪವೊಡ್ಡಿ ವಿದ್ಯುತ್ ಕೊರತೆ ಹೊಂದಿಸಲು ಮತ್ತೊಮ್ಮೆ ಲೋಡ್ ಶೆಡ್ಡಿಂಗ್ ಹೊರೆಯನ್ನು ರಾಜ್ಯದ ಸಮಸ್ತ ಜನತೆ ಮೇಲೆ ಹೊರೆಸಲು ಸಿದ್ದರಾಮಯ್ಯ ಸರ್ಕಾರ ಅನುಮತಿ ನೀಡಿದೆ. ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಇದೀಗ ಅಧಿಕಾರಿಗಳ ಜೊತೆ ಚರ್ಚಿಸುತ್ತಿದ್ದು, ಇನ್ನೇನು ಲೋಡ್ ಶೆಡ್ಡಿಂಗ್ ವೇಳಾಪಟ್ಟಿ ನಿರೀಕ್ಷಿಸಬಹುದು.
ಪ್ರತಿ ನಿತ್ಯ ಸರಾಸರಿ 1,000 ದಿಂದ 2,500 ಮೆಗಾ ವ್ಯಾಟ್ ವಿದ್ಯುತ್ ಕೊರತೆ ಬೀಳುತ್ತಿದ್ದು, ಅದನ್ನು ಹೊಂದಿಸಲು ಲೋಡ್ ಶೆಡ್ಡಿಂಗ್ ಅನಿವಾರ್ಯ ಎಂದು ಸೋಮವಾರದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.[ಸೌರಶಕ್ತಿಯಿಂದ ಮನೆ ಬೆಳಗಿಸಿದ ಮೈಸೂರಿನ 'ಭಕ್ತವತ್ಸಲ']
ಪ್ರಸ್ತುತ 9,300 ಮೆಗಾ ವ್ಯಾಟ್ ವಿದ್ಯುತ್ಗೆ ಬೇಡಿಕೆ ಇದೆ. ಮಾರ್ಚ್ ವೇಳೆಗೆ ಅದು 10,026 ಮೆಗಾ ವ್ಯಾಟ್ ಗೆ ಏರುವ ಸಾಧ್ಯತೆ ಇದೆ. ರಾಜ್ಯದ ಎಲ್ಲ ಮೂಲಗಳಿಂದ ಸೇರಿ ಹೆಚ್ಚೆಂದರೆ 9,218 ಮೆಗಾ ವ್ಯಾಟ್ ವಿದ್ಯುತ್ ಸರಬರಾಜು ಮಾಡಬಹುದು. ಮಳೆ ಕೊರತೆ ಕಾರಣದಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ಶೇ40ರಷ್ಟು ಮಾತ್ರ ಇದೆ.[ಇನ್ಮುಂದೆ ಎಲ್ ಇಡಿ ಬಳಕೆ ಕಡ್ಡಾಯ]

ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ವಿಶ್ವ ಟಿ20 ಪಂದ್ಯ, ಹಲವು ಪರೀಕ್ಷೆಗಳು ಎದುರಾಗಲಿದೆ. ಮುಂಬರುವ ಎರಡು ಮೂರು ತಿಂಗಳುಗಳಲ್ಲಿ ಬದಲಿ ವ್ಯವಸ್ಥೆ ಮಾಡಿಕೊಳ್ಳುವುದು, ವಿದ್ಯುತ್ ಉಳಿತಾಯ, ಲೋಡ್ ಶೆಡ್ಡಿಂಗ್, ಪರ್ಯಾಯ ಇಂಧನ ಬಳಕೆಗೆ ಆದ್ಯತೆ ನೀಡಬೇಕಾಗುತ್ತದೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಹೇಳಿದರು.[ಶರಾವತಿ ವಿದ್ಯುದಾಗಾರದಲ್ಲಿ ಬೆಂಕಿ, ವಿಡಿಯೋ ನೋಡಿ]
ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲು:
ಕಳೆದ ಹತ್ತು ವರ್ಷಗಳಲ್ಲೇ ಕಾಣದಷ್ಟು ಬಿಸಿಲಿನ ಝಳ ಕಂಡಿರುವ ಬೆಂಗಳೂರು ತತ್ತರಿಸಿದೆ. ಸೋಮವಾರ (ಫೆಬ್ರವರಿ 22) 35.5 ಡಿಗ್ರಿ ಸೆಲ್ಸಿಯಸ್ ಇತ್ತು. ಸಾಮಾನ್ಯ ತಾಪಮಾನಕ್ಕಿಂತ 4 ಡಿ.ಸೆ. ಅಧಿಕವಾಗಿದ್ದು, ಕಳೆದ 10 ವರ್ಷಗಳಲ್ಲೇ ಇದು 'ಹಾಟೆಸ್ಟ್ ಡೇ' ಎಂದು ಹವಾಮಾನ ಇಲಾಖೆ (ಎಂಐಡಿ) ಅಂಕಿ ಅಂಶಗಳು ಹೇಳುತ್ತಿವೆ. ಪಾದರಸದ ಮಟ್ಟ ಇನ್ನೂ ಏರಿಕೆ ಕಾಣಲಿದ್ದು, ಬೇಸಿಗೆಯಲ್ಲಿ ಬಿಸಿ ವಾತಾವರಣ ಮುಂದುವರೆಯಲಿದೆ ಎಂದು ಮುನ್ಸೂಚನೆ ಸಿಕ್ಕಿದೆ. ಈ ನಡುವೆ ಲೋಡ್ ಶೆಡ್ಡಿಂಗ್ ಶುರುವಾದರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಬಿಸಿ ಏರಲಿದೆ.
-
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications