ಮನಮಿಡಿಯುತ್ತಿದೆ ಎಡಿಜಿಪಿ ಭಾಸ್ಕರ್ ರಾವ್ ಟ್ವೀಟಿಸಿದ್ದ ಅದ್ಭುತ ಭಾವಚಿತ್ರ!
ಬೆಂಗಳೂರು, ಸೆ.25: ಪೊಲೀಸರಿಗೆ ಭಾವನೆಗಳೇ ಇರುವುದಿಲ್ಲ ಎಂದು ದೂರುವವರಿದ್ದಾರೆ. ಹಲವು ನಿದರ್ಶನಗಳೂ ಇರಬಹುದು. ಆದರೆ ಪೊಲೀಸರಲ್ಲಿ ಸಹೃದಯತೆ, ಮಾನವೀಯತೆ ಹಾಸು ಹೊಕ್ಕಾಗಿರುತ್ತದೆ. ಅದಕ್ಕೂ ಒಂದು ನಿದರ್ಶನ ಇಲ್ಲಿದೆ.
ವಿಷಯ ಇಷ್ಟೇ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಗಳ ರಾಜ್ಯ ಹೆಚ್ಚವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ರಾವ್ ಅವರು ಹೊಸದಾಗಿ ಪೊಲೀಸ್ ಸೇವೆಗೆ ಸೇರಿದ ಸಬ್ ಇನ್ ಸ್ಪೆಕ್ಟರ್ ಒಬ್ಬರು ತಮ್ಮ ತಾಯಿಯ ಕಾಲಿಗೆ ಎರಗಿ ಆಶೀರ್ವಾದ ಪಡೆಯುತ್ತಿರುವ ಭಾವಚಿತ್ರವನ್ನು ಸಾಮಾಜಿಕ ಜಾಲತಾಣ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಭಾರಿ ಪ್ರಶಂಸೆಗೆ ಪಾತ್ರವಾಗಿದೆ.
A grateful son(Police Sub-inspector) in Reverence and Gratitude to his Single Mother who could not attend his Passing out Parade....Karnataka pic.twitter.com/VRIKSekgxb
— Bhaskar Rao IPS (@deepolice12) September 23, 2018
ನಿರ್ಗಮನ ಪಥಸಂಚಲನಕ್ಕೆ ಬರಲು ಸಾಧ್ಯವಾಗದ ತಾಯಿಯನ್ನು ಕಾಣಲು ಬಂದ ಸಬ್ ಇನ್ಸ್ಪೆಕ್ಟರ್, ಆಕೆ ಕೆಲಸ ಮಾಡುತ್ತಿದ್ದ ಹೊಲಕ್ಕೆ ತೆರಳಿ ಗೌರವ ಮತ್ತು ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಭಾಸ್ಕರ್ ರಾವ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಚಿತ್ರ ಹಲವಾರು ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಇದು ನಮ್ಮ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ ಎಂದು ಕೆಲವರು ಹೇಳಿದ್ದರೆ, ಇನ್ನು ಕೆಲವರು ಮಾತೃದೇವೋಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾವು ಯಾವ ಹಂತಕ್ಕೆ ಹೋದರು ಕೂಡ ತಂದೆ-ತಾಯಿಯನ್ನು ಗೌರವಿಸುವುದನ್ನು ಮರೆಯಬಾರದು ಅದು ನಮ್ಮ ಸಂಸ್ಕೃತಿ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು: ನಾಯಿಗಳು ಬೊಗಳುತ್ತಿವೆ, ನಿದ್ರೆ ಬರುತ್ತಿಲ್ಲವೆಂದು 112ಕ್ಕೆ ಕರೆ ಮಾಡಿದ ಮಹಿಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market












Click it and Unblock the Notifications