ಜೆಎಸ್ಎಸ್ ಸುತ್ತೂರು ಮಠದಲ್ಲಿ ವಾಸ್ತವ್ಯ/ವ್ಯಾಸಂಗ ಹೇಗೆ?
ಮೈಸೂರು, ಏ. 2: ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸುತ್ತಾ ಬಂದಿರುವ ಸುತ್ತೂರು ಮಠದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ವಾಸ್ತವ್ಯ/ವ್ಯಾಸಂಗಕ್ಕೆ ಮಾಡುವುದಕ್ಕೆ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಪ್ರವೇಶಾವಕಾಶ ಒದಗಿಬಂದಿದೆ.
ನಂಜನಗೂಡು ತಾಲೂಕು ಸುತ್ತೂರು ಶ್ರೀಕ್ಷೇತ್ರದಲ್ಲಿರುವ ಜೆಎಸ್ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿನಿಲಯದಲ್ಲಿ 2014-15ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. 1 ರಿಂದ 7ನೇ ತರಗತಿವರೆಗೆ ಕನ್ನಡ ಮಾಧ್ಯಮಕ್ಕೆ, ಒಂದು ಹಾಗೂ 5ನೇ ತರಗತಿಗಳ ಇಂಗ್ಲಿಷ್ ಮಾಧ್ಯಮಕ್ಕೆ ಹಾಗೂ 8ನೇ ತರಗತಿಗೆ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳಿಗೆ ಈ ಪ್ರವೇಶಾವಕಾಶವಿದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಗ್ರಾಮಾಂತರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ (ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಅಶಕ್ತರು, ಕಡು ಬಡವರು) ಬಡತನ ರೇಖೆಯೊಳಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಏ. 10ರಿಂದ ಅರ್ಜಿಗಳನ್ನು ವಿತರಿಸಲಾಗುತ್ತದೆ. ಅರ್ಜಿಯನ್ನು ಶಾಲಾ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ http://jssonline.org/jss/ ವೆಬ್ ಸೈಟ್ ಮೂಲಕವೂ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮೇ 10 ಕೊನೆಯ ದಿನ. ಅಂಚೆ ಮುಖಾಂತರ ಅರ್ಜಿ ಪಡೆಯಲು ಇಚ್ಛಿಸುವವರು ವಿದ್ಯಾರ್ಥಿಯು ಪ್ರವೇಶ ಬಯಸುವ ತರಗತಿಯ ವಿವರ ಹಾಗೂ ಸ್ವವಿಳಾಸವುಳ್ಳ, ಅಂಚೆ ಚೀಟಿ ಹಚ್ಚಿದ ಲಕೋಟೆಯನ್ನು ಆಡಳಿತಾಧಿಕಾರಿ, ಜೆಎಸ್ಎಸ್ ಸಂಸ್ಥೆಗಳು, ಸುತ್ತೂರು- 571129, ನಂಜನಗೂಡು ತಾಲೂಕು, ಮೈಸೂರು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಿ ಪಡೆಯಬಹುದು.
ಅರ್ಜಿ ಪಡೆಯಲು ಅಥವಾ ಪ್ರಕ್ರಿಯೆಯ ಯಾವುದೇ ವೇಳೆ ಪೋಷಕರು, ಪಾಲಕರು ಮಧ್ಯವರ್ತಿಗಳನ್ನು ಅವಲಂಬಿಸದೆ ನೇರವಾಗಿ ಸಂಬಂಧಪಟ್ಟವರನ್ನು ಸಂಪರ್ಕಿಸಲು ಕೋರಲಾಗಿದೆ. ಮಾಹಿತಿಗಾಗಿ ದೂ. 08221-232323 (ಹಿರಿಯ ಪ್ರಾಥಮಿಕ ಶಾಲೆ) 232653 (ಪ್ರೌಢಶಾಲೆ) 232559 (ಆಡಳಿತಾಧಿಕಾರಿಗಳ ಕಚೇರಿ) ಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications