ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ದೇವರಾಜೇಗೌಡ
ಬೆಂಗಳೂರು, ಜೂನ್ 07: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಬಂಧನಕ್ಕೊಳಗಾಗಿರುವ ಹಾಸನದ ವಕೀಲ ಜಿ. ದೇವರಾಜೇಗೌಡ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಇದೇ ದೇವರಾಜೇಗೌಡ ಅವರ ಹೆಸರು ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲೂ ಕೇಳಿ ಬಂದಿತ್ತು. ಅದರಲ್ಲೂ ಅವರು ವಿಚಾರಣೆ ಎದುರಿಸುತ್ತಿದ್ದಾರೆ. ಆ ಮಧ್ಯೆ ಅವರೇ ಬಂಧನಕ್ಕೊಳಗಾಗಿ ಇದೀಗ ಜೈಲು ಸೇರಿದ್ದಾರೆ.

ಹಾಸನದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಆರೋಪಿ ಜಿ. ದೇವರಾಜೇಗೌಡಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ಹೊಳೆನರಸೀಪುರದ ಟೌನ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ದೂರುದಾರೆ ಮಹಿಳೆಯನ್ನು ಪ್ರತಿವಾದಿ ಮಾಡಲಾಗಿದೆ. ಅರ್ಜಿ ಶೀಘ್ರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಸುಳ್ಳು ಆರೋಪ: ದೇವರಾಜೇಗೌಡ, ತಾನು ಅಮಾಯಕರಾಗಿದ್ದೇನೆ. ಸುಳ್ಳು ಆರೋಪ ಮಾಡಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಪೊಲೀಸರು ಹಾಗೂ ದೂರುದಾರೆ ಮಹಿಳೆ ದುರದ್ದೇಶ ಹೊಂದಿದ್ದಾರೆ. ದೂರುದಾರೆ ಮಹಿಳೆಯೇ ತನ್ನ ನಿವೇಶನದ ವ್ಯಾಜ್ಯದ ವಿಚಾರವಾಗಿ ನನ್ನನ್ನು ಸಂಪರ್ಕಿಸಿದ್ದರು. ನಂತರ ನನ್ನ ನಂಬರ್ ಪಡೆದು ಸಂದೇಶ ಕಳುಹಿಸಿದ್ದರು.
ಕೆಲ ಕಾಲದ ನಂತರ ನನ್ನ ಕಚೇರಿಗೆ ದೂರುದಾರೆಯ ಪತಿ ಭೇಟಿ ನೀಡಿ ನನ್ನ ಮೇಲೆ ಮಾಟ ಮಂತ್ರ ಮಾಡಿಸಿದ್ದರು. ದೂರುದಾರೆ ನನಗೆ ಕುಂಕುಮವನ್ನು ಹಣೆಗೆ ಹಚ್ಚಿದರು. ಆಗ ನನಗೆ ತಲೆ ತಿರುಗಿತು.
ನಂತರ ವಿಡಿಯೋಕಾಲ್ ಮಾಡಿ ನನಗೆ ಲೈಂಗಿಕ ಪ್ರಚೋದನೆ ನೀಡುತ್ತಿದ್ದರು. ಮಾಟಮಂತ್ರದಿಂದ ನಾನು ಬಲಿಪಶುವಾದೆ. ಆಕೆಯೇ ಕರೆ ಮಾಡಿ ಖಾಸಗಿ ಅಂಗ ತೋರಿಸುತ್ತಿದ್ದರು. ಮಹಿಳೆಯರನ್ನು ತೋರಿಸಿ ಕಾಮ ಪ್ರಚೋದನೆ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.
ನಂತರ ಅನಾಮದೇಯ ವ್ಯಕ್ತಿ ನನಗೆ ಕರೆ ಮಾಡಿ 2 ಕೋಟಿ ಹಣ ನೀಡಬೇಕು. ಇಲ್ಲವಾದರೆ ನಿನ್ನ ಅಶ್ಲೀಲ ಪೋಟೋ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ತಿಳಿಸಿದರು. ಈ ಬಗ್ಗೆ ನಾನು ಬೆಂಗಳೂರಿನ ಹೆಬ್ಬಾಳ ಠಾಣೆಗೆ ದೂರು ನೀಡಿದೆ.
ವಿಚಾರಣೆಗೆ ಹಾಜರಾದ ದೂರುದಾರೆಯು ಆ ವೇಳೆ ನನ್ನ ಮೇಲೆ ಯಾವುದೇ ಆರೋಪ ಮಾಡಿಲ್ಲ. ನಂತರ ಏ.4ರಂದು ಆಕೆ ದೂರು ನೀಡಿದ್ದಾರೆ. ದುರುದ್ದೇಶದಿಂದ ನನ್ನ ವಿರುದ್ಧ ದೂರು ದಾಖಲಿಸಿರುವುದನ್ನು ಪರಿಗಣಿಸಿ ಜಾಮೀನು ನೀಡಬೇಕು ಎಂದು ದೇವರಾಜೇಗೌಡ ಕೋರಿದ್ದಾರೆ.
ಏನಿದು ಪ್ರಕರಣ?; ದೇವರಾಜೇಗೌಡ ವಿರುದ್ಧ ಮಹಿಳೆಯೊಬ್ಬರು ಹೊಳೆನರಸೀಪುರ ಠಾಣೆಗೆ 2024ರ ಏ.1ರಂದು ದೂರು ದಾಖಲಿಸಿದ್ದರು. ನಿವೇಶನ ವಿಚಾರವಾಗಿ ಅವರನ್ನು ಭೇಟಿ ಮಾಡಿದ್ದೆ. ಅಂದಿನಿಂದ ತನ್ನೊಂದಿಗೆ ಅವರು ಮಾತನಾಡುತ್ತಿದ್ದರು.
ಹೊಳೆನರಸೀಪುರ ರಸ್ತೆಗೆ ಹೊಂದಿಕೊಂಡಿರುವ ಬಿಯರ್ ತಯಾರಿಕಾ ಘಟಕದ ಹಿಂದಿರುವ ಜನನಿಬಿಡಿ ಪ್ರದೇಶಕ್ಕೆ ಕರೆದೊಯ್ದು, ಮೈ ಕೈಮುಟ್ಟಿ ದೈಹಿಕ ಹಿಂಸೆ ನೀಡುತ್ತಾರೆ. ನಂತರ ತಮ್ಮ ಮನೆಗೆ ಕರೆದೊಯ್ದು ದೈಹಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Mallikarjun Mutya: ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್, ಮಲ್ಲಿಕಾರ್ಜುನ ಮುತ್ಯಾಗೆ ಆಘಾತ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications