Get Updates
Get notified of breaking news, exclusive insights, and must-see stories!

ಕುಮಾರಸ್ವಾಮಿ ಅವಧಿಯಲ್ಲಿದ್ದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ರಾಜೀನಾಮೆ

ಬೆಂಗಳೂರು, ಜುಲೈ 26: ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ನೇಮಿಸಿದ್ದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಯಡಿಯೂರಪ್ಪ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಉದಯ್ ಹೊಳ್ಳ ಅವರು, ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಉದಯ್ ಹೊಳ್ಳ ಅವರು ಈ ಹಿಂದೆ ಮೂರು ಬಾರಿ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. ಕುಮಾರಸ್ವಾಮಿ ಅವಧಿಯಲ್ಲಿ ಅವರು ನಾಲ್ಕನೇ ಬಾರಿಗೆ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. ಆದರೆ ಈಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advocate General of Karnataka Resigned to His Job

ಮೊದಲು ಬಾರಿಗೆ 2006ರ ಎ.10ರಿಂದ 2007ರ ಅ.29ರವರೆಗೆ, ಎರಡನೇ ಬಾರಿ 2007ರ ಅ.16ರಿಂದ 2007ರ ನವೆಂಬರ್ 22ರವರೆಗೆ, 2008ರ ಜೂನ್ 2ರಿಂದ 2009ರ ಜೂನ್ 24ರವರೆಗೆ ಉದಯ ಹೊಳ್ಳ ಅಡ್ವೋಕೇಟ್ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದರು.

ಯಡಿಯೂರಪ್ಪ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ ಮಹತ್ವದ ಆದೇಶವೊಂದನ್ನು ನೀಡಿದ್ದರು, ಜುಲೈ ತಿಂಗಳಲ್ಲಿ ಘೋಷಿಸಿದ್ದ ಕಾಮಗಾರಿಗಳನ್ನು, ಆದೇಶಗಳನ್ನು ತಡೆಹಿಡಿಯುವಂತೆ ಹೇಳಿದ್ದರು. ಈಗ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಕುಮಾರಸ್ವಾಮಿ ಅವಧಿಯಲ್ಲಿ ನೇಮಕವಾಗಿದ್ದ ಕೆಲವು ಅಧಿಕಾರಗಳ ಎತ್ತಂಗಡಿ ಆಗುವ ಸಾಧ್ಯತೆ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+