ಭ್ರಷ್ಟಾಚಾರ ವಿರುದ್ಧ ಫೈಟ್ ಮಾಡ್ತೇನೆ: ಜೈಲು ನನ್ನಲ್ಲಿ ಪರಿವರ್ತನೆ ತಂದಿದೆ: ವಕೀಲ ಜಗದೀಶ್
ಬೆಂಗಳೂರು, ಮಾ. 08: "ನನಗಾಗಿ ಕನ್ನಡಿಗರು ಮಿಡಿದಿದ್ದಾರೆ. ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸುತ್ತೇನೆ. ಸಣ್ಣ ವಿಚಾರಗಳಿಂದ ನನ್ನ ಹೋರಾಟ ಹಳಿ ತಪ್ಪಿತ್ತು. ಪಾಸಿಬಲಿ ಪರಿಸ್ಥಿತಿಯೋ ಗೊತ್ತಿಲ್ಲ. ಅದು ಜೈಲು ಇಲ್ಲ. ಪರಿವರ್ತನೆಯ ಜಾಗ. ನನ್ನಲ್ಲಿ ಜೈಲು ಪರಿವರ್ತನೆ ತಂದಿದೆ"
ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ 24 ದಿನ ಜೈಲಿನಲ್ಲಿದ್ದ ವಕೀಲ ಜಗದೀಶ್ ಮಹದೇವ್ ಅವರು ಮಂಗಳವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಎರಡೂ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಜಗದೀಶ್ ಮಂಗಳವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು. ಅವರ ಅಭಿಮಾನಿಗಳು ಜಗದೀಶ್ಗೆ ಹೂವಿನ ಹಾರ ಹಾಕಿ ಬರ ಮಾಡಿಕೊಂಡರು.
ಜೈಲಿನಿಂದ ಬಿಡುಗಡೆಯಾದ ಬಳಿಕ ಎಂದಿನಂತೆ ಫೇಸ್ ಬುಕ್ ಲೈವ್ನಲ್ಲಿ ಕಾಣಿಸಿಕೊಂಡ ಜಗದೀಶ್ ತನ್ನ ಜೈಲು ಜೀವನ ಹಾಗೂ ಭ್ರಷ್ಟಾಚಾರ ವಿರುದ್ಧದ ಹೋರಾಟ ಕುರಿತ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಹಳೇ ದಾಟಿಯಲ್ಲಿಯೇ ತನ್ನ ಸ್ನೇಹಿತೆಯ ಫೇಸ್ ಬುಕ್ ಪೇಜ್ನಲ್ಲಿ ತನ್ನ ಅಭಿಪ್ರಾಯ ಹಂಚಿಕೊಂಡಿದ್ದಾರೆ.

''ನನಗೆ ಕನ್ನಡಿಗರು ಮಿಡಿದಿದ್ದಾರೆ. ಭ್ರಷ್ಟಾಚಾರ ವಿಚಾರದಲ್ಲಿ ನನ್ನ ಮುಂದಿನ ಹೋರಾಟ ಎಂದಿನಂತೆ ಮುಂದುವರೆಯಲಿದೆ. ಸಣ್ಣ ವಿಚಾರಗಳಿಂದ ಹಳಿ ತಪ್ಪಿತ್ತು. ಅಥವಾ ಪರಿಸ್ಥಿತಿಯೋ ಗೊತ್ತಿಲ್ಲ. ನನಗೆ ಮಿಡಿದವರಿಗಾಗಿ ಥ್ಯಾಂಕ್ಸ್ ಹೇಳುತ್ತೇನೆ. ಭ್ರಷ್ಟಾಚಾರ ಪ್ರಕರಣದಲ್ಲಿ ಹೋರಾಟ ಮಾಡಿದ್ದಕ್ಕೆ ಅನಿವಾರ್ಯವಾಗಿ ಜೈಲಿಗೆ ಹೋಗಬೇಕಾಯಿತು. ವಕೀಲನಾಗಿ ನಾನು ತಪ್ಪು ಮಾಡಿದ್ದೇನೆ. ಆದರೆ ಒಬ್ಬ ಮಗನ ತಂದೆಯಾಗಿ ಸರಿಯಾಗಿಯೇ ಮಾಡಿದ್ದೇನೆ. ಇನ್ನು ನನಗಾಗಿ ವಿಧಾನಸೌಧ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಎಲ್ಲರನ್ನು ವೈಯಕ್ತಿಕವಾಗಿ ಭೇಟಿ ಮಾಡುತ್ತೇನೆ,'' ಎಂದು ಜಗದೀಶ್ ಹೇಳಿಕೊಂಡಿದ್ದಾರೆ.
-
Karnataka Weather: ಕಲಬುರಗಿಯಲ್ಲಿ 41ಡಿಸೆ ತಾಪಮಾನ, ಉಷ್ಣಅಲೆ ಎಚ್ಚರಿಕೆ, ಕೆಲವೆಡೆ ಮಳೆ ಸಾಧ್ಯತೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications