Get Updates
Get notified of breaking news, exclusive insights, and must-see stories!

ಭ್ರಷ್ಟಾಚಾರ ವಿರುದ್ಧ ಫೈಟ್ ಮಾಡ್ತೇನೆ: ಜೈಲು ನನ್ನಲ್ಲಿ ಪರಿವರ್ತನೆ ತಂದಿದೆ: ವಕೀಲ ಜಗದೀಶ್

ಬೆಂಗಳೂರು, ಮಾ. 08: "ನನಗಾಗಿ ಕನ್ನಡಿಗರು ಮಿಡಿದಿದ್ದಾರೆ. ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸುತ್ತೇನೆ. ಸಣ್ಣ ವಿಚಾರಗಳಿಂದ ನನ್ನ ಹೋರಾಟ ಹಳಿ ತಪ್ಪಿತ್ತು. ಪಾಸಿಬಲಿ ಪರಿಸ್ಥಿತಿಯೋ ಗೊತ್ತಿಲ್ಲ. ಅದು ಜೈಲು ಇಲ್ಲ. ಪರಿವರ್ತನೆಯ ಜಾಗ. ನನ್ನಲ್ಲಿ ಜೈಲು ಪರಿವರ್ತನೆ ತಂದಿದೆ"

ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ 24 ದಿನ ಜೈಲಿನಲ್ಲಿದ್ದ ವಕೀಲ ಜಗದೀಶ್ ಮಹದೇವ್ ಅವರು ಮಂಗಳವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಎರಡೂ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಜಗದೀಶ್ ಮಂಗಳವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು. ಅವರ ಅಭಿಮಾನಿಗಳು ಜಗದೀಶ್‌ಗೆ ಹೂವಿನ ಹಾರ ಹಾಕಿ ಬರ ಮಾಡಿಕೊಂಡರು.

ಜೈಲಿನಿಂದ ಬಿಡುಗಡೆಯಾದ ಬಳಿಕ ಎಂದಿನಂತೆ ಫೇಸ್ ಬುಕ್ ಲೈವ್‌ನಲ್ಲಿ ಕಾಣಿಸಿಕೊಂಡ ಜಗದೀಶ್ ತನ್ನ ಜೈಲು ಜೀವನ ಹಾಗೂ ಭ್ರಷ್ಟಾಚಾರ ವಿರುದ್ಧದ ಹೋರಾಟ ಕುರಿತ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಹಳೇ ದಾಟಿಯಲ್ಲಿಯೇ ತನ್ನ ಸ್ನೇಹಿತೆಯ ಫೇಸ್ ಬುಕ್ ಪೇಜ್‌ನಲ್ಲಿ ತನ್ನ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Advocate Jagadish Mahadev Released From Bengaluru Jail

''ನನಗೆ ಕನ್ನಡಿಗರು ಮಿಡಿದಿದ್ದಾರೆ. ಭ್ರಷ್ಟಾಚಾರ ವಿಚಾರದಲ್ಲಿ ನನ್ನ ಮುಂದಿನ ಹೋರಾಟ ಎಂದಿನಂತೆ ಮುಂದುವರೆಯಲಿದೆ. ಸಣ್ಣ ವಿಚಾರಗಳಿಂದ ಹಳಿ ತಪ್ಪಿತ್ತು. ಅಥವಾ ಪರಿಸ್ಥಿತಿಯೋ ಗೊತ್ತಿಲ್ಲ. ನನಗೆ ಮಿಡಿದವರಿಗಾಗಿ ಥ್ಯಾಂಕ್ಸ್ ಹೇಳುತ್ತೇನೆ. ಭ್ರಷ್ಟಾಚಾರ ಪ್ರಕರಣದಲ್ಲಿ ಹೋರಾಟ ಮಾಡಿದ್ದಕ್ಕೆ ಅನಿವಾರ್ಯವಾಗಿ ಜೈಲಿಗೆ ಹೋಗಬೇಕಾಯಿತು. ವಕೀಲನಾಗಿ ನಾನು ತಪ್ಪು ಮಾಡಿದ್ದೇನೆ. ಆದರೆ ಒಬ್ಬ ಮಗನ ತಂದೆಯಾಗಿ ಸರಿಯಾಗಿಯೇ ಮಾಡಿದ್ದೇನೆ. ಇನ್ನು ನನಗಾಗಿ ವಿಧಾನಸೌಧ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಎಲ್ಲರನ್ನು ವೈಯಕ್ತಿಕವಾಗಿ ಭೇಟಿ ಮಾಡುತ್ತೇನೆ,'' ಎಂದು ಜಗದೀಶ್ ಹೇಳಿಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+