ಮುಂದಿನ ಏರೋ ಇಂಡಿಯಾ ಎಲ್ಲಿ, ಬೆಂಗಳೂರಿನಲ್ಲಿ ಇನ್ಮುಂದೆ ಶೋ ಇಲ್ಲ?
1996ರಿಂದ ಆರಂಭವಾದ ವೈಮಾನಿಕ ಪ್ರದರ್ಶನ ಬೆಂಗಳೂರಿನಲ್ಲೇ ನಡೆದುಕೊಂಡು ಬರುತ್ತಿತ್ತು. ಏರ್ ಶೋನ ಮುಂದಿನ ಆವೃತ್ತಿ ಬೆಂಗಳೂರಿನಲ್ಲಿ ನಡೆಯುತ್ತಿಲ್ಲ ಎನ್ನುವ ಮಾತು ಕೇಳಿಬರುತ್ತಿದೆ.
ನವದೆಹಲಿ, ಬೆಂಗಳೂರು ಫೆ 19: ಲಕ್ಷಾಂತರ ಜನ ಸಾಕ್ಷಿಯಾದ ಏರೋ ಇಂಡಿಯಾ 2017 ವೈಮಾನಿಕ ಪ್ರದರ್ಶನಕ್ಕೆ ಶನಿವಾರ (ಫೆ 18) ಅದ್ದೂರಿ ತೆರೆಬಿದ್ದಿದೆ. ಐದು ದಿನಗಳ ಲೋಹದ ಹಕ್ಕಿಗಳ ಆತ್ಯಾಕರ್ಷಕ ಜಾತ್ರೆಯಲ್ಲಿ ಈ ಬಾರಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.
ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ನಡೆದದ್ದು ಕೊನೆಯ ವೈಮಾನಿಕ ಪ್ರದರ್ಶನ ಎನ್ನುವ ಮಾತು ಕೇಳಿ ಬರುತ್ತಿರುವ ಬೆನ್ನಲ್ಲೇ, ರಕ್ಷಣಾ ಇಲಾಖೆಯ ಅಧಿಕಾರಿಗಳು ಅಡ್ಡಗೋಡೆಯಲ್ಲಿ ದೀಪ ಇಟ್ಟ ಹಾಗೇ ಹೇಳಿಕೆ ನೀಡಿದ್ದಾರೆ. (ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ)

ಪ್ರತೀ ಎರಡು ವರ್ಷಕ್ಕೊಮ್ಮೆ ನಡೆಯುವ ವೈಮಾನಿಕ ಪ್ರದರ್ಶನದ ಕೊನೆಯ ದಿನ ಮುಂದಿನ ಆವೃತ್ತಿ ಎಲ್ಲಿ ಎಂದು ಘೋಷಿಸಲಾಗುತ್ತಿತ್ತು. ಅಂತೆಯೇ, ಕಳೆದ ಆವೃತ್ತಿಯಲ್ಲಿ ಮುಂದಿನ ಶೋ ಬೆಂಗಳೂರಿನಲ್ಲಿ ಎಂದು ಘೋಷಿಸಲಾಗಿತ್ತು.
ಆದರೆ, ಈ ಬಾರಿಯ ಏರ್ ಶೋನಲ್ಲಿ ಮುಂದಿನ ಆವೃತ್ತಿ ಎಲ್ಲಿ ನಡೆಯಲಿದೆ ಎನ್ನುವುದರ ಬಗ್ಗೆ ಘೋಷಣೆ ಹೊರಬೀಳದೇ ಇರುವುದರಿಂದ, ಬೆಂಗಳೂರಿನಲ್ಲಿ ಇನ್ನು ಮುಂದೆ ಏರ್ ಶೋ ನಡೆಯುವುದಿಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ.
ಈ ಬಗ್ಗೆ ರಕ್ಷಣಾ ಇಲಾಖೆಯ ಅಧಿಕಾರಿಗಳು ಸ್ಪಷ್ಟ ಉತ್ತರ ನೀಡುತ್ತಿಲ್ಲ. ಕಳೆದ ಬಾರಿ ಸಿಎಂ ಸಿದ್ದರಾಮಯ್ಯ ಕೆಲವೊಂದು ವಿಚಾರದಲ್ಲಿ ಆತಂಕ ವ್ಯಕ್ತಪಡಿಸಿದ್ದ ಹಿನ್ನಲೆಯಲ್ಲಿ ಮುಂದಿನ ಶೋ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಪ್ರಧಾನಿ ಸ್ಪಷ್ಟನೆ ನೀಡಿದ್ದರು.
ಮುಂದಿನ ಆವೃತ್ತಿಯ ಬಗ್ಗೆ ರಕ್ಷಣಾ ಸಚಿವರು ನಿರ್ಧರಿಸಲಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ. ಮೂಲಗಳ ಪ್ರಕಾರ ಏರ್ ಶೋ, ಬೆಂಗಳೂರಿನಿಂದ ಗೋವಾಗೆ ಶಿಫ್ಟ್ ಆಗುವ ಸಾಧ್ಯತೆಯಿದೆ ಎನ್ನುವ ಮಾತು ಕೇಳಿ ಬರುತ್ತಿದೆ.
1996ರಿಂದ ಆರಂಭವಾದ ವೈಮಾನಿಕ ಪ್ರದರ್ಶನದ ಹಬ್ಬ ಪ್ರತೀ ಬಾರಿಯೂ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿತ್ತು. ಈ ಬಾರಿ ನಡೆದದ್ದು ಹನ್ನೊಂದನೇ ಏರ್ ಶೋ. (ಚಿತ್ರ: ಪಿಟಿಐ)
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications