ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ; ಕ್ಷೇತ್ರ ಹಂಚಿಕೆ ಕುರಿತು ಹೆಚ್ ಡಿ ದೇವೇಗೌಡರು ಹೇಳಿದ್ದೇನು?
ಬೆಂಗಳೂರು, ಅಕ್ಟೋಬರ್ 10: 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿಯನ್ನ ಅಧಿಕೃತಗೊಳಿಸಿದ್ದು, ದಸರಾ ನಂತರ ಬಿಜೆಪಿ ಜತೆ ಸೀಟು ಹಂಚಿಕೆ ಮಾತುಕತೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೈತ್ರಿ ಕುರಿತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು. ಸಂಸತ್ ಅಧಿವೇಶನದ ನಂತರ ನನ್ನ ಆರೋಗ್ಯ ಸ್ಥಿತಿ ಸುಧಾರಿಸಿದರೆ, ನಾನು ಅಥವಾ ಕುಮಾರಸ್ವಾಮಿ ಮತ್ತೊಮ್ಮೆ ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತೇವೆ ಎಂದು ದೇವೇಗೌಡ್ರು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಮಾತುಕತೆಯಲ್ಲಿಹಿಂದಿನ ನಾಲ್ಕು ಚುನಾವಣೆಯ ಮತ ಗಳಿಕೆ ಒಟ್ಟುಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ. ದಸರಾ ಬಳಿಕ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯಲಿದೆ. ಹಿಂದಿನ ಚುನಾವಣೆಯ ಮತಗಳಿಕೆ ಒಟ್ಟು ಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ.
ಆದರೆ ಯಾವ ಕ್ಷೇತ್ರ ಅನ್ನೋ ಬಗ್ಗೆ ಇನ್ನೂ ಫೈನಲ್ ಆಗಿಲ್ಲ. ಮಂಡ್ಯ ಸೇರಿದಂತೆ ಯಾವುದೇ ತೀರ್ಮಾನ ಆಗಿಲ್ಲ. ಸದ್ಯ ಹಾಸನ ಜೆಡಿಎಸ್, ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಕೈಯಲ್ಲಿದೆ. ಉಳಿದೆಡೆ ಬಿಜೆಪಿನೇ ಇದೆ. ಕಾಂಗ್ರೆಸ್ 28 ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಆ ಕಾರಣಕ್ಕೆ ಬಿಜೆಪಿ,ಜೆಡಿಎಸ್ ಒಂದುಗೂಡಿ ಹೋಗುವ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.

ಜಾತಿ ಆಧಾರದ ಮೇಲೆ ಮತಗಳು ಹೇಗೆ ವಿಭಜನೆ ಆಗುತ್ತದೆ ಎನ್ನುವ ಬಗ್ಗೆ ನಾನು ಇವತ್ತು ವಾದ ಮಾಡಲ್ಲ. ಮತದಾರರ ತೀರ್ಮಾನ ಹೇಗಿರಲಿದೆ ಎಂಬುದನ್ನು ನೋಡಬೇಕಷ್ಟೆ, ಮೈತ್ರಿ ಮಾಡಿಕೊಳ್ಳುವ ಮೊದಲು 19 ಶಾಸಕರು, ಎಂಟು ಎಂಎಲ್ಸಿಗಳು ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರೊಂದಿಗೆ ಎರಡು ಸುತ್ತಿನ ಮಾತುಕತೆ ನಡೆಸಿದ್ದೇವೆ. ನಮ್ಮ ನಾಯಕರ ಜತೆ ಮಾತನಾಡಿದ ನಂತರ ಕುಮಾರಸ್ವಾಮಿ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟಪಡಿಸಿದರು.
ಶಿವಮೊಗ್ಗ ಗಲಭೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಶಿವಮೊಗ್ಗ ಘಟನೆ ಬಗ್ಗೆ ಈಗಾಗಲೇ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಘಟನೆ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಾರೆ. ಮಾಧ್ಯಮದಲ್ಲಿ ಬಂದಿರುವುದನ್ನು ಕೇಳಿದ್ದೇನೆಯೇ ಹೊರತು ವಾಸ್ತವಾಂಶ ತಿಳಿದಿಲ್ಲ. ಶಿವಮೊಗ್ಗ ಸೆನ್ಸಿಟಿವ್ ಏರಿಯಾ. ಶಿವಮೊಗ್ಗದಲ್ಲಿ ಹಿಂದಿನ ಹಲವಾರು ಘಟನೆಗಳನ್ನು ಗಮನಿಸಿದಾಗ ಇಂತಹ ವಿಷಯಗಳಲ್ಲಿ ಸರಕಾರ ಮುಂಜಾಗ್ರತೆ ವಹಿಸಬೇಕಿತ್ತು ಎಂದು ಹೆಚ್ ಡಿ ದೇವೇಗೌಡ್ರು ಹೇಳಿದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications