ಗೌರಿ ಹತ್ಯೆಯ ಬಳಿಕ, ಎಡಪಂಥೀಯರನ್ನು ಕಾಯಲು ಮುಂದಾದ ಸಿಎಂ
Recommended Video

ಬೆಂಗಳೂರು, ಸೆ. 06: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಬಳಿಕ, ಎಡಪಂಥೀಯರಿಗೆ ರಕ್ಷಣೆ ಒದಗಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಗೌರಿ ಲಂಕೇಶ್ ಹತ್ಯೆ ತನಿಖೆ ನಡೆಸಲು ವಿಶೇಷ ತನಿಖಾ ದಳ ರಚನೆ ಕುರಿತಂತೆ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಇತ್ತೀಚೆಗೆವೀರಶೈವ ಲಿಂಗಾಯತ ಪ್ರತ್ಯೇಕತೆ ಹೋರಾಟದಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಬಳಿಕ, ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಆ ದಿನಗಳು ಚಿತ್ರ ಖ್ಯಾತಿಯ ನಟ ಚೇತನ್ ಅಹಿಂಸ ಅವರು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಗೌರಿ ಲಂಕೇಶ್ ಅವರಿಗೆ ಕಳೆದ ಕೆಲ ದಿನಗಳಿಂದ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಈ ಬಗ್ಗೆ ಗುಪ್ತಚರ ಇಲಾಖೆಗಳಾಗಲಿ, ಪೊಲೀಸರಿಗಾಗಲಿ ಯಾವುದೇ ಮಾಹಿತಿ ಸಿಕ್ಕಿಲ್ಲ.
ಆದರೆ, ಎಡಪಂಥೀಯ ನಿಲುವು ಹೊಂದಿರುವ ವ್ಯಕ್ತಿಗಳು, ಸಮಾಜದ ಮೌಢ್ಯಗಳನ್ನು ಅಳಿಸಲು ಹೋರಾಟ ನಡೆಸುತ್ತಿರುವವರಿಗೆ ನಿರಂತರವಾಗಿ ಬೆದರಿಕೆಗಳು ಬರುತ್ತಿರುವ ಬಗ್ಗೆ ಸರ್ಕಾರ ಮಾಹಿತಿ ಕಲೆ ಹಾಕಿದೆ.
ಪ್ರೋ. ಭಗವಾನ್, ನಿಡುಮಾಮಿಡಿ ಶ್ರೀಗಳು, ನಟ ಚೇತನ್ ಸೇರಿದಂತೆ ಅನೇಕರಿಗೆ ರಕ್ಷಣೆ ಒದಗಿಸುವಂತೆ ಸಾಮಾಜಿಕ ಜಾಲ ತಾಣಗಳಲ್ಲಿ ಕೇಳಿಕೊಳ್ಳಲಾಗುತ್ತಿದೆ.
ಇತ್ತ ವಿಶೇಷ ತನಿಖಾ ದಳ ರಚನೆ ಕುರಿತಂತೆ ಪೊಲೀಸ್ ವರಿಷ್ಠಾಧಿಕಾರಿಗಳು ಬುಧವಾರ ಸಂಜೆ ಮತ್ತೊಮ್ಮೆ ಸಭೆ ಸೇರಿದ್ದಾರೆ. ಡಿಸಿಪಿ ಮಾಲಿನಿ ಕೃಷ್ಣಮೂರ್ತಿ, ಕ್ರೈಂ ವಿಭಾಗದ ಆಯುಕ್ತ ಸತೀಶ್, ಚಿಕ್ಕಪೇಟೆಯ ಎಸಿಪಿ, ಮುಂತಾದವರು ಸಭೆಯಲ್ಲಿದ್ದಾರೆ.
-
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications