Breaking: ಆಟೋ ಪ್ರಯಾಣದ ದರ ಇಳಿಸಿದ ಊಬರ್
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕ ಹೈಕೋರ್ಟ್ ಆದೇಶದ ಬೆನ್ನಲ್ಲೇ ಊಬರ್ ಕಂಪನಿ ಆಟೋ ಪ್ರಯಾಣದ ದರ ಇಳಿಸುವ ಮೂಲಕ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ.
ಮೊಬೈಲ್ ಅಪ್ಲಿಕೇಷನ್ ಆಧಾರಿತ ಓಲಾ, ಊಬರ್ ಕಂಪನಿಗಳು ಆಟೋಗಳ ಪ್ರಯಾಣಿಕರಿಂದ ಹೆಚ್ಚುವರಿ ಹಣ ಪಡೆಯುತ್ತಿವೆ ಎಂಬ ದೂರುಗಳು ಕೇಳಿ ಬಂದಿದ್ದವು. ಈ ಸಂಬಂಧ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಹೈಕೋರ್ಟ್ ಆದೇಶದ ಬೆನ್ನಲ್ಲೇ ಶನಿವಾರದಿಂದ ಅನ್ವಯವಾಗುವಂತೆ ಊಬರ್ ಕಂಪನಿ ಮಾತ್ರ ಆಟೋರಿಕ್ಷಾಗಳ ಪ್ರಯಾಣ ದರ ಇಳಿಕೆ ಮಾಡಿದೆ.
ಊಬರ್ ಕಂಪನಿಯು ಎರಡು ಕಿಲೋ ಮೀಟರ್ ಪ್ರಯಾಣಕ್ಕೆ 40ರಿಂದ 45 ರೂಪಾಯಿ ನಿಗದಿಪಡಿಸಿದೆ. ಇದರಿಂದ ಆಟೋ ಪ್ರಯಾಣದ ದರ ಮೊದಲಿಗಿಂತ ಶೇ.25ರಿಂದ 30ರಷ್ಟು ದರದಲ್ಲಿ ಇಳಿಕೆ ಆಗಿದೆ. ಊಬರ್ ಹೊರತು ಓಲಾ ಕಂಪನಿ ಎರಡು ಕಿಲೋ ಮೀಟರ್ಗೆ 75ರಿಂದ 80ರೂ.ವರೆಗೆ ಹೆಚ್ಚುವರಿ ಹಣ ಪಡೆಯುವುದನ್ನು ಮುಂದುವರಿಸಿವೆ ಎಂದು ತಿಳಿದು ಬಂದಿದೆ.

ಓಲಾದಿಂದ ಅಧಿಕ ಹಣ ವಸೂಲಿ; ಆಟೋರಿಕ್ಷಾ ಅನುಮತಿ ಹಾಗೂ ಹೆಚ್ಚು ದರ ವಿಧಿಸುವ ಪ್ರಕರಣ ವಿಚಾರವಾಗಿ ರಾಜ್ಯ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆದೇಶದನ್ವಯ ರಾಜ್ಯ ಸರ್ಕಾರ ಮುಂದಿನ 15ದಿನದಲ್ಲಿ ಆಟೋ ರಿಕ್ಷಾಗಳ ಪ್ರಯಾಣದ ದರವನ್ನು ಹೊಸದಾಗಿ ನಿಗದಿಪಡಿಸಬೇಕು. ಈ ಸಂಬಂಧ ಕಂಪನಿಗಳ ಜತೆ ಚರ್ಚಿಸಿ ಎಂದಿರುವ ಹೈಕೋರ್ಟ್ ಸರ್ಕಾರದ ದರ ನಿಗದಿವರೆಗೆ ಓಲಾ, ಊಬರ್ ಕಂಪನಿಗಳು ನಿಗದಿತ ದರ ಮತ್ತು ಹೆಚ್ಚುವರಿ ಶೇ. 10ರಷ್ಟು ಹಣ, ಸೇವಾ ತೆರಿಗೆ ಮಾತ್ರ ಪಡೆಯಬೇಕು ಎಂದು ತಿಳಿಸಿದೆ. ಇದರಿಂದ ಕೂಡಲೇ ಎಚ್ಚೆತ್ತಿರುವ ಊಬರ್ ಪ್ರಯಾಣದ ದರ ಇಳಿಕೆ ಮಾಡಿದೆ.

ಮೆಜೆಸ್ಟಿಕ್ ಮತ್ತು ಶಿವಾನಂದ ವೃತ್ತದಿಂದ ನಡುವೆ ಎರಡು ಕಿಲೋ ಮೀಟರ್ಗಿಂತಲೂ ಕಡಿಮೆ ದೂರ ಇದೆ. ಇಷ್ಟು ದೂರದ ಪ್ರಯಾಣಕ್ಕೆ ಶನಿವಾರ ಉಬರ್ ಆಪ್ನಲ್ಲಿ 36ರೂ. ದರ ತೋರಿಸಿದರೆ, ಓಲಾ ಆಪ್ ನಲ್ಲಿ 64ರೂ. ದರ ನಿಗದಿ ಇರುವುದನ್ನು ಕಾಣಬಹುದು.
ಹೈಕೋರ್ಟ್ಗೆ ಪ್ರತ್ಯೇಕ 2 ಪಿಐಎಲ್ ಸಲ್ಲಿಕೆ: ವಿಚಾರಣೆ
ಆ್ಯಪ್ ಆಧಾರಿತ ಓಲಾ ಹಾಗೂ ಉಬರ್ ಆಟೋರಿಕ್ಷಾಗಳ ಸೇವೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿದ ಆದೇಶವನ್ನು ರದ್ದು ಮಾಡುವಂತೆ ಕೋರಿ ಎಎನ್ಐ ಟೆಕ್ನಾಲಜೀಸ್ ಕಂಪನಿಯೊಂದು ಮತ್ತು ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಈ ಎರಡು ಕಂಪನಿಗಳು ಹೈಕೋರ್ಟ್ಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳನ್ನು ಈ ಹಿಂದೆಯೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಪೀಠ ನ್ಯಾಯ ಸಮ್ಮತವಾಗಿ ದರ ನಿಗದಿಪಡಿಸಬೇಕು. ಅದಕ್ಕಾಗಿ ಓಲಾ ಮತ್ತು ಉಬರ್ ಕಂಪನಿಗಳ ಜತೆ ಚರ್ಚೆ ನಡೆಸಿ ಎಂದು ಸೂಚಿಸಿತ್ತು.
ನಂತರ ಗುರುವಾರ ವಿಚಾರ ನಡೆಸಿದ ಹೈಕೋರ್ಟ್ ಓಲಾ ಮತ್ತು ಉಬರ್ ಆಟೋರಿಕ್ಷಾಗಳ ಸಂಬಂಧಿಸಿದಂತೆ ಎದ್ದಿರುವ ಸಮಸ್ಯೆಗಳನ್ನು ಜನರಿಗೆ ತೊಂದರೆ ಆಗದಂತೆ ಪರಿಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿತ್ತು.
ಅದರಂತೆ ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು ಮುಂದಿನ 15ದಿನದಲ್ಲಿ ರಾಜ್ಯ ಸರ್ಕಾರ ಕಂಪನಿಗಳ ಜತೆ ಚರ್ಚಿಸಿ ಹೊಸ ದರ ನಿಗದಿ ಮಾಡಿ ಎಂದು ಹೇಳಿತು. ಜತೆಗೆ ಕಂಪನಿಗಳಿಗೆ ಕೆಲವು ಸಲಹೆಗಳನ್ನು ನೀಡಿತು. ಇದರ ಬೆನ್ನಲ್ಲೆ ಉಬರ್ ಕಂಪನಿ ಮಾತ್ರ ಆಟೋ ರಿಕ್ಷಾಗಳ ಪ್ರಯಾಣದ ದರವನ್ನು ಶನಿವಾರದಿಂದಲೇ ಜಾರಿಗೆ ಬರುವಂತೆ ಇಳಿಕೆ ಮಾಡಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ









Click it and Unblock the Notifications