ಲಕ್ಷ್ಮಣ್ ಸವದಿ ಬಳಿಕ ಬಿಜೆಪಿಯಿಂದ ಇನ್ನು ಹಲವರು ಕಾಂಗ್ರೆಸ್ಗೆ ಬರಲಿದ್ದಾರೆ: ಡಿಕೆಶಿ
ಬೆಂಗಳೂರು, ಏಪ್ರಿಲ್ 14: ಶುಕ್ರವಾರ ಬಿಜೆಪಿಯ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ಮುಂದಾಗಿರುವ ಹಿನ್ನೆಲೆಯಲ್ಲಿ ಅವರ ಜೊತೆ ಸಭೆಯ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿಯಿಂದ ಹಲವಾರು ಮಂದಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.
ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರುವ ನಿರ್ಧಾರದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವಕುಮಾರ್, ಲಕ್ಷ್ಮಣ ಸವದಿ ಅವರು ಹಿರಿಯ ನಾಯಕರು, ಯಾವುದೇ ಷರತ್ತುಗಳಿಲ್ಲದೆ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ, ನಮ್ಮ ಕುಟುಂಬದ ಸದಸ್ಯರಾಗುತ್ತಿದ್ದಾರೆ, ಅವರಂತಹ ನಾಯಕರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಖಚಿತಪಡಿಸಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಅವರು ನಮ್ಮ ನಾಯಕತ್ವ ಮತ್ತು ಸಿದ್ಧಾಂತವನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಲಕ್ಷ್ಮಣ ಸವದಿ ಅವರೊಂದಿಗೆ ಚರ್ಚೆ ನಡೆಸಿದರು ಹಾಗೂ ಎಲ್ಲಾ ಸದಸ್ಯರು ಅವರಿಗೆ ಹೃತ್ಪೂರ್ವಕ ಸ್ವಾಗತವನ್ನು ನೀಡಿದ್ದಾರೆ. ಲಕ್ಷ್ಮಣ ಸವದಿ ಅವರ ಜೊತೆಗೆ ಇನ್ನೂ ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಎಲ್ಲರನ್ನು ಪಕ್ಷಕ್ಕೆ ಒಮ್ಮತದಿಂದ ಸ್ವಾಗತಿಸುತ್ತೇವೆ. ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಯನ್ನು ಭೇಟಿ ಮಾಡಿ ಅವರ ರಾಜೀನಾಮೆ ಸಲ್ಲಿಸಲಿದ್ದಾರೆ. ಸಂಜೆ 4.30 ಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂದು ಅವರು ತಿಳಿಸಿದರು.
ಶುಕ್ರವಾರ ಲಕ್ಷ್ಮಣ ಸವದಿ ಶಿವಕುಮಾರ್ ಮತ್ತು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾದರು. ಶಿವಕುಮಾರ್ ಅವರು ಸವದಿ ರಾಜೀನಾಮೆ ಬಳಿಕ ಪತ್ರಿಕಾಗೋಷ್ಠಿ ನಡೆಸಲಿದ್ದು, ಸವದಿ ಅವರು ರಾಜಕೀಯ ಬದಲಾವಣೆಯನ್ನು ಅಧಿಕೃತಗೊಳಿಸಲಿದ್ದಾರೆ. ನಾವು ಲಕ್ಷ್ಮಣ ಸವದಿ ಅವರನ್ನು ಸಂಜೆ 4 ಗಂಟೆಗೆ ಪಕ್ಷಕ್ಕೆ ಸ್ವಾಗತಿಸುತ್ತಿದ್ದೇವೆ. ಅವರು ಅಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶಿವಕುಮಾರ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ಲಕ್ಷ್ಮಣ ಸವದಿ ಅವರು ಏಪ್ರಿಲ್ 12ರಂದು ತಮ್ಮ ವಿಧಾನಸಭಾ ಕ್ಷೇತ್ರವಾದ ಅಥಣಿಯಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ತಪ್ಪಿದ ನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಸವದಿ ಕಾಂಗ್ರೆಸ್ ಸೇರುತ್ತಿದ್ದಾರೆ, ಬಿಜೆಪಿಯವರು ಅವರನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು. ಸರಿಯಾಗಿ ನಡೆಸಿಕೊಳ್ಳಬೇಕೆಂಬುದು ಅವರ ಒಂದೇ ಷರತ್ತಾಗಿತ್ತು. ಅಥಣಿ ಕ್ಷೇತ್ರಕ್ಕೆ ಸ್ಪರ್ಧಿಸಲು ಟಿಕೆಟ್ ಸಿಗುವುದು ನೂರಕ್ಕೆ ನೂರು ಖಚಿತವಾಗಿದೆ. ಅವರು ತಮ್ಮ ವಿಧಾನಸಭಾ ಕ್ಷೇತ್ರದಿಂದ ಗೆಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಏತನ್ಮಧ್ಯೆ, ಮಾಜಿ ಎಂಎಲ್ಸಿ ಮತ್ತು ಕಾಂಗ್ರೆಸ್ ಮುಖಂಡ ರಘು ಆಚಾರ್ ಶುಕ್ರವಾರ ಪಕ್ಷದ ಮುಖ್ಯಸ್ಥ ಎಚ್ಡಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ಗೆ ಸೇರ್ಪಡೆಯಾದರು. ಮಂಗಳವಾರ ಅಧಿಕಾರದಲ್ಲಿರುವ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಪಟ್ಟಿಯಲ್ಲಿ 52 ಹೊಸ ಮುಖಗಳು ಮತ್ತು 8 ಮಹಿಳೆಯರು ಕಾಣಿಸಿಕೊಂಡಿದ್ದಾರೆ.
2018 ರ ಚುನಾವಣೆಯಲ್ಲಿ, ಬಿಜೆಪಿ 104 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಏಕೈಕ ಪಕ್ಷವಾಗಿ ಹೊರಹೊಮ್ಮಿತು, ಕಾಂಗ್ರೆಸ್ ಮತ್ತು ನಂತರ ಮಿತ್ರ ಪಕ್ಷ ಜೆಡಿಎಸ್ (ಎಸ್) ಕ್ರಮವಾಗಿ 80 ಮತ್ತು 37 ಸ್ಥಾನಗಳನ್ನು ಗಳಿಸಿತು. ಪ್ರಸ್ತುತ ಕರ್ನಾಟಕ ವಿಧಾನಸಭೆಯ ಅವಧಿ ಮೇ 24ಕ್ಕೆ ಕೊನೆಗೊಳ್ಳಲಿದ್ದು, 224 ಸ್ಥಾನಗಳ ವಿಧಾನಸಭೆಯ ಮತ ಎಣಿಕೆ ಮೇ 13ರಂದು ನಡೆಯಲಿದೆ.












Click it and Unblock the Notifications