ಸ್ಟಿಂಗ್ ಆಪರೇಷನ್ ಪ್ರಕರಣ: ರಾಜ್ಯಸಭಾ ಚುನಾವಣೆ ಮುಂದೂಡಿಕೆ?
ಬೆಂಗಳೂರು, ಜೂ 3: ಇಡೀ ರಾಜ್ಯವೇ ತಲೆ ತಗ್ಗಿಸುವುಂತಹ ಕುಟುಕು ಕಾರ್ಯಾಚರಣೆಯಲ್ಲಿ ಕೆಲವು ಶಾಸಕರು ಹಣದ ಬೇಡಿಕೆಯಿಟ್ಟ ವಿಚಾರವನ್ನು ಕೇಂದ್ರ ಚುನಾವಣಾ ಆಯೋಗ ಗಂಭೀರವಾಗಿ ತೆಗೆದುಕೊಂಡಿದೆ.
ಈ ಡೀಲ್ ಹಗರಣದ ಕುರಿತು ವಿಸ್ಕೃತ ವರದಿ ನೀಡುವಂತೆ ಚುನಾವಣಾ ಆಯೋಗ ಕೇಳಿದ್ದು, ಮೂಲಗಳ ಪ್ರಕಾರ ರಾಜ್ಯಸಭಾ ಚುನಾವಣೆ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. (ಸ್ಟಿಂಗ್ ಆಪರೇಷನ್, 3ಕಾಸಿಗೆ ಹರಾಜಾದ ಶಾಸಕರ ಮರ್ಯಾದೆ)
ಸ್ಟಿಂಗ್ ಆಪರೇಷನ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ, ಈ ಪ್ರಕರಣದ ಸಂಬಂಧ ಕೇಂದ್ರ ಚುನಾವಣಾ ಆಯೋಗ ವರದಿ ಕೇಳಿದೆ.

ಹಾಗಾಗಿ, ರಾಜ್ಯಸಭಾ ಚುನಾವಣೆ ಮುಂದೂಡುವ ಸಾಧ್ಯತೆ ಇದೆ. ಜೊತೆಗೆ, ರಾಜ್ಯ ಚುನಾವಣಾ ಆಯೋಗದ ವರದಿ ಬಳಿಕ ಚುನಾವಣಾ ಮುಂದೂಡಿಕೆ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಝಾ ಹೇಳಿದ್ದಾರೆ.
ರಾಜ್ಯಸಭಾ ಚುನಾವಣೆಯ ಹೊಸ್ತಿಲಲ್ಲಿ ಇಂಡಿಯಾ ಟುಡೇ ನಡೆಸಿದ ಸ್ಟಿಂಗ್ ಆಪರೇಷನ್ ನಲ್ಲಿ ರಾಜ್ಯದ ನಾಲ್ವರು ಶಾಸಕರು ಮತಕ್ಕಾಗಿ ಕೋಟಿ ಕೋಟಿ ಹಣದ ಆಮಿಷವೊಡ್ಡಿರುವ 'ದುರಂತಕಾರಿ' ದೃಶ್ಯಾವಳಿಗಳು ರೆಕಾರ್ಡ್ ಆಗಿದ್ದವು. (ವೋಟಿಗಾಗಿ ನೋಟು, ತಪ್ಪೇನಿದೆ)
ಕರ್ನಾಟಕದ ಶಾಸಕರಾದ ಜಿ ಟಿ ದೇವೇಗೌಡ, ಮಲ್ಲಿಕಾರ್ಜುನ ಖೂಬಾ, ವರ್ತೂರು ಪ್ರಕಾಶ್ ಮತ್ತು ಬಿ ಆರ್ ಪಾಟೀಲ್ ತಮ್ಮ ಮತಕ್ಕಾಗಿ ಐದರಿಂದ ಹತ್ತು ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದಾರೆಂದು ವರದಿಯಾಗಿತ್ತು.
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಾಲ್ಕು ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜೂನ್ 11ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ (ಜೂ 3) ಕೊನೆಯ ದಿನವಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications