ವಿಜಯಪುರದಲ್ಲಿ ತಾಯಿ-ಮಗಳು ಸತ್ತಿದ್ದ ಕುಟುಂಬಕ್ಕೆ ಸರಕಾರದಿಂದ ಪರಿಹಾರ
ವಿಜಯಪುರ, ಅಕ್ಟೋಬರ್ 11: ವಿಜಯಪುರದಲ್ಲಿ ಮನೆ ಗೋಡೆ ಕುಸಿದು ಬಿದ್ದು ಮೃತ ಪಟ್ಟಿದ್ದ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಬಸವನ ಬಾಗೇವಾಡಿ ತಹಶೀಲ್ದಾರ್ ಎಂ.ಎನ್.ಚೋರಸಗ್ತಿ ಮೃತರ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಅಲ್ಲದೆ ರಾಷ್ಟ್ರಿಯ ವಿಪತ್ತು ನಿರ್ವಹಣಾ ಸಮಿತಿಯಿಂದ ಸಹ ತಲಾ 50.000 ರೂಪಾಯಿ ಪರಿಹಾರ ನಿಡೋದಾಗಿ ಹೇಳಿದ್ದಾರೆ.
ಈ ಹಿಂದೆ ಪ್ರಕಟಗೊಂಡ ಸುದ್ದಿ
ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು, ತಾಯಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಭೈರವಾಡಗಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಂಕ್ರಮ್ಮ ಔರಾದಿ (60) ಹಾಗೂ ಮಗಳು ಮಹಾದೇವಿ ಔರಾದಿ (30) ಮೃತರು. ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ನೆನೆದಿದ್ದ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಶಂಕ್ರಮ್ಮಳ ಸಂಬಂಧಿಕರಾದ ಸಿದ್ದಪ್ಪ ಔರಾದಿ ಅವರ ಮನೆ ಕುಸಿದು ಬಿದ್ದು, ಅವಘಡ ಸಂಭವಿಸಿದೆ.

ಸಿದ್ದಪ್ಪನ ಮನೆ ಗೋಡೆ ಕುಸಿದು ಶಂಕ್ರಮ್ಮ ವಾಸವಿದ್ದ ತಗಡಿನ ಶೆಡ್ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ತಾಯಿ-ಮಗಳು ಸಾವನ್ನಪ್ಪಿದ್ದಾರೆ. ಮನೆಯಾಚೆ ಮಲಗಿದ್ದ ಶಂಕ್ರಮ್ಮಳ ಮಗ ಶಿವಪುತ್ರ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಸವನ ಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಷ್ಟು ಸಮಯ ಬರಗಾಲದಿಂದ ತತ್ತರಿಸಿದ್ದ ಜಿಲ್ಲೆಯ ಜನರಿಗೆ ಮಳೆಯಾಗುತ್ತಿರುವುದು ಒಂದು ಕಡೆ ಸಂತಸ ತಂದಿದ್ದರೆ, ಕೆಲವೆಡೆ ಜವರಾಯನಂತೆ ಅಟ್ಟಹಾಸ ಮೆಯುತ್ತಿದ್ದಾನೆ. ಈ ಬಾರಿಯ ಮಳೆಗಾಲದಲ್ಲಿ ವಿವಿಧೆಡೆ ಗೋಡೆ ಕುಸಿದು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications