ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ₹9,81,784 ಕೋಟಿ ಹೂಡಿಕೆ ಒಪ್ಪಂದ: ನಿರಾಣಿ
ಬೆಂಗಳೂರು,ನ.5: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದ್ದಾರೆ.
ಜಾಗತಿಕ ಹೂಡಿಕೆದಾರರ ಸಮಾವೇಶದ ಮಾಹಿತಿಯನ್ನ ಹಂಚಿಕೊಳ್ಳಲು ಶನಿವಾರ ನಗರದ ಖಾಸಗಿ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ. ಈ ಪೈಕಿ ಶೇ.90ಕ್ಕೂ ಹೆಚ್ಚು ಯೋಜನೆಗಳು ಬೆಂಗಳೂರಿನ ಆಚೆ ಅನುಷ್ಠಾನಗೊಳ್ಳುತ್ತಿದೆ, ಎಂದು ಅವರು ಹೇಳಿದರು.
ಮೂರು ದಿನಗಳ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದ್ದು, ಈ ಪೈಕಿ ಲಕ್ಷ ಕೋಟಿ ರೂ. ಮೊತ್ತದ 68 ಯೋಜನೆಗಳಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ. 5, 41,369 ಕೋಟಿ ರೂ. ಮೊತ್ತದ 57 ಯೋಜನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. 1,57,000 ಕೋಟಿ ರೂ. ಮೊತ್ತದ 2 ಯೋಜನೆಗಳನ್ನು ಸಮಾವೇಶದಲ್ಲಿ ಘೋಷಿಸಲಾಗಿದೆ ಎಂದು ಹೇಳಿದರು.

ವಿವಿಧ ಉದ್ಯಮಿಗಳು 2 ಲಕ್ಷ ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಪ್ರಸ್ತಾವನೆಗಳೊಂದಿಗೆ ಬಂದಿದ್ದರು. ಆದರೆ, ಈ ಯೋಜನೆಗಳಿಗೆ ಭೂಮಿ, ವಿದ್ಯುತ್, ಕಚ್ಚಾ ವಸ್ತುಗಳು, ಸಬ್ಸಿಡಿ ಸೇರಿದಂತೆ ವಿವಿಧ ವಿಷಯಗಳು ಇತ್ಯರ್ಥವಾಗಬೇಕಾಗಿರುವುದರಿಂದ ಒಪ್ಪಂದ ಮಾಡಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಉದ್ಯಮಿಗಳೊಂದಿಗೆ ನಮ್ಮ ಅಧಿಕಾರಿಗಳು ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ," ಎಂದು ತಿಳಿಸಿದರು.
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಡಂಬಡಿಕೆಗಳನ್ನು ಕಾಲ ಮಿತಿಯೊಳಗೆ ಅನುಷ್ಠಾನ ಮಾಡಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಹೂಡಿಕೆದಾರರ ಸಮಾವೇಶದಲ್ಲಿ ಆಗಿರುವ ಒಪ್ಪಂದಗಳನ್ನು ತೊಂಬತ್ತು ದಿನದೊಳಗೆ ಅನುಮೋದನೆ ನೀಡಲಾಗುವುದು. ಒಡಂಬಡಿಕೆಗಳ ಅನುಷ್ಠಾನಕ್ಕಾಗಿ ಜಿಲ್ಲಾವಾರು ಸಮನ್ವಯ ಸಮಿತಿ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ಮುಖ್ಯವಾಗಿ ಈ ಸಮಾವೇಶದಲ್ಲಿ ಆಗಿರುವ ಒಪ್ಪಂದಗಳ ಪೈಕಿ ಅಂದಾಜು ಶೇ.70ರಷ್ಟು ಯೋಜನೆಗಳು ಅನುಷ್ಠಾನಗೊಳ್ಳುವ ವಿಶ್ವಾಸ ಇದೆ ಎಂದರು.

ಬೆಂಗಳೂರಿನ ಆಚೆಗೆ ಕೈಗಾರಿಕೆಗಳನ್ನು ವಿಸ್ತರಿಸುವುದು ಈ ಜಾಗತಿಕ ಹೂಡಿಕೆದಾರರ ಸಮಾವೇಶದ ಪ್ರಮುಖ ಉದ್ದೇಶವಾಗಿತ್ತು. ಅದರಂತೆ ಸಮಾವೇಶದಲ್ಲಿ ಆಗಿರುವ ಒಟ್ಟು ಒಪ್ಪಂದಗಳ ಪೈಕಿ ಶೇ.90ರಷ್ಟು ಬೆಂಗಳೂರಿನ ಆಚೆ ಆಗುತ್ತಿದೆ. ಮೈಸೂರು, ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಸೇರಿದಂತೆ 2 ಮತ್ತು 3ನೇ ಹಂತದ ನಗರಗಳಲ್ಲೂ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ ಎಂದು ಸಚಿವರು ಪ್ರಶಂಸಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ವಾಣಿಜ್ಯ ಮತ್ತು ಕೈಗರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿನ ಡಾ. ಇ ವಿ ರಮಣ ರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications