ವ್ಯವಸಾಯ, ಕೈಗಾರಿಕೆ ದೇಶದ ಅಭಿವೃದ್ಧಿಯ ಕಣ್ಣುಗಳು: ವೆಂಕಯ್ಯ ನಾಯ್ಡು
ಬೆಂಗಳೂರು, ಸೆಪ್ಟೆಂಬರ್ 27: ದೇಶ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ವೈಜ್ಞಾನಿಕವಾದ ವ್ಯವಸಾಯ ಹಾಗೂ ವ್ಯವಸ್ಥಿತವಾದ ಕೈಗಾರಿಕರಣ ಆಗಬೇಕು. ಇವುಗಳು ಮನುಷ್ಯನಿಗೆ ಎರಡು ಕಣ್ಣುಗಳಿದ್ದಂತೆ. ದೇಶದ ಸರ್ವೋತ್ತಮ ಅಭಿವೃದ್ಧಿಗೆ ವ್ಯವಸಾಯ ಮತ್ತು ಕೈಗಾರಿಕೆಗಳು ಅತಿ ಮುಖ್ಯ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದರು.
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಇಂದು ವಿದ್ಯಾರ್ಥಿಗಳ ಜತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ನಮ್ಮ ನಾಗರಿಕತೆಗೆ ತುಂಬಾ ಇತಿಹಾಸವಿದೆ. ನೀವು ವಿದ್ಯಾರ್ಥಿಗಳು ವಿದೇಶಕ್ಕೆ ಹೋಗಬೇಡಿ ಎಂದು ಹೇಳುವುದಿಲ್ಲ. ವಿದೇಶದಿಂದ ಬಂದ ನಂತರ ನಮ್ಮ ನೆಲದಲ್ಲಿ ಉತ್ತಮವಾದ ಸಾಧನೆ ಮಾಡಿ ದೇಶದ ಅಭಿವೃದ್ಧಿಗೆ ಪಣ ತೊಡಬೇಕು," ಎಂದರು.

"ಯಾರು ದೇಶದ ಅಭಿವೃದ್ಧಿಗೆ ದುಡಿಯುತ್ತಾರೋ ಅವರು ದೊಡ್ಡ ವ್ಯಕ್ತಿ ಆಗುತ್ತಾರೆ. ಯಾವುದೇ ಒಂದು ಕೆಲಸ ಉತ್ತಮ ಫಲಿತಾಂಶ ನೀಡಬೇಕಾದರೆ ಮಾನವನ ಭಾಗವಹಿಸುವಿಕೆ ಬಹಳ ಮುಖ್ಯ. ನೀವು ಸದ್ಯ ವಿದ್ಯಾರ್ಥಿಗಳಾಗಿದ್ದೀರಾ ಮುಂದಿನ ದಿನಗಳಲ್ಲಿ ಯಾವುದೇ ಹುದ್ದೆಯನ್ನು ಅಲಂಕರಿಸಿದಾಗ ದೇಶದ ಬಗ್ಗೆ ಪ್ರೀತಿ ಇಟ್ಟುಕೊಂಡು ತಂಡ ತಂಡವಾಗಿ ಕೆಲಸ ನಿರ್ವಹಿಸಿದರೆ ಉತ್ತಮ ಫಲಿತಾಂಶ ಬರುತ್ತದೆ," ಎಂದು ಅಭಿಪ್ರಾಯಪಟ್ಟರು.

"ವಿದ್ಯಾರ್ಥಿಗಳು ಕನಸು ಕಾಣಬೇಕು. ಗುರಿ ಇರಬೇಕು. ಆದರೆ ಕನಸು ಗುರಿ ಮಾತ್ರ ಇದ್ದರೆ ಸಾಧ್ಯವಾಗುವುದಿಲ್ಲ. ಅದಕ್ಕೆ ಪೂರಕವಾದ ಶ್ರಮ ಮತ್ತು ಬುದ್ಧಿವಂತಿಕೆ ಮುಖ್ಯ," ಎಂದು ಉಪರಾಷ್ಟ್ರಪತಿ ಕಿವಿಮಾತು ಹೇಳಿದರು.
ನಾನು ಒಬ್ಬ ಸಾಮಾನ್ಯ ವರ್ಗದ ರೈತ ಕುಟುಂಬದಿಂದ ಬಂದಂತ ವ್ಯಕ್ತಿ. ನನ್ನ ಶ್ರಮದಿಂದ ಇಂದು ನಿಮ್ಮ ಮುಂದೆ ಭಾರತ ದೇಶದ ಉಪರಾಷ್ಟ್ರಪತಿಯಾಗಿದ್ದೇನೆ ಎಂದು ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬಿದರು.

-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications