ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದ್ರೋಹಿಗಳಿಗೆ ಗುಂಡು: ಮತ್ತೆ ಗುಡುಗಿದ ಸಚಿವ ಬಿ.ಸಿ ಪಾಟೀಲ್

|
Google Oneindia Kannada News

ಬೆಂಗಳೂರು, ಮಾರ್ಚ್ 2: ದೇಶ ವಿರೋಧಿ ಹೇಳಿಕೆ ನೀಡುವವರನ್ನು ಗುಂಡಕ್ಕಿ ಕೊಲ್ಲುವಂತ ಕಾನೂನು ಜಾರಿ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ.

Recommended Video

BC Patil asks the law to take action against Anti nationalists | Oneindia Kannada

ವಿಧಾನಸೌಧದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿಸಿ ಪಾಟೀಲ್ ''ದೇಶ ವಿರೋಧಿ ಹೇಳಿಕೆ ನೀಡುವವರನ್ನು ಗುಂಡಕ್ಕಿ ಕೊಲ್ಲುವಂತ ಕಾನೂನು ಜಾರಿ ಮಾಡುವಂತೆ ಕೇಂದ್ರ ಸರ್ಕಾಕ್ಕೆ ಮನವಿ ಮಾಡಿಕೊಳ್ಳಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕೆಲ ಯುವಕರು ಪ್ರಚಾರ ಪಡೆಯುವುದು ಒಂದು ರೀತಿಯ ಫ್ಯಾಷನ್ ಆಗಿದೆ. ಇಂತಹ ಬೆಳವಣಿಗೆಗಳು ದೇಶ ಮತ್ತು ದೇಶಭಕ್ತಿಯನ್ನು ನಾಶ ಮಾಡುತ್ತದೆ'' ಎಂದು ಹೇಳಿದ್ದಾರೆ.

ಕುಂದಾಪುರ, ಕಲಬುರಗಿಯಲ್ಲಿ ಮತ್ತೆ ಕುಂದಾಪುರ, ಕಲಬುರಗಿಯಲ್ಲಿ ಮತ್ತೆ "ಪಾಕಿಸ್ತಾನ್ ಜಿಂದಾಬಾದ್"

ಈ ಮುಂಚೆಯೂ 'ದೇಶ ವಿರೋಧಿಗಳನ್ನು ಗುಂಡಕ್ಕಿ ಕೊಲ್ಲಬೇಕು, ಅಂತವರಿ ಕಠಿಣ ಶಿಕ್ಷೆ ಜಾರಿಯಾಗುವಂತೆ ಕಾನೂನು ತರಬೇಕು' ಎಂದು ಬಿಸಿ ಪಾಟೀಲ್ ಗುಡುಗಿದ್ದರು.

Agriculture Minister BC Patil Reaction About Slogans against India

ಭಾರತದಲ್ಲಿ ದೇಶ ವಿರೋಧಿ ಹೇಳಿಕೆ ನೀಡುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಇತ್ತೀಚಿಗಷ್ಟೆ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನಾ 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ್ದರು. ಅಮೂಲ್ಯ ದೇಶ ವಿರೋಧಿ ಹೇಳಿಕೆಗೆ ಭಾರಿ ಖಂಡನೆ ವ್ಯಕ್ತವಾಗಿತ್ತು.

ಕುಂದಾಪುರದಲ್ಲಿ ತಹಶೀಲ್ದಾರ್ ಕಚೇರಿ ಬಳಿ ವ್ಯಕ್ತಿಯೊಬ್ಬ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರು. ಮೂಲತಃ ಕುಂದಾಪುರದ ವ್ಯಕ್ತಿಯಾದ ರಾಘವೇಂದ್ರ ಈ ಘೋಷಣೆ ಕೂಗಿದ್ದಾರೆ ಎಂದು ತಿಳಿದಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಕಲಬುರ್ಗಿಯಲ್ಲೂ ಪಾಕಿಸ್ತಾನ್ ಜಿಂದಾಬಾದ್ ಎಂಬ ಗೋಡೆ ಬರಹ ಕಂಡುಬಂದಿದ್ದು, ತನಿಖೆ ಮಾಡಲಾಗುತ್ತಿದೆ.

English summary
'I will ask central government to bring a law to shoot at sight those who shout slogans against India' - Karnataka Agriculture Minister BC Patil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X