ಮಿಡತೆ ದಾಳಿ ಆತಂಕ; ಸಭೆ ಕರೆದ ಕೃಷಿ ಸಚಿವ ಬಿ. ಸಿ. ಪಾಟೀಲ್
ಬೆಂಗಳೂರು, ಮೇ 27 : ವಲಸೆಗಾರ ಬೆಳೆನಾಶಕ ಮರುಭೂಮಿ ಮಿಡತೆ ಭಾರತದ ಹಲವು ರಾಜ್ಯಗಳಲ್ಲಿ ಆತಂಕ ಮೂಡಿಸಿದೆ. ಕರ್ನಾಟಕವೂ ಇದಕ್ಕೆ ಹೊರತಾಗಿಲ್ಲ. ಆದರೆ, ಕೃಷಿ ಸಚಿವ ಬಿ. ಸಿ. ಪಾಟೀಲ್ ರೈತರಿಗೆ ಅಭಯ ನೀಡಿದ್ದಾರೆ.
ಉತ್ತರ ಭಾರತದ ಕೆಲವು ರಾಜ್ಯಗಳನ್ನು ರಕ್ಕಸ ಮಿಡತೆಗಳು ಬಾಧಿಸುತ್ತಿವೆ. ಕರ್ನಾಟಕಕ್ಕೂ ಮಿಡತೆಗಳು ಆಗಮಿಸುವ ಆತಂಕ ರೈತರನ್ನು ಕಾಡುತ್ತಿದೆ. ಮಿಡತೆಗಳನ್ನು ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ? ಎಂದು ರೈತರು ಚಿಂತಿಸುತ್ತಿದ್ದಾರೆ.
ಕೃಷಿ ಸಚಿವ ಬಿ. ಸಿ. ಪಾಟೀಲ್ ಗುರುವಾರ ಇಲಾಖೆಯ ಅಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಮಿಡತೆಗಳ ಹಾವಳಿಯಿಂದ ಕೃಷಿ ಸಮುದಾಯವನ್ನು ರಕ್ಷಿಸುವ ಕುರಿತು ಸಭೆಯಲ್ಲಿ ಅಧಿಕಾರಿಗ ಜೊತೆ ಚರ್ಚೆ ನಡೆಸಲಿದ್ದಾರೆ.

"ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು. ಮಿಡತೆ ದಾಳಿಯನ್ನು ತಡೆಗಟ್ಟಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು" ಎಂದು ಬಿ. ಸಿ. ಪಾಟೀಲ್ ಫೇಸ್ಬುಕ್ ಪೋಸ್ಟ್ ಮೂಲಕ ರೈತರಿಗೆ ಅಭಯ ನೀಡಿದ್ದಾರೆ.
ಎಲ್ಲಾ ಬೆಳೆ ತಿನ್ನಲಿವೆ: ಮರುಭೂಮಿ ಮಿಡತೆಗಳು ಬಹುಭಕ್ಷಕ ಕೀಟಗಳು. ಯಾವುದೇ ಗಿಡ ಅಥವಾ ಬೆಳೆಯ ಎಲೆ, ಹೂ, ಹಣ್ಣು, ಬೀಜ, ಮರದ ತೊಗಟೆ ಹಾಗೂ ಬೆಳೆಯ ಕುಡಿಗಳನ್ನು ಭಕ್ಷಿಸುತ್ತವೆ.
ಪ್ರಪಂಚದಲ್ಲಿ ಮಿಡತೆಗಳಲ್ಲಿ 10 ಪ್ರಭೇಧಗಳಿವೆ. ಭಾರತದಲ್ಲಿ ನಾಲ್ಕು ಪ್ರಭೇದಗಳನ್ನು ಕಾಣಬಹುದಾಗಿದೆ. ಈ ಮಿಡತೆಗಳ ಪೈಕಿ ಹೆಣ್ಣು ಮಿಡತೆಯು ತೇವಾಂಶ ಹೊಂದಿರುವ ಮರಳು ಮಿಶ್ರಿತ ಮಣ್ಣಿನಲ್ಲಿ ಮೊಟ್ಟೆ ಇಡುತ್ತದೆ.
ತನ್ನ ಜೀವಾವಧಿಯಲ್ಲಿ ವಾರಕ್ಕೊಮ್ಮೆ 1000 ಮೊಟ್ಟೆಗಳನ್ನು ಪ್ರತಿ ಚದುರ ಅಡಿಗೆ ಇಡುತ್ತಿದ್ದು, 3 ಸಲ ಈ ಆವೃತ್ತಿ ಇರುತ್ತದೆ. ಪ್ರಭುದ್ಧ ಹೊಂದಿದ ಮಿಡತೆಗಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ 12 ರಿಂದ 16 ಕಿ. ಮೀ. ವೇಗದಲ್ಲಿ ಹಾರಾಟ ನಡೆಸುತ್ತವೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications