ಡಿಸೆಂಬರ್ 1ರಿಂದ 31ರವರೆಗೆ ಆಗುಂಬೆ ಘಾಟಿ ರಸ್ತೆ ಸಂಚಾರ ಬಂದ್
ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳುವುದರಿಂದ ಅಗುಂಬೆ ಘಾಟಿ ರಸ್ತೆಯನ್ನು ಬಂದ್ ಮಾಡಲಾಗುತ್ತದೆ. ಸಂಚಾರಕ್ಕೆ ತೊಂದರೆ ಅಗಬಾರದು ಎಂಬ ಕಾರಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ
ಬೆಂಗಳೂರು, ನವೆಂಬರ್ 30: ಮಲೆನಾಡು ಹಾಗೂ ಕರಾವಳಿ ಕರ್ನಾಟಕದ ಮಧ್ಯೆ ಸಂಪರ್ಕಕ್ಕೆ ಕೊಂಡಿಯಾಗಿರುವ ಆಗುಂಬೆ ಘಾಟಿ ರಸ್ತೆಯ ಅಭಿವೃದ್ಧಿ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಳ್ಳಲಿದ್ದು, ಡಿಸೆಂಬರ್ 1ರಿಂದ 31ರವರೆಗೆ ಮುಚ್ಚಲಾಗುವುದು. ಆದ್ದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರ ಸಾಧ್ಯವಿರುವುದಿಲ್ಲ.
2.40 ಕಿ.ಮೀ ಉದ್ದದ ಈ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಹದಿನಾಲ್ಕು ಕಡಿದಾದ ತಿರುವುಗಳಿರುವ ಈ ರಸ್ತೆಯ ಏಳು ತಿರುವುಗಳಲ್ಲಿ ತಡೆಗೋಡೆಗಳು ಹಾಳಾಗಿವೆ. ಆದ್ದರಿಂದ ಗುಂಡಿಗಳನ್ನು ತುಂಬುವುದು, ಕಾಂಕ್ರೀಟ್ ಹಾಕುವ ಆಲೋಚನೆಯಿದ್ದು, ಇದಕ್ಕಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು.[ಮಲೆನಾಡಿನ ಆತಿಥ್ಯ, ಮನ ಮೆಚ್ಚುವ ಪರಿಸರಕ್ಕೆ 'ಅಮ್ತಿ ಹೋಂ ಸ್ಟೇ']

ಈ ಯೋಜನೆಗೆ 3.50 ಕೋಟಿ ರುಪಾಯಿ ವೆಚ್ಚವಾಗುವ ಅಂದಾಜಿದೆ. ದುರಸ್ತಿ ಕಾರ್ಯದ ನಿಮಿತ್ತ ರಸ್ತೆ ಬಂದ್ ಅಗುವುದರಿಂದ ಮಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಮೂಡಬಿದಿರೆ, ಕಾರ್ಕಳ, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ; ಕುಂದಾಪುರ-ಮಾಸ್ತಿಕಟ್ಟೆ-ಶಿವಮೊಗ್ಗ ಸಿದ್ದಾಪುರ, ಎಡೂರು ಮತ್ತು ತೀರ್ಥಹಳ್ಳಿ;
ಮತ್ತು ಕುಂದಾಪುರ-ಸಿದ್ದಾಪುರ-ಶಿವಮೊಗ್ಗ ರಸ್ತೆಯಲ್ಲಿ ಮಾಸ್ತಿಕಟ್ಟೆ, ರೇವ್ ಕ್ರಾಸ್, ಕೊಂಡ್ಲೂರು ಮತ್ತು ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸಬಹುದಾಗಿದೆ. ಈ ಮಧ್ಯೆ ಆಗುಂಬೆ, ಗುಡ್ಡೇಕೇರಿ, ಹೊಸೂರು, ಕವರಿಹಕ್ಳು, ಮೇಗರವಳ್ಳಿ ಮತ್ತು ನಾಲೂರು ನಿವಾಸಿಗಳು ಪರ್ಯಾಯ ಸಾರಿಗೆ ವ್ಯವಸ್ಥೆಗಾಗಿ ಆಗ್ರಹಿಸಿದ್ದಾರೆ.[ಉಡುಪಿ: ಸೋಮೇಶ್ವರ ಹೋಟೆಲಿನ 'ಭಕ್ತ' ಇನ್ನಿಲ್ಲ]
ತೀರ್ಥಹಳ್ಳಿಯಿಂದ ಉಡುಪಿ, ಮಂಗಳೂರಿಗೆ ಅಗುಂಬೆ ಮಾರ್ಗವಾಗಿ ಬಸ್ ಗಳು ಸಂಚರಿಸುತ್ತಿದ್ದವು. ಇದೀಗ ಆ ಬಸ್ ಗಳ ಸಂಚಾರ ನಿಲ್ಲುವುದರಿಂದ ಆ ಮಾರ್ಗದ ಹಳ್ಳಿಗಳಲ್ಲಿ ವಾಸಿಸುವರಿಗೆ ಸಂಚಾರಕ್ಕೆ ಸಮಸ್ಯೆಯಾಗುತ್ತದೆ. ಈ ಮಾರ್ಗದಲ್ಲಿರುವ ನೂರಾರು ವಿದ್ಯಾರ್ಥಿಗಳು ತೀರ್ಥಹಳ್ಳಿಗೆ ಬರುತ್ತಾರೆ. ಈಗ ಆಗುಂಬೆ ಘಾಟಿ ರಸ್ತೆ ಸಂಚಾರಕ್ಕೆ ಬಂದ್ ಆಗುವುದರಿಂದ ಅವರಿಗೆಲ್ಲ ತೊಂದರೆಯಾಗುತ್ತದೆ.
ಆಗುಂಬೆ ಘಾಟಿ ಕೆಲಸ ಪೂರ್ತಿ ಆಗುವವರೆಗೆ ತೀರ್ಥಹಳ್ಳಿಯಿಂದ ಆಗುಂಬೆವರೆಗೆ ಮೇಗರವಳ್ಳಿ ಮೂಲಕ ಕರ್ನಾಟಕ ರಾಜ್ಯ ರಸ್ತೆ ನಿಗಮದ ಬಸ್ ಗಳು ಸಂಚರಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸ್ಥಳೀಯರು ಅಗ್ರಹಿಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications