ಡಿಸೆಂಬರ್ 1ರಿಂದ 31ರವರೆಗೆ ಆಗುಂಬೆ ಘಾಟಿ ರಸ್ತೆ ಸಂಚಾರ ಬಂದ್
ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳುವುದರಿಂದ ಅಗುಂಬೆ ಘಾಟಿ ರಸ್ತೆಯನ್ನು ಬಂದ್ ಮಾಡಲಾಗುತ್ತದೆ. ಸಂಚಾರಕ್ಕೆ ತೊಂದರೆ ಅಗಬಾರದು ಎಂಬ ಕಾರಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ
ಬೆಂಗಳೂರು, ನವೆಂಬರ್ 30: ಮಲೆನಾಡು ಹಾಗೂ ಕರಾವಳಿ ಕರ್ನಾಟಕದ ಮಧ್ಯೆ ಸಂಪರ್ಕಕ್ಕೆ ಕೊಂಡಿಯಾಗಿರುವ ಆಗುಂಬೆ ಘಾಟಿ ರಸ್ತೆಯ ಅಭಿವೃದ್ಧಿ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಳ್ಳಲಿದ್ದು, ಡಿಸೆಂಬರ್ 1ರಿಂದ 31ರವರೆಗೆ ಮುಚ್ಚಲಾಗುವುದು. ಆದ್ದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರ ಸಾಧ್ಯವಿರುವುದಿಲ್ಲ.
2.40 ಕಿ.ಮೀ ಉದ್ದದ ಈ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಹದಿನಾಲ್ಕು ಕಡಿದಾದ ತಿರುವುಗಳಿರುವ ಈ ರಸ್ತೆಯ ಏಳು ತಿರುವುಗಳಲ್ಲಿ ತಡೆಗೋಡೆಗಳು ಹಾಳಾಗಿವೆ. ಆದ್ದರಿಂದ ಗುಂಡಿಗಳನ್ನು ತುಂಬುವುದು, ಕಾಂಕ್ರೀಟ್ ಹಾಕುವ ಆಲೋಚನೆಯಿದ್ದು, ಇದಕ್ಕಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು.[ಮಲೆನಾಡಿನ ಆತಿಥ್ಯ, ಮನ ಮೆಚ್ಚುವ ಪರಿಸರಕ್ಕೆ 'ಅಮ್ತಿ ಹೋಂ ಸ್ಟೇ']

ಈ ಯೋಜನೆಗೆ 3.50 ಕೋಟಿ ರುಪಾಯಿ ವೆಚ್ಚವಾಗುವ ಅಂದಾಜಿದೆ. ದುರಸ್ತಿ ಕಾರ್ಯದ ನಿಮಿತ್ತ ರಸ್ತೆ ಬಂದ್ ಅಗುವುದರಿಂದ ಮಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಮೂಡಬಿದಿರೆ, ಕಾರ್ಕಳ, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ; ಕುಂದಾಪುರ-ಮಾಸ್ತಿಕಟ್ಟೆ-ಶಿವಮೊಗ್ಗ ಸಿದ್ದಾಪುರ, ಎಡೂರು ಮತ್ತು ತೀರ್ಥಹಳ್ಳಿ;
ಮತ್ತು ಕುಂದಾಪುರ-ಸಿದ್ದಾಪುರ-ಶಿವಮೊಗ್ಗ ರಸ್ತೆಯಲ್ಲಿ ಮಾಸ್ತಿಕಟ್ಟೆ, ರೇವ್ ಕ್ರಾಸ್, ಕೊಂಡ್ಲೂರು ಮತ್ತು ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸಬಹುದಾಗಿದೆ. ಈ ಮಧ್ಯೆ ಆಗುಂಬೆ, ಗುಡ್ಡೇಕೇರಿ, ಹೊಸೂರು, ಕವರಿಹಕ್ಳು, ಮೇಗರವಳ್ಳಿ ಮತ್ತು ನಾಲೂರು ನಿವಾಸಿಗಳು ಪರ್ಯಾಯ ಸಾರಿಗೆ ವ್ಯವಸ್ಥೆಗಾಗಿ ಆಗ್ರಹಿಸಿದ್ದಾರೆ.[ಉಡುಪಿ: ಸೋಮೇಶ್ವರ ಹೋಟೆಲಿನ 'ಭಕ್ತ' ಇನ್ನಿಲ್ಲ]
ತೀರ್ಥಹಳ್ಳಿಯಿಂದ ಉಡುಪಿ, ಮಂಗಳೂರಿಗೆ ಅಗುಂಬೆ ಮಾರ್ಗವಾಗಿ ಬಸ್ ಗಳು ಸಂಚರಿಸುತ್ತಿದ್ದವು. ಇದೀಗ ಆ ಬಸ್ ಗಳ ಸಂಚಾರ ನಿಲ್ಲುವುದರಿಂದ ಆ ಮಾರ್ಗದ ಹಳ್ಳಿಗಳಲ್ಲಿ ವಾಸಿಸುವರಿಗೆ ಸಂಚಾರಕ್ಕೆ ಸಮಸ್ಯೆಯಾಗುತ್ತದೆ. ಈ ಮಾರ್ಗದಲ್ಲಿರುವ ನೂರಾರು ವಿದ್ಯಾರ್ಥಿಗಳು ತೀರ್ಥಹಳ್ಳಿಗೆ ಬರುತ್ತಾರೆ. ಈಗ ಆಗುಂಬೆ ಘಾಟಿ ರಸ್ತೆ ಸಂಚಾರಕ್ಕೆ ಬಂದ್ ಆಗುವುದರಿಂದ ಅವರಿಗೆಲ್ಲ ತೊಂದರೆಯಾಗುತ್ತದೆ.
ಆಗುಂಬೆ ಘಾಟಿ ಕೆಲಸ ಪೂರ್ತಿ ಆಗುವವರೆಗೆ ತೀರ್ಥಹಳ್ಳಿಯಿಂದ ಆಗುಂಬೆವರೆಗೆ ಮೇಗರವಳ್ಳಿ ಮೂಲಕ ಕರ್ನಾಟಕ ರಾಜ್ಯ ರಸ್ತೆ ನಿಗಮದ ಬಸ್ ಗಳು ಸಂಚರಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸ್ಥಳೀಯರು ಅಗ್ರಹಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications