ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್ 1ರಿಂದ 31ರವರೆಗೆ ಆಗುಂಬೆ ಘಾಟಿ ರಸ್ತೆ ಸಂಚಾರ ಬಂದ್

ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳುವುದರಿಂದ ಅಗುಂಬೆ ಘಾಟಿ ರಸ್ತೆಯನ್ನು ಬಂದ್ ಮಾಡಲಾಗುತ್ತದೆ. ಸಂಚಾರಕ್ಕೆ ತೊಂದರೆ ಅಗಬಾರದು ಎಂಬ ಕಾರಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ

|
Google Oneindia Kannada News

ಬೆಂಗಳೂರು, ನವೆಂಬರ್ 30: ಮಲೆನಾಡು ಹಾಗೂ ಕರಾವಳಿ ಕರ್ನಾಟಕದ ಮಧ್ಯೆ ಸಂಪರ್ಕಕ್ಕೆ ಕೊಂಡಿಯಾಗಿರುವ ಆಗುಂಬೆ ಘಾಟಿ ರಸ್ತೆಯ ಅಭಿವೃದ್ಧಿ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಳ್ಳಲಿದ್ದು, ಡಿಸೆಂಬರ್ 1ರಿಂದ 31ರವರೆಗೆ ಮುಚ್ಚಲಾಗುವುದು. ಆದ್ದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರ ಸಾಧ್ಯವಿರುವುದಿಲ್ಲ.

2.40 ಕಿ.ಮೀ ಉದ್ದದ ಈ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಹದಿನಾಲ್ಕು ಕಡಿದಾದ ತಿರುವುಗಳಿರುವ ಈ ರಸ್ತೆಯ ಏಳು ತಿರುವುಗಳಲ್ಲಿ ತಡೆಗೋಡೆಗಳು ಹಾಳಾಗಿವೆ. ಆದ್ದರಿಂದ ಗುಂಡಿಗಳನ್ನು ತುಂಬುವುದು, ಕಾಂಕ್ರೀಟ್ ಹಾಕುವ ಆಲೋಚನೆಯಿದ್ದು, ಇದಕ್ಕಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು.[ಮಲೆನಾಡಿನ ಆತಿಥ್ಯ, ಮನ ಮೆಚ್ಚುವ ಪರಿಸರಕ್ಕೆ 'ಅಮ್ತಿ ಹೋಂ ಸ್ಟೇ']

Agumbe Ghat section closed from 1st December

ಈ ಯೋಜನೆಗೆ 3.50 ಕೋಟಿ ರುಪಾಯಿ ವೆಚ್ಚವಾಗುವ ಅಂದಾಜಿದೆ. ದುರಸ್ತಿ ಕಾರ್ಯದ ನಿಮಿತ್ತ ರಸ್ತೆ ಬಂದ್ ಅಗುವುದರಿಂದ ಮಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಮೂಡಬಿದಿರೆ, ಕಾರ್ಕಳ, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ; ಕುಂದಾಪುರ-ಮಾಸ್ತಿಕಟ್ಟೆ-ಶಿವಮೊಗ್ಗ ಸಿದ್ದಾಪುರ, ಎಡೂರು ಮತ್ತು ತೀರ್ಥಹಳ್ಳಿ;

ಮತ್ತು ಕುಂದಾಪುರ-ಸಿದ್ದಾಪುರ-ಶಿವಮೊಗ್ಗ ರಸ್ತೆಯಲ್ಲಿ ಮಾಸ್ತಿಕಟ್ಟೆ, ರೇವ್ ಕ್ರಾಸ್, ಕೊಂಡ್ಲೂರು ಮತ್ತು ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸಬಹುದಾಗಿದೆ. ಈ ಮಧ್ಯೆ ಆಗುಂಬೆ, ಗುಡ್ಡೇಕೇರಿ, ಹೊಸೂರು, ಕವರಿಹಕ್ಳು, ಮೇಗರವಳ್ಳಿ ಮತ್ತು ನಾಲೂರು ನಿವಾಸಿಗಳು ಪರ್ಯಾಯ ಸಾರಿಗೆ ವ್ಯವಸ್ಥೆಗಾಗಿ ಆಗ್ರಹಿಸಿದ್ದಾರೆ.[ಉಡುಪಿ: ಸೋಮೇಶ್ವರ ಹೋಟೆಲಿನ 'ಭಕ್ತ' ಇನ್ನಿಲ್ಲ]

ತೀರ್ಥಹಳ್ಳಿಯಿಂದ ಉಡುಪಿ, ಮಂಗಳೂರಿಗೆ ಅಗುಂಬೆ ಮಾರ್ಗವಾಗಿ ಬಸ್ ಗಳು ಸಂಚರಿಸುತ್ತಿದ್ದವು. ಇದೀಗ ಆ ಬಸ್ ಗಳ ಸಂಚಾರ ನಿಲ್ಲುವುದರಿಂದ ಆ ಮಾರ್ಗದ ಹಳ್ಳಿಗಳಲ್ಲಿ ವಾಸಿಸುವರಿಗೆ ಸಂಚಾರಕ್ಕೆ ಸಮಸ್ಯೆಯಾಗುತ್ತದೆ. ಈ ಮಾರ್ಗದಲ್ಲಿರುವ ನೂರಾರು ವಿದ್ಯಾರ್ಥಿಗಳು ತೀರ್ಥಹಳ್ಳಿಗೆ ಬರುತ್ತಾರೆ. ಈಗ ಆಗುಂಬೆ ಘಾಟಿ ರಸ್ತೆ ಸಂಚಾರಕ್ಕೆ ಬಂದ್ ಆಗುವುದರಿಂದ ಅವರಿಗೆಲ್ಲ ತೊಂದರೆಯಾಗುತ್ತದೆ.

ಆಗುಂಬೆ ಘಾಟಿ ಕೆಲಸ ಪೂರ್ತಿ ಆಗುವವರೆಗೆ ತೀರ್ಥಹಳ್ಳಿಯಿಂದ ಆಗುಂಬೆವರೆಗೆ ಮೇಗರವಳ್ಳಿ ಮೂಲಕ ಕರ್ನಾಟಕ ರಾಜ್ಯ ರಸ್ತೆ ನಿಗಮದ ಬಸ್ ಗಳು ಸಂಚರಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸ್ಥಳೀಯರು ಅಗ್ರಹಿಸಿದ್ದಾರೆ.

English summary
Agumbe Ghat section closed for vehicular movement from 1st December due to road repair works on hair pin curves. Take a detour. The road maintenance work may take 4 weeks says Karnataka Public Works Department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X