ಅಪರಾಧಿಗಳನ್ನು ರೆಡ್ಹ್ಯಾಂಡಾಗಿ ಹಿಡಿಯಲು ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ AI ಆಧಾರಿತ ಕ್ಯಾಮೆರಾ
ಬೆಂಗಳೂರು, ಜುಲೈ 26: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಅಪಘಾತಗಳು ದಿನೇದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ನಿಯಮ ಉಲ್ಲಂಘಿಸಿ ವೇಗವಾಗಿ ವಾಹನ ಚಲಾಯಿಸುವ ಚಾಲಕರನ್ನು ಸೆರೆಹಿಡಿಯಲು ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾತನಾಡಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್, ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ವಾಹನಗಳ ಅತಿ ವೇಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಿದೆ ಎಂದು ತಿಳಿಸಿದ್ದಾರೆ.

ಶೀಘ್ರದಲ್ಲೇ ಮೈಸೂರಿನಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಅನ್ನು ಪರಿಚಯಿಸಲಾಗುವುದು. ಆಗಸ್ಟ್ 1 ರಿಂದ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್ಗಳು ಮತ್ತು ಎತ್ತಿನ ಗಾಡಿಗಳ ಮೇಲಿನ ನಿಷೇಧದ ಅನುಷ್ಠಾನಕ್ಕೆ ಮುಂಚಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ಮೋಟಾರು ವಾಹನ ಕಾಯ್ದೆ, 1988 ರ ಸೆಕ್ಷನ್ 186 ಮತ್ತು 187 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದರು.
Inspected the progress of road safety related work on Bengaluru- Mysore Expressway
— alok kumar (@alokkumar6994) July 25, 2023
AI based cameras deployed on trial basis to capture over speeding
Introducing Intelligent Traffic Management System in Mysore City soon,any suggestion from citizens is welcome in this regard
ಇತ್ತೀಚೆಗಿನ ಚೆನ್ನೈ ಹೈಕೋರ್ಟ್ ಆದೇಶದಂತೆ ಎಕ್ಸ್ಪ್ರೆಸ್ವೇಯಲ್ಲಿ ವೇಗದ ಮಿತಿಯನ್ನು 100 ಕಿ.ಮೀ.ಗೆ ನಿಗದಿಪಡಿಸಲಾಗಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಎರಡು ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಿದೆ. ಹೆಚ್ಚಿನ ಕ್ಯಾಮೆರಾಗಳನ್ನು ಅಳವಡಿಸಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ರಾತ್ರಿ ಸಮಯದಲ್ಲಿ ಎಕ್ಸ್ಪ್ರೆಸ್ವೇಯಲ್ಲಿ ಟ್ರಾಫಿಕ್ ಉಲ್ಲಂಘನೆಗಳ ಮೇಲೆ ನಿಗಾ ವಹಿಸುವುದು ಪೊಲೀಸರ ಜೀವಕ್ಕೆ ಅಪಾಯವಾಗಿದೆ.
ಆದ್ದರಿಂದ, ತಂತ್ರಜ್ಞಾನದ ಬಳಕೆ ಉತ್ತಮ ಮಾರ್ಗವಾಗಿದೆ. ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಹಿಡಿಯಲಾದ ವಾಹನಗಳ ಸಂಚಾರ ಉಲ್ಲಂಘನೆಯ ದೃಶ್ಯಾವಳಿಗಳ ಆಧಾರದ ಮೇಲೆ ಮೋಟಾರು ವಾಹನ ಕಾಯ್ದೆ 1988 ರ ಅಡಿಯಲ್ಲಿ ಸಂಚಾರ ನಿರ್ವಹಣಾ ಕೇಂದ್ರಗಳಲ್ಲಿ (ಟಿಎಂಸಿ) ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ನಿಯಮ ಉಲ್ಲಂಘಿಸುವವರ ಮೇಲೆ ಇ-ಚಲನ್ಗಳನ್ನು ರಚಿಸಲಾಗುತ್ತದೆ. ನಿಯಮ ಉಲ್ಲಂಘಿಸುವವರಿಗೆ ಅವರ ವಾಹನ ಸಂಖ್ಯೆಗಳಿಗೆ ಲಗತ್ತಿಸಲಾದ ವಿಳಾಸಗಳ ಆಧಾರದ ಮೇಲೆ ನೋಟಿಸ್ಗಳನ್ನು ಕಳುಹಿಸಲಾಗುತ್ತದೆ ಎಂದು ಅಲೋಕ್ ಕುಮಾರ್ ಹೇಳಿದರು.
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಹೆದ್ದಾರಿಯನ್ನು ಪರಿಶೀಲಿಸಿದ 25 ದಿನಗಳ ನಂತರ, ಅಲೋಕ್ ಕುಮಾರ್ ಮಂಗಳವಾರ ಮಂಡ್ಯ ಮತ್ತು ಗಂಗಾಂಗೂರು ಚೆಕ್ಪೋಸ್ಟ್ಗಳಿಗೆ ಭೇಟಿ ನೀಡಿ ವಾಹನ ಸಂಚಾರವನ್ನು ಪರಿಶೀಲನೆ ನಡೆಸಿದರು. ಬಳಿಕ ಮಂಡ್ಯ ಜಿಲ್ಲಾ ಪೊಲೀಸರು ಅತಿ ವೇಗದ ಚಾಲನೆ, ಲೇನ್ ಶಿಸ್ತು ಉಲ್ಲಂಘಿಸುವ ಮತ್ತು ತಪ್ಪು ದಿಕ್ಕಿನಲ್ಲಿ ಪ್ರಯಾಣಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿದ್ದಾರೆ. ಹಾಗಾಗಿ ಈ ತಿಂಗಳು ಸಾವಿನ ಸಂಖ್ಯೆ ಕಡಿಮೆಯಾಗಿದೆ ಎಂದರು.
ಒಂದು ವಾರದಲ್ಲಿ ಗಣಂಗೂರು ಮತ್ತು ಕಣಿಮಿಣಿಕೆ ಟೋಲ್ ಪ್ಲಾಜಾಗಳ ಬಳಿ ಎನ್ಎಚ್ಎಐ ಎಚ್ಚರಿಕೆಯ ಫಲಕಗಳನ್ನು ಹಾಕುತ್ತಿದೆ. ಅಡ್ಡ ತಡೆಗೋಡೆ ನಿರ್ಮಿಸಲು ಮಂಡ್ಯ ಜಿಲ್ಲೆ ಬಳಿ ಎರಡು ಹಾಗೂ ರಾಮನಗರ ಬಳಿ ನಾಲ್ಕು ಫುಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಟೆಂಡರ್ ಕರೆದಿದ್ದಾರೆ. ಅವರು 97 ಬಸ್ ಶೆಲ್ಟರ್ಗಳು ಮತ್ತು ಶೌಚಾಲಯಗಳನ್ನು ನಿರ್ಮಿಸುತ್ತಾರೆ. ಸರಿಯಾದ ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟ್ಗಳನ್ನು ಸೂಚಿಸುತ್ತಾರೆ ಎಂದು ತಿಳಿಸಿದರು.
"ಎನ್ಎಚ್ಎಐ ತಂಡವು ಜುಲೈ 17, 18 ಮತ್ತು 19 ರಂದು ಎಕ್ಸ್ಪ್ರೆಸ್ವೇಯನ್ನು ಪರಿಶೀಲಿಸಿದೆ. ನಾವು ಎನ್ಎಚ್ಎಐ ವರದಿಗಾಗಿ ಕಾಯುತ್ತಿದ್ದೇವೆ. ಸಲಹೆಗಳ ಅನುಷ್ಠಾನಕ್ಕೆ ಸಮಯ ನೀಡುತ್ತೇವೆ. ಇಲ್ಲದಿದ್ದರೆ ಯಾವುದೇ ದೊಡ್ಡ ಅಪಘಾತ ಸಂಭವಿಸಿದಲ್ಲಿ ಎನ್ಎಚ್ಎಐ ಅಧಿಕಾರಿಗಳನ್ನು ಕಾಳಜಿ ನಿರ್ಲಕ್ಷ್ಯದ ಪ್ರಕರಣದ ಭಾಗವಾಗಿಸಲಾಗುತ್ತದೆ. ನಾವು ಇದನ್ನು ಮಾದರಿ ಎಕ್ಸ್ಪ್ರೆಸ್ವೇ ಮಾಡಲು ಯೋಜಿಸುತ್ತಿದ್ದೇವೆ ಎಂದರು.












Click it and Unblock the Notifications