School: ಕರ್ನಾಟಕದ ಶಾಲೆಗಳಲ್ಲಿ ಹಾಜರಾತಿ ವಿಚಾರದಲ್ಲಿ ಮಹತ್ವದ ಬದಲಾವಣೆ!
ಕನ್ನಡ ನಾಡು ತನ್ನ ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಜಗತ್ತಿನಾದ್ಯಂತ ಹೆಸರು ಪಡೆದು ಕೀರ್ತಿ ಗಳಿಸಿದೆ. ಇದೇ ಕಾರಣಕ್ಕೆ ಭಾರತದ ಮೂಲೆ ಮೂಲೆಯಿಂದ ಬಂದು ಕರ್ನಾಟಕದಲ್ಲಿ ಶಿಕ್ಷಣ ಪಡೆಯುತ್ತಾರೆ ಲಕ್ಷಾಂತರ ವಿದ್ಯಾರ್ಥಿಗಳು. ಕಾಲೇಜುಗಳು ಮಾತ್ರವಲ್ಲ, ಶಾಲೆಗಳಲ್ಲಿ ಕೂಡ ಭಾರಿ ದೊಡ್ಡ ಪ್ರಮಾಣದಲ್ಲಿ ಹೊರ ರಾಜ್ಯಗಳ ವಿದ್ಯಾರ್ಥಿಗಳು ಓದುತ್ತಾ ಇದ್ದಾರೆ. ಹೀಗೆ ಎಲ್ಲಾ ವಿದ್ಯಾರ್ಥಿಗಳಿಗೂ ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸುತ್ತಾ ಬಂದಿದೆ. ಹೀಗಿದ್ದಾಗ ಕರ್ನಾಟಕದ ಶಾಲೆಗಳಲ್ಲಿ ಹಾಜರಾತಿ ವಿಚಾರದಲ್ಲಿ ಮಹತ್ವದ ಬದಲಾವಣೆ ಆಗಲಿದೆ...
ಕರ್ನಾಟಕ ಸರ್ಕಾರ ಶೈಕ್ಷಣಿಕ ಗುಣಮಟ್ಟ ಅಭಿವೃದ್ಧಿಗೆ ಹಲವು ಯೋಜನೆ ಕೈಗೊಳ್ಳುತ್ತಿದ್ದು, ಶೈಕ್ಷಣಿಕ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗುತ್ತಿದೆ. ಈಗಾಗಲೇ ಕರ್ನಾಟಕದ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಲಭ್ಯ ಒದಗಿಸಲಾಗಿದ್ದು, ಶಾಲೆಗಳ ಅಭಿವೃದ್ಧಿಗೆ ಕ್ರಮವನ್ನೂ ಕೈಗೊಳ್ಳಲಾಗುತ್ತಿದೆ. ಹಾಗೇ ಕರ್ನಾಟಕದ ಶಾಲೆಗಳಲ್ಲಿ ಹಾಜರಾತಿ ವಿಚಾರದಲ್ಲಿ ಮಹತ್ವದ ಬದಲಾವಣೆಗೆ ಇದೀಗ ಕ್ರಮ ಕೈಗೊಳ್ಳಲಾಗಿದೆ. ಹಾಗಾದ್ರೆ ಏನೆಲ್ಲಾ ಬದಲಾವಣೆ ಆಗಲಿದೆ? ಇದರಿಂದ ವಿದ್ಯಾರ್ಥಿಗಳಿಗೆ ಏನು ಉಪಯೋಗ? ಬನ್ನಿ ತಿಳಿಯೋಣ.

ವಿದ್ಯಾರ್ಥಿಗಳ ಹಾಜರಾತಿ ಬದಲಾವಣೆ
ಹೌದು ಇನ್ನುಮುಂದೆ ಕರ್ನಾಟಕದ ಪ್ರತಿ ಜಾಗದಲ್ಲಿ ಇರುವ ಸಣ್ಣ ಸರ್ಕಾರಿ ಶಾಲೆಯಲ್ಲಿಯೂ ಬೆಳಗಿನ ದಿನಚರಿ ಬದಲಾಗಲಿದೆ. ಇನ್ನು ಮುಂದೆ ರಿಜಿಸ್ಟರ್ಗೆ ಸಹಿ ಹಾಕಲು ಆತುರಪಡುವಂಥ ಅಗತ್ಯತೆ ಇಲ್ಲ. ಬಯೋಮೆಟ್ರಿಕ್ ಸ್ಕ್ಯಾನರ್ನಲ್ಲಿ ಮಸುಕಾದ ಬೆರಳಚ್ಚು ಕೊಟ್ಟು ಹಾಜರಾತಿ ಕನ್ಫರ್ಮ್ ಮಾಡಿಕೊಳ್ಳಬೇಕಿಲ್ಲ. ಇನ್ನಮುಂದೆ ಶಿಕ್ಷಕರು & ವಿದ್ಯಾರ್ಥಿಗಳು ಶಾಲೆಯ ಒಳಗೆ ಬರುತ್ತಿದ್ದಂತೆ ಫೋನ್ ಕ್ಯಾಮೆರಾ ಅವರ ಮುಖಗಳನ್ನು ಸದ್ದಿಲ್ಲದೆ ಸ್ಕ್ಯಾನ್ ಮಾಡುತ್ತದೆ, ಮತ್ತು ಸೆಕೆಂಡುಗಳಲ್ಲಿ ಅವರ ಹಾಜರಾತಿ ದಾಖಲಿಸುತ್ತದೆ. ಈ ಮೂಲಕ ಎಐ ವ್ಯವಸ್ಥೆಯನ್ನು ಪ್ರತಿ ಸರ್ಕಾರ ಶಾಲೆಗಳಲ್ಲಿ ಅಳವಡಿಕೆ ಮಾಡಿಕೊಳ್ಳಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಎಐ ಮೂಲಕ ಹೊಸ ಕ್ರಾಂತಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಮುಖ ನೀತಿ ಬದಲಾವಣೆ ಇದಾಗಿದ್ದು, ಹೊಸ ಕ್ರಾಂತಿ ಮೂಡಿಸಲಿದೆ. ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಪ್ರಕ್ರಿಯೆ ಇನ್ನುಮುಂದೆ ಫೇಸ್ ರೀಡ್ ಎಂದರೆ ಮುಖ ಗುರುತಿಸುವಿಕೆ ವ್ಯವಸ್ಥೆ ಮೂಲಕವೇ ನಡೆಯಲಿದೆ. ರಾಜ್ಯಾದ್ಯಂತ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಇದು ಕಡ್ಡಾಯವಾಗಿದೆ. ಹಲವು ವರ್ಷಗಳಿಂದ ಶಿಕ್ಷಣ ಇಲಾಖೆಯು ನಕಲಿ ಹಾಜರಾತಿ, ಕೆಲಸಕ್ಕೆ ಲೇಟ್ ಆಗಿ ಬರುವುದು, ಮತ್ತು ರಿಜಿಸ್ಟರ್ ತೋರಿಸುವ ಹಾಗೂ ತರಗತಿಗಳಲ್ಲಿ ಇರುವ ವಿದ್ಯಾರ್ಥಿಗಳ ಸಂಖ್ಯೆಗೂ ವ್ಯತ್ಯಾಸ ಇರುತ್ತಿತ್ತು. ಆದರೆ ಈಗ ಎಲ್ಲಾ ಸರ್ಕಾರ ಶಾಲೆಗಳಲ್ಲಿ ಹಾಜರಾತಿ ಸ್ವರೂಪ ಎಐ ಮೂಲಕ ಫೇಸ್ ರೀಡಿಂಗ್ ಟೆಕ್ನಾಲಜಿ ಬಳಸಿ ಹೊಸ ಕ್ರಾಂತಿ ಸೃಷ್ಟಿಸಲು ಮುಂದಾಗಿದೆ ಶಿಕ್ಷಣ ಇಲಾಖೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications