ದಿಗ್ವಿಜಯ್ ಸಿಂಗ್ರಿಂದ ಸಿದ್ದರಾಮಯ್ಯಗೆ ಫೋನ್ ಕರೆ!
ಬೆಂಗಳೂರು, ಏಪ್ರಿಲ್ 16 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೆಹಲಿಯಿಂದ ಸೂಚನೆಯೊಂದು ಬಂದಿದೆ. ಮ್ಯಾಟ್ರಿಕ್ಸ್ ಇಮೇಜಿಂಗ್ ಸಲ್ಯೂಷನ್ಸ್ ಲಿಮಿಟೆಡ್ ನಿರ್ದೇಶಕ ಸ್ಥಾನದಿಂದ ಪುತ್ರ ಡಾ. ಯತೀಂದ್ರ ಅವರ ರಾಜೀನಾಮೆ ಪಡೆಯಿರಿ ಎಂದು ದೂರವಾಣಿ ಕರೆ ಮಾಡಿ ಸೂಚನೆ ನೀಡಲಾಗಿದೆ.
ಡಾ.ಯತೀಂದ್ರ ಅವರು ನಿರ್ದೇಶಕರಾದ ಬಳಿಕ ಮ್ಯಾಟ್ರಿಕ್ಸ್ ಇಮೇಜಿಂಗ್ ಸಲ್ಯೂಷನ್ಸ್ ಲಿಮಿಟೆಡ್ ಮಾಡಿರುವ ಮ್ಯಾಜಿಕ್ ಈಗ ಹೈಕಮಾಂಡ್ ಅಂಗಳ ತಲುಪಿದೆ. ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಪುತ್ರನ ರಾಜೀನಾಮೆ ಪಡೆಯಲು ಸೂಚನೆ ಕೊಟ್ಟಿದ್ದಾರೆ. [ಯತೀಂದ್ರರ 'ಮ್ಯಾಟ್ರಿಕ್ಸ್' ಹಿನ್ನಲೆ ಏನು?]

ಡಾ.ಯತೀಂದ್ರ ಮತ್ತು ಸಿದ್ದರಾಮಯ್ಯ ಅವರು ಆಸ್ಪತ್ರೆಗಳಲ್ಲಿ ಲ್ಯಾಬ್ ಸ್ಥಾಪನೆ ಮಾಡಲು ನೀಡಿರುವ ಟೆಂಡರ್ನಲ್ಲಿ ಲೋಪವಾಗಿಲ್ಲ ಎಂದು ಸ್ಪಷ್ಟನೆಗಳನ್ನು ನೀಡುತ್ತಲೇ ಇದ್ದಾರೆ. ಆದರೆ, ಪ್ರತಿಪಕ್ಷಗಳು ಒಂದೇ ಕಂಪನಿಗೆ ಮೂರು ಸರ್ಕಾರಿ ಟೆಂಡರ್ ಸಿಕ್ಕಿದ್ದು ಹೇಗೆ? ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸುತ್ತಿವೆ. [ಸಿದ್ದರಾಮಯ್ಯ ಮಗನಿಗೆ ಸಿಕ್ಕಿದ್ದು ಇದೊಂದೇ ಪ್ರಾಜೆಕ್ಟಾ?]
ಟೆಂಡರ್ ನೀಡಿರುವ ವಿವಾದ ರಾಷ್ಟ್ರೀಯ ವಾಹಿನಿಗಳಲ್ಲಿಯೂ ಸುದ್ದಿಯಾಗುತ್ತಿದೆ. ಐದು ರಾಜ್ಯಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬ್ಯುಸಿಯಾಗಿರುವ ಹೈಕಮಾಂಡ್ ನಾಯಕರು, ಅದರ ನಡುವೆಯೂ ಕರ್ನಾಟಕದ ವಿದ್ಯಮಾನಗಳನ್ನು ಗಮನಿಸಿ, ಸೂಚನೆ ಕೊಟ್ಟಿದ್ದಾರೆ.
ಏನಿದು ವಿವಾದ? : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಮ್ಯಾಟ್ರಿಕ್ಸ್ ಇಮೇಜಿಂಗ್ ಸಲ್ಯೂಷನ್ಸ್ ಲಿಮಿಟೆಡ್ ನಿರ್ದೇಶಕರಾದ ಬಳಿಕ ಮೂರು ಪ್ರಮುಖ ಸರ್ಕಾರಿ ಟೆಂಡರ್ಗಳು ಈ ಸಂಸ್ಥೆಯ ಪಾಲಾಗಿವೆ. 2014ರ ಸೆಪ್ಟೆಂಬರ್ 8ರಂದು ಯತೀಂದ್ರ ಅವರು ನಿರ್ದೇಶಕರಾಗುತ್ತಾರೆ.
2014ರ ನವೆಂಬರ್ 18ರಂದು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಲ್ಯಾಬ್ ತೆರೆಯಲು ಟೆಂಡರ್ ಕರೆಯಲಾಯಿತು. ಈ ಟೆಂಡರ್ ಮ್ಯಾಟ್ರಿಕ್ಸ್ ಇಮೇಜಿಂಗ್ ಸಲ್ಯೂಷನ್ಸ್ ಲಿಮಿಟೆಡ್ ಪಾಲಾಯಿತು. ಕಲಬುರಗಿಯ ಜಯದೇವ ಆಸ್ಪತ್ರೆಯಲ್ಲಿ ಲ್ಯಾಬ್ ತೆರೆಯಲು ಕರೆದ ಟೆಂಡರ್ ಲಿಮಿಟೆಡ್ ಪಾಲಾಯಿತು. ಪುನಃ 2015ರ ಅಕ್ಟೋಬರ್ನಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಲ್ಯಾಬ್ ಸ್ಥಾಪನೆ ಮಾಡುವ ಟೆಂಡರ್ ಅನ್ನು ಕಂಪನಿಗೆ ನೀಡಲಾಯಿತು.
ಪ್ರತಿಪಕ್ಷಗಳು ಸಿದ್ದರಾಮಯ್ಯ ಅವರ ಪುತ್ರ ವ್ಯಾವೋಹದ ಬಗ್ಗೆ ಟೀಕಾ ಪ್ರಹಾರ ನಡೆಸುತ್ತಿವೆ. ಟೆಂಡರ್ ನೀಡಿರುವ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತಿವೆ. ಆದ್ದರಿಂದ, ನಿರ್ದೇಶಕರ ಸ್ಥಾನಕ್ಕೆ ಡಾ.ಯತೀಂದ್ರ ಅವರು ರಾಜೀನಾಮೆ ನೀಡಲಿ ಎಂದು ಹೈಕಮಾಂಡ್ ಸೂಚನೆ ಕೊಟ್ಟಿದೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications